AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. 9ರಿಂದ 12ನೇ […]

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 29, 2020 | 9:05 PM

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಮತ್ತು ಪೋಷಕರ ಅನುಮತಿ ಪಡೆದು ಶಾಲೆಗಳಿಗೆ ಭೇಟಿ ನೀಡಬಹುದು. ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನಡೆಸುವುದಕ್ಕೆ, ಉದ್ಯಮಶೀಲತಾ ತರಬೇತಿ ನಡೆಸುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಪಿಹೆಚ್​ಡಿ, ತಾಂತ್ರಿಕ, ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡುವುದಕ್ಕೆ ಅವಕಾಶವಿದೆ.

ರಾಜಕೀಯ, ಧಾರ್ಮಿಕ, ಮನರಂಜನಾತ್ಮಕ, ಕ್ರೀಡೆ ಮತ್ತು ಸಾಂಸ್ಕೃತಿಕ ಸಭೆ ಸಮಾರಂಭಗಳಲ್ಲಿ 100 ಜನರು ಸೇರಲು ಅವಕಾಶವಿದೆ. ಆದರೆ, ಈ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಸರ್​ಗಳನ್ನು ಬಳಸಬೇಕು.

ಸೆಪ್ಟೆಂಬರ್ 21ರಿಂದ ಬಯಲು ರಂಗಮಂದಿರ​ ತೆರೆಯಲು ಅವಕಾಶವಿದೆ. ಆದರೆ ಚಿತ್ರಮಂದಿರ, ಸ್ವಿಮ್ಮಿಂಗ್​ಪೂಲ್​ಗಳನ್ನು ಇನ್ನೂ ತೆರೆಯುವಂತಿಲ್ಲ.

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್