AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. 9ರಿಂದ 12ನೇ […]

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 29, 2020 | 9:05 PM

Share

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಮತ್ತು ಪೋಷಕರ ಅನುಮತಿ ಪಡೆದು ಶಾಲೆಗಳಿಗೆ ಭೇಟಿ ನೀಡಬಹುದು. ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನಡೆಸುವುದಕ್ಕೆ, ಉದ್ಯಮಶೀಲತಾ ತರಬೇತಿ ನಡೆಸುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಪಿಹೆಚ್​ಡಿ, ತಾಂತ್ರಿಕ, ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡುವುದಕ್ಕೆ ಅವಕಾಶವಿದೆ.

ರಾಜಕೀಯ, ಧಾರ್ಮಿಕ, ಮನರಂಜನಾತ್ಮಕ, ಕ್ರೀಡೆ ಮತ್ತು ಸಾಂಸ್ಕೃತಿಕ ಸಭೆ ಸಮಾರಂಭಗಳಲ್ಲಿ 100 ಜನರು ಸೇರಲು ಅವಕಾಶವಿದೆ. ಆದರೆ, ಈ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಸರ್​ಗಳನ್ನು ಬಳಸಬೇಕು.

ಸೆಪ್ಟೆಂಬರ್ 21ರಿಂದ ಬಯಲು ರಂಗಮಂದಿರ​ ತೆರೆಯಲು ಅವಕಾಶವಿದೆ. ಆದರೆ ಚಿತ್ರಮಂದಿರ, ಸ್ವಿಮ್ಮಿಂಗ್​ಪೂಲ್​ಗಳನ್ನು ಇನ್ನೂ ತೆರೆಯುವಂತಿಲ್ಲ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್