AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. 9ರಿಂದ 12ನೇ […]

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 29, 2020 | 9:05 PM

Share

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಮತ್ತು ಪೋಷಕರ ಅನುಮತಿ ಪಡೆದು ಶಾಲೆಗಳಿಗೆ ಭೇಟಿ ನೀಡಬಹುದು. ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನಡೆಸುವುದಕ್ಕೆ, ಉದ್ಯಮಶೀಲತಾ ತರಬೇತಿ ನಡೆಸುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಪಿಹೆಚ್​ಡಿ, ತಾಂತ್ರಿಕ, ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡುವುದಕ್ಕೆ ಅವಕಾಶವಿದೆ.

ರಾಜಕೀಯ, ಧಾರ್ಮಿಕ, ಮನರಂಜನಾತ್ಮಕ, ಕ್ರೀಡೆ ಮತ್ತು ಸಾಂಸ್ಕೃತಿಕ ಸಭೆ ಸಮಾರಂಭಗಳಲ್ಲಿ 100 ಜನರು ಸೇರಲು ಅವಕಾಶವಿದೆ. ಆದರೆ, ಈ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಸರ್​ಗಳನ್ನು ಬಳಸಬೇಕು.

ಸೆಪ್ಟೆಂಬರ್ 21ರಿಂದ ಬಯಲು ರಂಗಮಂದಿರ​ ತೆರೆಯಲು ಅವಕಾಶವಿದೆ. ಆದರೆ ಚಿತ್ರಮಂದಿರ, ಸ್ವಿಮ್ಮಿಂಗ್​ಪೂಲ್​ಗಳನ್ನು ಇನ್ನೂ ತೆರೆಯುವಂತಿಲ್ಲ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ