AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. 9ರಿಂದ 12ನೇ […]

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 29, 2020 | 9:05 PM

Share

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಮತ್ತು ಪೋಷಕರ ಅನುಮತಿ ಪಡೆದು ಶಾಲೆಗಳಿಗೆ ಭೇಟಿ ನೀಡಬಹುದು. ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನಡೆಸುವುದಕ್ಕೆ, ಉದ್ಯಮಶೀಲತಾ ತರಬೇತಿ ನಡೆಸುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಪಿಹೆಚ್​ಡಿ, ತಾಂತ್ರಿಕ, ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡುವುದಕ್ಕೆ ಅವಕಾಶವಿದೆ.

ರಾಜಕೀಯ, ಧಾರ್ಮಿಕ, ಮನರಂಜನಾತ್ಮಕ, ಕ್ರೀಡೆ ಮತ್ತು ಸಾಂಸ್ಕೃತಿಕ ಸಭೆ ಸಮಾರಂಭಗಳಲ್ಲಿ 100 ಜನರು ಸೇರಲು ಅವಕಾಶವಿದೆ. ಆದರೆ, ಈ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಸರ್​ಗಳನ್ನು ಬಳಸಬೇಕು.

ಸೆಪ್ಟೆಂಬರ್ 21ರಿಂದ ಬಯಲು ರಂಗಮಂದಿರ​ ತೆರೆಯಲು ಅವಕಾಶವಿದೆ. ಆದರೆ ಚಿತ್ರಮಂದಿರ, ಸ್ವಿಮ್ಮಿಂಗ್​ಪೂಲ್​ಗಳನ್ನು ಇನ್ನೂ ತೆರೆಯುವಂತಿಲ್ಲ.

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ