AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. 9ರಿಂದ 12ನೇ […]

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 29, 2020 | 9:05 PM

Share

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಮತ್ತು ಪೋಷಕರ ಅನುಮತಿ ಪಡೆದು ಶಾಲೆಗಳಿಗೆ ಭೇಟಿ ನೀಡಬಹುದು. ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನಡೆಸುವುದಕ್ಕೆ, ಉದ್ಯಮಶೀಲತಾ ತರಬೇತಿ ನಡೆಸುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಪಿಹೆಚ್​ಡಿ, ತಾಂತ್ರಿಕ, ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡುವುದಕ್ಕೆ ಅವಕಾಶವಿದೆ.

ರಾಜಕೀಯ, ಧಾರ್ಮಿಕ, ಮನರಂಜನಾತ್ಮಕ, ಕ್ರೀಡೆ ಮತ್ತು ಸಾಂಸ್ಕೃತಿಕ ಸಭೆ ಸಮಾರಂಭಗಳಲ್ಲಿ 100 ಜನರು ಸೇರಲು ಅವಕಾಶವಿದೆ. ಆದರೆ, ಈ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಸರ್​ಗಳನ್ನು ಬಳಸಬೇಕು.

ಸೆಪ್ಟೆಂಬರ್ 21ರಿಂದ ಬಯಲು ರಂಗಮಂದಿರ​ ತೆರೆಯಲು ಅವಕಾಶವಿದೆ. ಆದರೆ ಚಿತ್ರಮಂದಿರ, ಸ್ವಿಮ್ಮಿಂಗ್​ಪೂಲ್​ಗಳನ್ನು ಇನ್ನೂ ತೆರೆಯುವಂತಿಲ್ಲ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.