AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. 9ರಿಂದ 12ನೇ […]

ಅನ್​ಲಾಕ್ 4.0: ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 29, 2020 | 9:05 PM

Share

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಫೀಡ್​ಬ್ಯಾಕ್ ಪಡೆದುಕೊಂಡ ನಂತರ ಸೆಪ್ಟೆಂಬರ್ 1, 2020 ರಿಂದ ಆರಂಭಗೊಳ್ಳುವ ಅನಲಾಕ್ 4.0 ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋಸೇವೆ ಹಂತಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್​ 30ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ. ಆಯಾ ಶಾಲೆ, ಕಾಲೇಜುಗಳ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬಹುದು. ಆನ್​ಲೈನ್ ಶಿಕ್ಷಣವನ್ನು ಜಾರಿಯಲ್ಲಿಡುವುದಲ್ಲದೆ, ಅದನ್ನು ಪ್ರೋತ್ಸಾಹಿಸಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಮತ್ತು ಪೋಷಕರ ಅನುಮತಿ ಪಡೆದು ಶಾಲೆಗಳಿಗೆ ಭೇಟಿ ನೀಡಬಹುದು. ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನಡೆಸುವುದಕ್ಕೆ, ಉದ್ಯಮಶೀಲತಾ ತರಬೇತಿ ನಡೆಸುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಪಿಹೆಚ್​ಡಿ, ತಾಂತ್ರಿಕ, ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡುವುದಕ್ಕೆ ಅವಕಾಶವಿದೆ.

ರಾಜಕೀಯ, ಧಾರ್ಮಿಕ, ಮನರಂಜನಾತ್ಮಕ, ಕ್ರೀಡೆ ಮತ್ತು ಸಾಂಸ್ಕೃತಿಕ ಸಭೆ ಸಮಾರಂಭಗಳಲ್ಲಿ 100 ಜನರು ಸೇರಲು ಅವಕಾಶವಿದೆ. ಆದರೆ, ಈ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಸರ್​ಗಳನ್ನು ಬಳಸಬೇಕು.

ಸೆಪ್ಟೆಂಬರ್ 21ರಿಂದ ಬಯಲು ರಂಗಮಂದಿರ​ ತೆರೆಯಲು ಅವಕಾಶವಿದೆ. ಆದರೆ ಚಿತ್ರಮಂದಿರ, ಸ್ವಿಮ್ಮಿಂಗ್​ಪೂಲ್​ಗಳನ್ನು ಇನ್ನೂ ತೆರೆಯುವಂತಿಲ್ಲ.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ