AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಅಲ್ಪಸಂಖ್ಯಾತರ ದಿನ: ಏನಿದರ ಹಿನ್ನೆಲೆ?

ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು ಇದೆ. ಧಾರ್ಮಿಕ, ಭಾಷೆ ಅಥವಾ ಜನಾಂಗೀಯ ವೈವಿಧ್ಯತೆಗಳಿದ್ದರೂ ಎಲ್ಲ ಪ್ರಜೆಗಳ ಹಕ್ಕುಗಳನ್ನು ನಮ್ಮ ಸಂವಿಧಾನ ಖಾತ್ರಿಪಡಿಸುತ್ತದೆ.

ಇಂದು ಅಲ್ಪಸಂಖ್ಯಾತರ ದಿನ: ಏನಿದರ ಹಿನ್ನೆಲೆ?
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Dec 18, 2020 | 6:12 PM

Share

ಜಗತ್ತಿನಲ್ಲಿರುವ ಪ್ರತಿಯೊಂದು ದೇಶದಲ್ಲಿಯೂ ಭಾಷೆ, ಸಂಸ್ಕೃತಿ ಅಥವಾ ಜನಾಂಗೀಯ ಅಲ್ಪಸಂಖ್ಯಾತರು ಇರುತ್ತಾರೆ. ಈ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಂದು ಸರ್ಕಾರಕ್ಕೂ ಸವಾಲಿನ ವಿಷಯವೇ ಆಗಿರುತ್ತದೆ. ನಮ್ಮ ದೇಶದಲ್ಲಿ ಪ್ರತಿವರ್ಷವು ಡಿ.18ರಂದು ಅಲ್ಪಸಂಖ್ಯಾತರ ದಿನಾಚರಣೆ ನಡೆಯುತ್ತದೆ. ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದೇ ಈ ದಿನದ ಉದ್ದೇಶ.

ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು ಇದೆ. ಧಾರ್ಮಿಕ, ಭಾಷೆ ಅಥವಾ ಜನಾಂಗೀಯ ವೈವಿಧ್ಯತೆಗಳಿದ್ದರೂ ಎಲ್ಲ ಪ್ರಜೆಗಳ ಹಕ್ಕುಗಳನ್ನು ನಮ್ಮ ಸಂವಿಧಾನ ಖಾತ್ರಿಪಡಿಸುತ್ತದೆ.

ಹಿನ್ನೆಲೆ ಏನು? ಡಿ.18, 2013ರಂದು ಭಾರತದಲ್ಲಿ ಮೊದಲ ಬಾರಿ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ ನಡೆಯಿತು. ಡಿ.18, 1992ರಂದು ವಿಶ್ವಸಂಸ್ಥೆಯು ಧಾರ್ಮಿಕ, ಭಾಷೆ, ರಾಷ್ಟ್ರೀಯ ಅಥವಾ ಜನಾಂಗೀಯ ಅಲ್ಪಸಂಖ್ಯಾತರಿಗೆ ಸೇರಿದ ವೈಯಕ್ತಿಕ ಹಕ್ಕುಗಳ ಹೇಳಿಕೆಯನ್ನು ಘೋಷಿಸಿತ್ತು. ಅಲ್ಪಸಂಖ್ಯಾತರ ಹಕ್ಕುಗಳನ್ನು ಸರ್ಕಾರಗಳು ಮತ್ತು ವೈಯಕ್ತಿಕ ನೆಲೆಗಟ್ಟಿನಲ್ಲಿ ಗೌರವಿಸಬೇಕು ಮತ್ತು ಸಂರಕ್ಷಿಸಬೇಕು ಎಂದು ವಿಶ್ವಸಂಸ್ಥೆಯು ಒತ್ತಿ ಹೇಳಿತ್ತು.

ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ 2006ರಲ್ಲಿ ದೇಶದಲ್ಲಿ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯವನ್ನು ಸ್ಥಾಪಿಸಲಾಯಿತು. ಈ ಸಚಿವಾಲಯವು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ರೂಪಿಸಲ್ಪಟ್ಟಿತ್ತು. ಭಾರತದಲ್ಲಿ ಅಲ್ಪಸಂಖ್ಯಾತರು ಎಂದು ಪರಿಗಣಿಸಿರುವ ಸಮುದಾಯಗಳು- ಕ್ರಿಶ್ಚಿಯನ್ನರು, ಮುಸ್ಲಿಮರು, ಸಿಖ್ಖರು, ಜೊರಾಸ್ಟ್ರಿಯನ್ನುರು (ಪಾರ್ಸಿಗಳು), ಜೈನರು ಮತ್ತು ಬೌದ್ಧರು. 2014ರ ನಂತರ ಜೈನರನ್ನೂ ಅಲ್ಪಸಂಖ್ಯಾತ ಸಮುದಾಯ ಎಂದು ಗುರುತಿಸಲಾಗಿದೆ.

2011ರ ಜನಗಣತಿ ಪ್ರಕಾರ ಭಾರತದಲ್ಲಿ ಶೇ 19.30 (23.37 ಕೋಟಿ) ಅಲ್ಪಸಂಖ್ಯಾತರಿದ್ದಾರೆ. ಇದರಲ್ಲಿ ಮುಸ್ಲಿಂ (ಶೇ 14.2), ಕ್ರೈಸ್ತರು (ಶೇ 2.3), ಸಿಖ್ (ಶೇ 1.3), ಬೌದ್ಧರು (ಶೇ 0.7), ಜೈನರು ಮತ್ತು ಪಾರ್ಸಿಗಳು ಶೇ 0.4ರಷ್ಟು ಇದ್ದಾರೆ.

ಅಂಜಲಿ ರಾಮಣ್ಣ ಬರಹ | ಲೈಂಗಿಕ ಅಲ್ಪಸಂಖ್ಯಾತರಿಗೆ ಅವರ ಹಕ್ಕು ಸಿಗುವಂತಾಗಲು ಪೊಲೀಸರು ಬದಲಾಗಬೇಕು

Published On - 6:07 pm, Fri, 18 December 20

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!