AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಲು ಬಡಿತ ಹೆಚ್ಚಾಗಿದೆ.. ಏನು ಮಾಡಬೇಕು, ಏನು ಮಾಡಬಾರದು?

ದೇಶಕ್ಕೆ ಮುಂಗಾರು ಕಾಲಿಟ್ಟಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದೆ. ಇಷ್ಟು ದಿನ ಬೇಸಿಗೆಯ ಸುಡು ಬಿಸಿಲು ಮತ್ತು ಲಾಕ್​ಡೌನ್​ನಿಂದ ಮನೆಯಲ್ಲೇ ಕಾಲಕಳೆಯುತ್ತಿದ್ದ ಜನರಿಗೆ ಸುರಿಯುತ್ತಿರುವ ಜಿಟಿಜಿಟಿ ಮಳೆ ಮನಸ್ಸಿಗೆ ಮುದ ನೀಡಿದೆ. ಆದರೆ, ಮಳೆಯ ಸೊಬಗನ್ನು ಎಂಜಾಯ್​ ಮಾಡಲು ಮನೆಯಿಂದ ಹೊರ ಹೋಗುವ ಮುನ್ನ ಜೋಕೆ. ಹಾಗೆಯೇ, ನಮ್ಮ ರೈತಾಪಿ ವರ್ಗವೂ ಸಿಡಿಲಿನ ಹೊಡೆತಕ್ಕೆ ಸಿಕ್ಕಿ ನರಳಾಡುವುದು ಸಾಮಾನ್ಯ. ಸಿಡಿಲಿಗೆ ಹೆಚ್ಚು ಬಲಿಯಾಗುವವರು ತೋಟ-ಹೊಲಗಳಲ್ಲಿ ಬಟಾಬಯಲಿನಲ್ಲಿರುವ ರೈತರೇ! ಯಾಕಂದ್ರೆ, ದೇಶದೆಲ್ಲೆಡೆ ಗುಡುಗು ಮತ್ತು ಸಿಡಿಲು ಸಹಿತ ಭಾರಿ ಮಳೆ […]

ಸಿಡಿಲು ಬಡಿತ ಹೆಚ್ಚಾಗಿದೆ.. ಏನು ಮಾಡಬೇಕು, ಏನು ಮಾಡಬಾರದು?
KUSHAL V
| Edited By: |

Updated on:Jul 06, 2020 | 3:01 PM

Share

ದೇಶಕ್ಕೆ ಮುಂಗಾರು ಕಾಲಿಟ್ಟಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದೆ. ಇಷ್ಟು ದಿನ ಬೇಸಿಗೆಯ ಸುಡು ಬಿಸಿಲು ಮತ್ತು ಲಾಕ್​ಡೌನ್​ನಿಂದ ಮನೆಯಲ್ಲೇ ಕಾಲಕಳೆಯುತ್ತಿದ್ದ ಜನರಿಗೆ ಸುರಿಯುತ್ತಿರುವ ಜಿಟಿಜಿಟಿ ಮಳೆ ಮನಸ್ಸಿಗೆ ಮುದ ನೀಡಿದೆ. ಆದರೆ, ಮಳೆಯ ಸೊಬಗನ್ನು ಎಂಜಾಯ್​ ಮಾಡಲು ಮನೆಯಿಂದ ಹೊರ ಹೋಗುವ ಮುನ್ನ ಜೋಕೆ. ಹಾಗೆಯೇ, ನಮ್ಮ ರೈತಾಪಿ ವರ್ಗವೂ ಸಿಡಿಲಿನ ಹೊಡೆತಕ್ಕೆ ಸಿಕ್ಕಿ ನರಳಾಡುವುದು ಸಾಮಾನ್ಯ. ಸಿಡಿಲಿಗೆ ಹೆಚ್ಚು ಬಲಿಯಾಗುವವರು ತೋಟ-ಹೊಲಗಳಲ್ಲಿ ಬಟಾಬಯಲಿನಲ್ಲಿರುವ ರೈತರೇ!

ಯಾಕಂದ್ರೆ, ದೇಶದೆಲ್ಲೆಡೆ ಗುಡುಗು ಮತ್ತು ಸಿಡಿಲು ಸಹಿತ ಭಾರಿ ಮಳೆ ಸುರಿಯಲಿದೆ ಎಂಬ ಮಾಹಿತಿ ತಿಳಿದುಬಂದಿದೆ. ಹಾಗಾಗಿ, ರಾಷ್ಟ್ರೀಯ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರವು (National Disaster Management Authority) ಸಾರ್ವಜನಿಕರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಸಿಡಿಲು ಮತ್ತು ಮಿಂಚಿನ ಆರ್ಭಟದ ವೇಳೆ ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನು ಬಿಡುಗಡೆ ಮಾಡಿದೆ.

ಅಂತೆಯೇ ನಿಮ್ಮ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಗುಡುಗು ಮಳೆ ಸಂಭವಿಸುವಂತಿದ್ದರೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹೀಗಿವೆ. 1. ಮನೆಯಲ್ಲಿರುವ ಎಲ್ಲಾ ವಿದ್ಯುತ್​ ಉಪಕರಣಗಳ ಬಂದ್​ ಮಾಡಿ ಅವುಗಳ ಪ್ಲಗ್​ಗಳನ್ನ ಸಾಕೆಟ್​ನಿಂದ ಬಿಚ್ಚಿಡಿ 2. ಗುಡುಗಿನ ವೇಳೆ ಲ್ಯಾಂಡ್​ಲೈನ್​ ಫೋನ್​ಗಳನ್ನ ಬಳಸಬೇಡಿ 3. ಯಾವುದೇ ಕಬ್ಬಿಣದ ಸಾಮಾನು ಮುಟ್ಟಬೇಡಿ 4. ಹರಿಯುವ ನೀರನ್ನು ಬಳಸದಿರಿ 5. ಸುರಿವ ಮಳೆಯಿಂದ ತಪ್ಪಿಸಿಕೊಳ್ಳಲು ಮರಗಳ ಕೆಳಗಡೆ ಆಶ್ರಯ ಪಡೆಯಬೇಡಿ 6. ಗುಂಪುಗುಂಪಾಗಿ ನಿಲ್ಲದೆ, ಏಕಾಂಗಿಯಾಗಿ ನಿಲ್ಲುವುದು ಸೂಕ್ತ 7. ಉಕ್ಕು ಅಥವಾ ತಗಡಿನ ಶೀಟುಗಳಿರುವ ಮೇಲ್ಛಾವಣಿಗಳಿಂದ ದೂರವಿರಿ 8. ಯಾವುದೇ ಲೋಹದ ವಸ್ತುಗಳನ್ನ ಮುಟ್ಟಬೇಡಿ 9. ವಿದ್ಯುತ್​ ಮತ್ತು ಟೆಲಿಫೋನ್​​ ತಂತಿಗಳಿಂದ ದೂರವಿರಿ 10. ಆದಷ್ಟು ಮನೆಯೊಳಗೆ ಅಥವಾ ಕಟ್ಟಡ ಒಳಗೆ ಇರುವುದು ಸೂಕ್ತ 11. ಒಂದು ವೇಳೆ ಆಚೆಯಿದ್ದರೆ ನೆಲದ ಮೇಲೆ ಕೂರಬೇಡಿ

ಈ ಮೇಲ್ಕಂಡ ಕ್ರಮಗಳನ್ನು ಕೈಗೊಂಡರೆ ಯಾವುದೇ ಪ್ರಾಣಾಪಾಯವು ಎದುರಾಗೋದಿಲ್ಲ ಎಂದು ಪ್ರಾಧಿಕಾರವು ಹೇಳಿದೆ.

Published On - 2:51 pm, Mon, 6 July 20

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್