ಸಿಡಿಲು ಬಡಿತ ಹೆಚ್ಚಾಗಿದೆ.. ಏನು ಮಾಡಬೇಕು, ಏನು ಮಾಡಬಾರದು?

ದೇಶಕ್ಕೆ ಮುಂಗಾರು ಕಾಲಿಟ್ಟಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದೆ. ಇಷ್ಟು ದಿನ ಬೇಸಿಗೆಯ ಸುಡು ಬಿಸಿಲು ಮತ್ತು ಲಾಕ್​ಡೌನ್​ನಿಂದ ಮನೆಯಲ್ಲೇ ಕಾಲಕಳೆಯುತ್ತಿದ್ದ ಜನರಿಗೆ ಸುರಿಯುತ್ತಿರುವ ಜಿಟಿಜಿಟಿ ಮಳೆ ಮನಸ್ಸಿಗೆ ಮುದ ನೀಡಿದೆ. ಆದರೆ, ಮಳೆಯ ಸೊಬಗನ್ನು ಎಂಜಾಯ್​ ಮಾಡಲು ಮನೆಯಿಂದ ಹೊರ ಹೋಗುವ ಮುನ್ನ ಜೋಕೆ. ಹಾಗೆಯೇ, ನಮ್ಮ ರೈತಾಪಿ ವರ್ಗವೂ ಸಿಡಿಲಿನ ಹೊಡೆತಕ್ಕೆ ಸಿಕ್ಕಿ ನರಳಾಡುವುದು ಸಾಮಾನ್ಯ. ಸಿಡಿಲಿಗೆ ಹೆಚ್ಚು ಬಲಿಯಾಗುವವರು ತೋಟ-ಹೊಲಗಳಲ್ಲಿ ಬಟಾಬಯಲಿನಲ್ಲಿರುವ ರೈತರೇ! ಯಾಕಂದ್ರೆ, ದೇಶದೆಲ್ಲೆಡೆ ಗುಡುಗು ಮತ್ತು ಸಿಡಿಲು ಸಹಿತ ಭಾರಿ ಮಳೆ […]

ಸಿಡಿಲು ಬಡಿತ ಹೆಚ್ಚಾಗಿದೆ.. ಏನು ಮಾಡಬೇಕು, ಏನು ಮಾಡಬಾರದು?
Follow us
| Updated By:

Updated on:Jul 06, 2020 | 3:01 PM

ದೇಶಕ್ಕೆ ಮುಂಗಾರು ಕಾಲಿಟ್ಟಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದೆ. ಇಷ್ಟು ದಿನ ಬೇಸಿಗೆಯ ಸುಡು ಬಿಸಿಲು ಮತ್ತು ಲಾಕ್​ಡೌನ್​ನಿಂದ ಮನೆಯಲ್ಲೇ ಕಾಲಕಳೆಯುತ್ತಿದ್ದ ಜನರಿಗೆ ಸುರಿಯುತ್ತಿರುವ ಜಿಟಿಜಿಟಿ ಮಳೆ ಮನಸ್ಸಿಗೆ ಮುದ ನೀಡಿದೆ. ಆದರೆ, ಮಳೆಯ ಸೊಬಗನ್ನು ಎಂಜಾಯ್​ ಮಾಡಲು ಮನೆಯಿಂದ ಹೊರ ಹೋಗುವ ಮುನ್ನ ಜೋಕೆ. ಹಾಗೆಯೇ, ನಮ್ಮ ರೈತಾಪಿ ವರ್ಗವೂ ಸಿಡಿಲಿನ ಹೊಡೆತಕ್ಕೆ ಸಿಕ್ಕಿ ನರಳಾಡುವುದು ಸಾಮಾನ್ಯ. ಸಿಡಿಲಿಗೆ ಹೆಚ್ಚು ಬಲಿಯಾಗುವವರು ತೋಟ-ಹೊಲಗಳಲ್ಲಿ ಬಟಾಬಯಲಿನಲ್ಲಿರುವ ರೈತರೇ!

ಯಾಕಂದ್ರೆ, ದೇಶದೆಲ್ಲೆಡೆ ಗುಡುಗು ಮತ್ತು ಸಿಡಿಲು ಸಹಿತ ಭಾರಿ ಮಳೆ ಸುರಿಯಲಿದೆ ಎಂಬ ಮಾಹಿತಿ ತಿಳಿದುಬಂದಿದೆ. ಹಾಗಾಗಿ, ರಾಷ್ಟ್ರೀಯ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರವು (National Disaster Management Authority) ಸಾರ್ವಜನಿಕರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಸಿಡಿಲು ಮತ್ತು ಮಿಂಚಿನ ಆರ್ಭಟದ ವೇಳೆ ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನು ಬಿಡುಗಡೆ ಮಾಡಿದೆ.

ಅಂತೆಯೇ ನಿಮ್ಮ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಗುಡುಗು ಮಳೆ ಸಂಭವಿಸುವಂತಿದ್ದರೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹೀಗಿವೆ. 1. ಮನೆಯಲ್ಲಿರುವ ಎಲ್ಲಾ ವಿದ್ಯುತ್​ ಉಪಕರಣಗಳ ಬಂದ್​ ಮಾಡಿ ಅವುಗಳ ಪ್ಲಗ್​ಗಳನ್ನ ಸಾಕೆಟ್​ನಿಂದ ಬಿಚ್ಚಿಡಿ 2. ಗುಡುಗಿನ ವೇಳೆ ಲ್ಯಾಂಡ್​ಲೈನ್​ ಫೋನ್​ಗಳನ್ನ ಬಳಸಬೇಡಿ 3. ಯಾವುದೇ ಕಬ್ಬಿಣದ ಸಾಮಾನು ಮುಟ್ಟಬೇಡಿ 4. ಹರಿಯುವ ನೀರನ್ನು ಬಳಸದಿರಿ 5. ಸುರಿವ ಮಳೆಯಿಂದ ತಪ್ಪಿಸಿಕೊಳ್ಳಲು ಮರಗಳ ಕೆಳಗಡೆ ಆಶ್ರಯ ಪಡೆಯಬೇಡಿ 6. ಗುಂಪುಗುಂಪಾಗಿ ನಿಲ್ಲದೆ, ಏಕಾಂಗಿಯಾಗಿ ನಿಲ್ಲುವುದು ಸೂಕ್ತ 7. ಉಕ್ಕು ಅಥವಾ ತಗಡಿನ ಶೀಟುಗಳಿರುವ ಮೇಲ್ಛಾವಣಿಗಳಿಂದ ದೂರವಿರಿ 8. ಯಾವುದೇ ಲೋಹದ ವಸ್ತುಗಳನ್ನ ಮುಟ್ಟಬೇಡಿ 9. ವಿದ್ಯುತ್​ ಮತ್ತು ಟೆಲಿಫೋನ್​​ ತಂತಿಗಳಿಂದ ದೂರವಿರಿ 10. ಆದಷ್ಟು ಮನೆಯೊಳಗೆ ಅಥವಾ ಕಟ್ಟಡ ಒಳಗೆ ಇರುವುದು ಸೂಕ್ತ 11. ಒಂದು ವೇಳೆ ಆಚೆಯಿದ್ದರೆ ನೆಲದ ಮೇಲೆ ಕೂರಬೇಡಿ

ಈ ಮೇಲ್ಕಂಡ ಕ್ರಮಗಳನ್ನು ಕೈಗೊಂಡರೆ ಯಾವುದೇ ಪ್ರಾಣಾಪಾಯವು ಎದುರಾಗೋದಿಲ್ಲ ಎಂದು ಪ್ರಾಧಿಕಾರವು ಹೇಳಿದೆ.

Published On - 2:51 pm, Mon, 6 July 20

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ