AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಎತ್ತರದ ದಾಖಲೆ ಬರೆದ ಮೌಂಟ್ ಎವೆರೆಸ್ಟ್: ಎತ್ತರ ಎಷ್ಟು ಹೆಚ್ಚಾಗಿದೆ?

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭಾರಿ ಭೂಕಂಪದ ನಂತರ ಪರ್ವತದ ಎತ್ತರ ಮೊದಲಿನಂತೆ ಇರಲು ಸಾಧ್ಯವಿಲ್ಲ ಎಂದು ವಿಶ್ವದ ಹಲವೆಡೆಗಳಿಂದ ಅಭಿಪ್ರಾಯ ವ್ಯಕ್ತವಾಗಿತ್ತು.

ಹೊಸ ಎತ್ತರದ ದಾಖಲೆ ಬರೆದ ಮೌಂಟ್ ಎವೆರೆಸ್ಟ್: ಎತ್ತರ ಎಷ್ಟು ಹೆಚ್ಚಾಗಿದೆ?
ಮೌಂಟ್ ಎವೆರೆಸ್ಟ್
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 08, 2020 | 3:54 PM

Share

ಕಠ್ಮಂಡು: ವಿಶ್ವದ ಅತ್ಯಂತ ಎತ್ತರದ ಪರ್ವತ ಶಿಖರ ಮೌಂಟ್​ ಎವೆರೆಸ್ಟ್​ನ ಎತ್ತರ 8848.86 ಮೀಟರ್ ಎಂದು ನೇಪಾಳ ವಿದೇಶಾಂಗ ಖಾತೆ ಸಚಿವ ಪ್ರದೀಪ್ ಕುಮಾರ್ ಗ್ಯಾವಲಿ ಮಂಗಳವಾರ ಘೋಷಿಸಿದರು.

ಈ ಹಿಂದಿನ ಲೆಕ್ಕಾಚಾರಗಳಿಗೆ ಹೋಲಿಸಿದರೆ ಹೊಸದಾಗಿ ಬೆಳಕಿಗೆ ಬಂದ ಮಾಹಿತಿ ಪ್ರಕಾರ ಮೌಂಟ್ ಎವೆರೆಸ್ಟ್​ನ ಒಟ್ಟು ಎತ್ತರವು 0.86 ಸೆಂಟಿಮೀಟರ್​ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭಾರಿ ಭೂಕಂಪದ ನಂತರ ಪರ್ವತದ ಎತ್ತರ ಮೊದಲಿನಂತೆ ಇರಲು ಸಾಧ್ಯವಿಲ್ಲ ಎಂದು ವಿಶ್ವದ ಹಲವೆಡೆಗಳಿಂದ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಊಹಾಪೋಹಗಳಿಗೆ ಇತಿಶ್ರೀ ಹೇಳಲು ಪರ್ವತವನ್ನು ಹೊಸದಾಗಿ ಅಳೆಯಲು ನೇಪಾಳ ಮುಂದಾಯಿತು.

ನೇಪಾಳಿ ಅಧಿಕಾರಿಗಳು ಮತ್ತು ತಜ್ಞರನ್ನು ಈ ಕಾರ್ಯದಲ್ಲಿ ತೊಡಗಿಸಿದ್ದರೂ ಚೀನಾದ ನೆರವನ್ನೂ ನೇಪಾಳ ಸರ್ಕಾರ ಬಳಸಿಕೊಂಡಿತ್ತು. 2019ರಲ್ಲಿ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್​ ನೇಪಾಳ ಭೇಟಿಯ ವೇಳೆ ಮೌಂಟ್ ಎವರೆಸ್ಟ್​ನ ಎತ್ತರವನ್ನು ಜಂಟಿಯಾಗಿ ಘೋಷಿಸುವ ಒಪ್ಪಂದಕ್ಕೆ ಸಹಿಹಾಕಿದ್ದರು.

ಮೌಂಟ್ ಎವೆರೆಸ್ಟ್​ನ ಎತ್ತರ 8,848 ಮೀಟರ್ ಎಂದು ಸರ್ವೆ ಆಫ್ ಇಂಡಿಯಾ 1954ರಲ್ಲಿ ಅಳೆದು ಘೋಷಿಸಿತ್ತು. ಈವರೆಗೆ ಮೌಂಟ್​ ಎವೆರೆಸ್ಟ್​ನ ಅಧಿಕೃತ ಎತ್ತರ ಇದು ಎಂದು ಜಗತ್ತು ನಂಬಿಕೊಂಡಿತ್ತು. ಮೌಂಟ್​ ಎವೆರೆಸ್ಟ್​ಗೆ ನೇಪಾಳದಲ್ಲಿ ಸಾಗರ್​ಮಾತಾ ಎಂದು ಕರೆಯಲಾಗುತ್ತದೆ.

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?