ಹೊಸ ಎತ್ತರದ ದಾಖಲೆ ಬರೆದ ಮೌಂಟ್ ಎವೆರೆಸ್ಟ್: ಎತ್ತರ ಎಷ್ಟು ಹೆಚ್ಚಾಗಿದೆ?

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭಾರಿ ಭೂಕಂಪದ ನಂತರ ಪರ್ವತದ ಎತ್ತರ ಮೊದಲಿನಂತೆ ಇರಲು ಸಾಧ್ಯವಿಲ್ಲ ಎಂದು ವಿಶ್ವದ ಹಲವೆಡೆಗಳಿಂದ ಅಭಿಪ್ರಾಯ ವ್ಯಕ್ತವಾಗಿತ್ತು.

ಹೊಸ ಎತ್ತರದ ದಾಖಲೆ ಬರೆದ ಮೌಂಟ್ ಎವೆರೆಸ್ಟ್: ಎತ್ತರ ಎಷ್ಟು ಹೆಚ್ಚಾಗಿದೆ?
ಮೌಂಟ್ ಎವೆರೆಸ್ಟ್
Follow us
|

Updated on: Dec 08, 2020 | 3:54 PM

ಕಠ್ಮಂಡು: ವಿಶ್ವದ ಅತ್ಯಂತ ಎತ್ತರದ ಪರ್ವತ ಶಿಖರ ಮೌಂಟ್​ ಎವೆರೆಸ್ಟ್​ನ ಎತ್ತರ 8848.86 ಮೀಟರ್ ಎಂದು ನೇಪಾಳ ವಿದೇಶಾಂಗ ಖಾತೆ ಸಚಿವ ಪ್ರದೀಪ್ ಕುಮಾರ್ ಗ್ಯಾವಲಿ ಮಂಗಳವಾರ ಘೋಷಿಸಿದರು.

ಈ ಹಿಂದಿನ ಲೆಕ್ಕಾಚಾರಗಳಿಗೆ ಹೋಲಿಸಿದರೆ ಹೊಸದಾಗಿ ಬೆಳಕಿಗೆ ಬಂದ ಮಾಹಿತಿ ಪ್ರಕಾರ ಮೌಂಟ್ ಎವೆರೆಸ್ಟ್​ನ ಒಟ್ಟು ಎತ್ತರವು 0.86 ಸೆಂಟಿಮೀಟರ್​ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭಾರಿ ಭೂಕಂಪದ ನಂತರ ಪರ್ವತದ ಎತ್ತರ ಮೊದಲಿನಂತೆ ಇರಲು ಸಾಧ್ಯವಿಲ್ಲ ಎಂದು ವಿಶ್ವದ ಹಲವೆಡೆಗಳಿಂದ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಊಹಾಪೋಹಗಳಿಗೆ ಇತಿಶ್ರೀ ಹೇಳಲು ಪರ್ವತವನ್ನು ಹೊಸದಾಗಿ ಅಳೆಯಲು ನೇಪಾಳ ಮುಂದಾಯಿತು.

ನೇಪಾಳಿ ಅಧಿಕಾರಿಗಳು ಮತ್ತು ತಜ್ಞರನ್ನು ಈ ಕಾರ್ಯದಲ್ಲಿ ತೊಡಗಿಸಿದ್ದರೂ ಚೀನಾದ ನೆರವನ್ನೂ ನೇಪಾಳ ಸರ್ಕಾರ ಬಳಸಿಕೊಂಡಿತ್ತು. 2019ರಲ್ಲಿ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್​ ನೇಪಾಳ ಭೇಟಿಯ ವೇಳೆ ಮೌಂಟ್ ಎವರೆಸ್ಟ್​ನ ಎತ್ತರವನ್ನು ಜಂಟಿಯಾಗಿ ಘೋಷಿಸುವ ಒಪ್ಪಂದಕ್ಕೆ ಸಹಿಹಾಕಿದ್ದರು.

ಮೌಂಟ್ ಎವೆರೆಸ್ಟ್​ನ ಎತ್ತರ 8,848 ಮೀಟರ್ ಎಂದು ಸರ್ವೆ ಆಫ್ ಇಂಡಿಯಾ 1954ರಲ್ಲಿ ಅಳೆದು ಘೋಷಿಸಿತ್ತು. ಈವರೆಗೆ ಮೌಂಟ್​ ಎವೆರೆಸ್ಟ್​ನ ಅಧಿಕೃತ ಎತ್ತರ ಇದು ಎಂದು ಜಗತ್ತು ನಂಬಿಕೊಂಡಿತ್ತು. ಮೌಂಟ್​ ಎವೆರೆಸ್ಟ್​ಗೆ ನೇಪಾಳದಲ್ಲಿ ಸಾಗರ್​ಮಾತಾ ಎಂದು ಕರೆಯಲಾಗುತ್ತದೆ.

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ