AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year Resolution | ಇನ್ನು ಇರುವಷ್ಟು ಕಾಲ ಇರುವಂತೆಯೇ ಇರಬೇಕೆಂದು ಅಂದುಕೊಂಡಿದ್ದೇನೆ: ಕತೆಗಾರ ಎಸ್​.ಸುರೇಂದ್ರನಾಥ್

ಎಲ್ಲರಿಗೂ ಸ್ವಾತಂತ್ರ್ಯ ಸಾಧ್ಯವಾಗಬೇಕು. ಆದರೆ ಸದ್ಯಕ್ಕೆ ಭಯದ ವಾತಾವರಣ ನಿವಾರಣೆಯಾಗುವ ಸನ್ನಿವೇಶ ಕಾಣೆ. ರಾಜ್ಯದಲ್ಲೂ, ದೇಶದಲ್ಲೂ ರಾಜಕೀಯವಾಗಿ ಪ್ರಸ್ತುತ ದಿವಾಳಿಯೆದ್ದಿದ್ದೇವೆ. ಯಾರನ್ನೂ ಯಾವ ಪಕ್ಷವನ್ನೂ ನಂಬುವ ಸ್ಥಿತಿಯಲ್ಲಿ ಭಾರತವಿಲ್ಲ. ಹಾಗಿದ್ದ ಮೇಲೆ ಬರುವ ವರ್ಷ ಏನಾದರೂ ಬದಲಾವಣೆ ಸಾಧ್ಯ ಎಂದು ನಿರೀಕ್ಷಿಸುವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

New Year Resolution | ಇನ್ನು ಇರುವಷ್ಟು ಕಾಲ ಇರುವಂತೆಯೇ ಇರಬೇಕೆಂದು ಅಂದುಕೊಂಡಿದ್ದೇನೆ: ಕತೆಗಾರ ಎಸ್​.ಸುರೇಂದ್ರನಾಥ್
ಕತೆಗಾರ ಎಸ್​.ಸುರೇಂದ್ರನಾಥ್
Skanda
| Edited By: |

Updated on: Dec 31, 2020 | 11:03 PM

Share

ಹೊಸ ವರ್ಷದಲ್ಲಿ ಒಂದಿಷ್ಟು ಹೊಸತನಗಳನ್ನು ಮೈಗೂಡಿಸಿಕೊಳ್ಳುವ ಕನಸು ಕಟ್ಟಿಕೊಳ್ಳುವುದು ಸಾಮಾನ್ಯ ಸಂಗತಿ. ವೈಯಕ್ತಿಕವಾಗಿ ನಾನು ಹೀಗೆ ಬದಲಾಗುತ್ತೇನೆ, ಸಮಾಜ ಹೀಗಾಗಬೇಕೆಂಬ ಆಸೆ ನನಗಿದೆ, ಸಮಾಜದ ಬದಲಾವಣೆಗೆ ನಾನು ಹೀಗೆ ಸಹಕರಿಸುತ್ತೇನೆ ಎನ್ನುವುದನ್ನು ಕತೆಗಾರ, ರಂಗ ನಿರ್ದೇಶಕ ಎಸ್.ಸುರೇಂದ್ರನಾಥ್ ಟಿವಿ9 ಕನ್ನಡ ಡಿಜಿಟಲ್ ಜೊತೆಗೆ ಹಂಚಿಕೊಂಡಿದ್ದು ಹೀಗೆ..

ವೈಯಕ್ತಿಕವಾಗಿ ನಾನು ಹೀಗೆ ಬದಲಾಗಬೇಕು ಅಂದುಕೊಂಡಿದ್ದೇನೆ ಇನ್ನು ಇರುವಷ್ಟು ಕಾಲ ಇರುವಂತೆಯೇ ಇರಬೇಕೆಂದು ಅಂದುಕೊಂಡಿದ್ದೇನೆ. ಬದಲಾವಣೆಗಳನ್ನು ನಿರೀಕ್ಷಿಸುವ ವಯಸ್ಸು ನನ್ನದಲ್ಲ. ಆದರೆ, ನನ್ನಿಂದ ‘ಏನಾದರೂ’ ಸಾಧ್ಯವಾಗುತ್ತದೆ ಎನ್ನುವುದಾದಲ್ಲಿ ಖಂಡಿತಾ ಆ ಮಟ್ಟಿಗೆ ಆ ದಿಕ್ಕಿನಲ್ಲಿ ಬದಲಾಗಲು ಪ್ರಯತ್ನಿಸುತ್ತೇನೆ. ಈ ವರ್ಷದ ಪಿಡುಗಿನಿಂದ ಆವರಿಸಿದ ಖಿನ್ನತೆ, ಅನಿಶ್ಚಿತತೆ ಮುಂದುವರೆದರೂ ನಗಲು ಸಾಧ್ಯವಾಗಬೇಕು ಅನಿಸುತ್ತದೆ.

ಸಮಾಜ, ರಾಜ್ಯ ಅಥವಾ ದೇಶದಲ್ಲಿ ಇಂಥ ಬದಲಾವಣೆ ಆಗಬೇಕು ಎಂದು ನಿರೀಕ್ಷಿಸುತ್ತೇನೆ ಎಲ್ಲರಿಗೂ ಸ್ವಾತಂತ್ರ್ಯ ಸಾಧ್ಯವಾಗಬೇಕು. ಸದ್ಯದ ಭಯಭೀತ ವಾತಾವರಣ ಇದೆಯಲ್ಲಾ.. ಅದು ಸಾಮಾಜಿಕವಾಗಿರಬಹುದು, ವೈಯಕ್ತಿಕವಾಗಿರಬಹುದು – ಅದು ಇಲ್ಲವಾಗಬೇಕು. ಆದರೆ ಸದ್ಯಕ್ಕೆ ಅದು ಸಾಧ್ಯವಾಗುವ ಸನ್ನಿವೇಶ ಕಾಣೆ. ರಾಜ್ಯದಲ್ಲೂ, ದೇಶದಲ್ಲೂ ರಾಜಕೀಯವಾಗಿ ಪ್ರಸ್ತುತ ದಿವಾಳಿಯೆದ್ದಿದ್ದೇವೆ. ಯಾರನ್ನೂ ಯಾವ ಪಕ್ಷವನ್ನೂ ನಂಬುವ ಸ್ಥಿತಿಯಲ್ಲಿ ಭಾರತವಿಲ್ಲ. ಹಾಗಿದ್ದ ಮೇಲೆ ಬರುವ ವರ್ಷ ಏನಾದರೂ ಬದಲಾವಣೆ ಸಾಧ್ಯ ಎಂದು ನಿರೀಕ್ಷಿಸುವುದು ನನ್ನಿಂದ ಸಾಧ್ಯವಾಗುತ್ತಿಲ್ಲ. ಆದರೆ, ಯಾವುದೇ ನಂಬಿಕೆಯಿಲ್ಲದೇ ಹೋದಲ್ಲಿ ಬದುಕು ದುರ್ಬರವಾಗುತ್ತದಲ್ಲವಾ? ಹಾಗಾಗಿ ಬದಲಾಗುತ್ತದೆ ಏನ್ನುವ ನಂಬಿಕೆ ಇಟ್ಟುಕೊಂಡಿದ್ದೇನೆ. ಗೆಳೆಯರಲ್ಲಿ ನಂಬಿಕೆ ಇದೆ. ಆತ್ಮೀಯರಲ್ಲಿ ನಂಬಿಕೆ ಇದೆ. ಅಂದುಕೊಂಡಿದ್ದು ಸಿಗಬಹುದೇನೋ..

ಅಂಥ ಬದಲಾವಣೆ ಸಮಾಜದಲ್ಲಿ ಕಾಣಲು ನಾನು ಏನು ಮಾಡಬಲ್ಲೆ? ಬರೆಯಬೇಕು. ನಾಟಕ ಮಾಡಬೇಕು. ಆ ಮೂಲಕ ಒಂದೈದಾರು ಜನಕ್ಕಾದರೂ ಸರಿಯೇ, ಹೇಳಬೇಕು. ಅವರನ್ನು ಮುಟ್ಟಬೇಕು. ಅಷ್ಟೇ…ಆದರೂ ‘ನಾನು’ ಅನ್ನುವುದಕ್ಕಿಂತಾ ‘ನಾವು’ ಅನ್ನುವುದೇ ಮೇಲು.

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್