AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷದ ಕೊನೆಯ ಚಂದ್ರಗ್ರಹಣ ಇಂದು ಯಾವ ಸಮಯಕ್ಕೆ ಗೋಚರ..? ಮುಂದಿನ ಚಂದ್ರಗ್ರಹಣ ಯಾವಾಗ ಗೊತ್ತಾ?

2020ರಲ್ಲಿ ಮೊದಲು ಜನವರಿ 10, ಎರಡನೇ ಬಾರಿ ಜೂನ್ 5 ಹಾಗೂ ಜುಲೈ 5 ರಂದು ಮೂರನೇ ಬಾರಿ ಚಂದ್ರ ಗ್ರಹಣ ಗೋಚರವಾಗಿತ್ತು. ಅದನ್ನು ಬಿಟ್ಟು ಇಂದು (ನವೆಂಬರ್ 30) ಗೋಚರವಾಗುವ ಪೆನಂಬ್ರಲ್ ಚಂದ್ರ ಗ್ರಹಣ ನಾಲ್ಕನೇ ಬಾರಿಯಾಗಿದ್ದು, ಮುಂದಿನ ಚಂದ್ರ ಗ್ರಹಣ 2021ರ ಮೇ 26ರಂದು ನಡೆಯುತ್ತದೆ.

ವರ್ಷದ ಕೊನೆಯ ಚಂದ್ರಗ್ರಹಣ ಇಂದು ಯಾವ ಸಮಯಕ್ಕೆ ಗೋಚರ..? ಮುಂದಿನ ಚಂದ್ರಗ್ರಹಣ ಯಾವಾಗ ಗೊತ್ತಾ?
ಗ್ರಹಣದ ವೇಳೆಯಲ್ಲಿ ದಿಗಂತದ ಕೆಳಗೆ ಚಂದ್ರ ಇರುವ ಕಾರಣ ಭಾರತದಲ್ಲಿ ಗೋಚರವಾಗುವುದಿಲ್ಲ.
sandhya thejappa
| Edited By: |

Updated on:Nov 30, 2020 | 12:38 PM

Share

ಇಂದು ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ಆರಂಭವಾಗಿ ಸಂಜೆ 5 ಗಂಟೆ 22 ನಿಮಿಷಕ್ಕೆ ಮುಗಿಯುವ ಚಂದ್ರಗ್ರಹಣ ವರ್ಷದ ನಾಲ್ಕನೇ ಹಾಗೂ ಕೊನೆಯ ಗ್ರಹಣವಾಗಿದ್ದು, ಗ್ರಹಣದ ವೇಳೆಯಲ್ಲಿ ದಿಗಂತದ ಕೆಳಗೆ ಚಂದ್ರ ಇರುವ ಕಾರಣ ಭಾರತದಲ್ಲಿ ಗೋಚರವಾಗುವುದಿಲ್ಲ.

2020ರಲ್ಲಿ ಮೊದಲು ಜನವರಿ 10, ಎರಡನೇ ಬಾರಿ ಜೂನ್ 5 ಹಾಗೂ ಜುಲೈ 5 ರಂದು ಮೂರನೇ ಬಾರಿ ಚಂದ್ರಗ್ರಹಣ ಗೋಚರವಾಗಿತ್ತು. ಅದನ್ನು ಬಿಟ್ಟು ಇಂದು (ನವೆಂಬರ್ 30) ಗೋಚರವಾಗುವ ಪೆನಂಬ್ರಲ್ ಚಂದ್ರಗ್ರಹಣ ನಾಲ್ಕನೇ ಬಾರಿಯಾಗಿದ್ದು, ಮುಂದಿನ ಚಂದ್ರಗ್ರಹಣ 2021ರ ಮೇ 26ರಂದು ನಡೆಯುತ್ತದೆ.

ಚಂದ್ರಗ್ರಹಣಕ್ಕೆ ಕಾರಣ?

ಚಂದ್ರ ಸ್ವಂತ ಬೆಳಕನ್ನು ಹೊಂದಿಲ್ಲ. ಸೂರ್ಯನ ಬೆಳಕಿನಿಂದ ಚಂದ್ರ ಪ್ರತಿದಿನ ಗೋಚರವಾಗುವುದು. ಚಂದ್ರಗ್ರಹಣದ ಸಮಯದಲ್ಲಿ ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಬರುತ್ತದೆ. ಸೂರ್ಯನ ಬೆಳಕು ಚಂದ್ರನನ್ನು ತಲುಪಲು ಭೂಮಿ ಅಡ್ಡವಾಗಿರುವುದರಿಂದ ಚಂದ್ರನ ಅರ್ಧ ಭಾಗ ಅಥವಾ ಸಂಪೂರ್ಣವಾಗಿ ಮುಚ್ಚುತ್ತದೆ. ಪೆನಂಬ್ರಲ್ ಚಂದ್ರಗ್ರಹಣದ ಸಮಯದಲ್ಲಿ ಚಂದ್ರನು ಭೂಮಿಯ ನೆರಳಿನ ಹೊರ ಭಾಗದ ಮೂಲಕ ಚಲಿಸುವುದರಿಂದ ಬಹಳ ಮುಸುಕಾಗಿರುತ್ತದೆ.

ಮುಂಬರುವ ಪೆನಂಬ್ರಲ್ ಚಂದ್ರಗ್ರಹಣ ಯುರೋಪ್ ಮತ್ತು ಅಮೇರಿಕ ಸೇರಿದಂತೆ ವಿಶ್ವದ ಹಲವು ಭಾಗಗಳಲ್ಲಿ ಗೋಚರವಾಗುತ್ತದೆ. ನವೆಂಬರ್ ಚಂದ್ರಗ್ರಹಣವನ್ನು ವಿಶ್ವದ ಹಲವು ಕಡೆಗಳಲ್ಲಿ ಬೀವರ್ ಮೂನ್ ಎಂದು ಕರೆದರೆ, ಇನ್ನೂ ಕೆಲವು ಕಡೆಗಳಲ್ಲಿ ಫ್ರಾಸ್ಟಿ ಮೂನ್ ಅಥವಾ ಓಕ್ ಮೂನ್ ಎಂದು ಕರೆಯುತ್ತಾರೆ.

ಇದನ್ನೂ ಓದಿ:  ಅರೆ ನೆರಳು ಚಂದ್ರಗ್ರಹಣದಿಂದ ಕಾದಿದಿಯಾ ಮಹಾ ಕಂಟಕ?

Published On - 12:31 pm, Mon, 30 November 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?