Rama Navami 2021: ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಹುಟ್ಟುಹಬ್ಬವನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಆಚರಣೆಯ ಪದ್ಧತಿ

| Updated By: shruti hegde

Updated on: Apr 21, 2021 | 9:11 AM

ಶ್ರೀ ರಾಮನವಮಿ ಹಿಂದೂ ದೇವರಾದ ರಾಮನ ಹುಟ್ಟಿದ ದಿನ. ಶ್ರೀ ರಾಮ ರಾಮಾಯಣದ ಕಥಾ ನಾಯಕ ಹಾಗೂ ಆದಿಕಾಲದ ಭಾರತದ ಅಯೋಧ್ಯೆಯ ರಾಜ. ದಶರಥ ಮಹಾ ರಾಜ ಶ್ರೀ ರಾಮನ ತಂದೆ. ಹಿಂದೂ ಸಂಪ್ರದಾಯದಲ್ಲಿ ರಾಮನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ.

Rama Navami 2021: ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಹುಟ್ಟುಹಬ್ಬವನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಆಚರಣೆಯ ಪದ್ಧತಿ
ಶ್ರೀ ರಾಮ, ಹನುಮ
Follow us on

ವಿಜಯನಾಮ ಸಂವತ್ಸರ, ವಸಂತ ಋತು, ಚೈತ್ರಮಾಸದ ಶುಕ್ರವಾರದಂದು ಕೌಸಲ್ಯಾ ಸುಪ್ರಜಾ, ಮರ್ಯಾದಾ ಪುರುಷೋತ್ತಮ, ಏಕಪತ್ನೀವ್ರತಸ್ಥ, ಅಯೋಧ್ಯೆಯ ಚಕ್ರವರ್ತಿ ಶ್ರೀರಾಮಚಂದ್ರನ ಹುಟ್ಟುಹಬ್ಬ. ಪ್ರಾಚೀನ ಭಾರತದ ಮೇರು ಕೃತಿ ವಾಲ್ಮೀಕಿ ವಿರಚಿತ ರಾಮಾಯಣದ ಕಥಾನಾಯಕನನ್ನು ಸ್ಮರಿಸಿಕೊಳ್ಳುವ ದಿನ. ಆತನ ಜನ್ಮದಿನವೇ ರಾಮ ನವಮಿಯ ಹಬ್ಬದ ಮಹತ್ವ.

ಭಾರತದ ಕಡು ಬೇಸಿಗೆಯಲ್ಲಿ ಬರುವ ರಾಮನವಮಿ ಹಬ್ಬ ಅನೇಕ ನೆನಪುಗಳನ್ನು ಮರುಕಳಿಸುವಂತೆ ಮಾಡುತ್ತದೆ. ಶಾಲಾ ಪರೀಕ್ಷೆಗಳು ಮುಗಿದು ಬಾಲಕರಿಗೆ ಮರಕೋತಿ ಆಡುವ ಸಮಯ. ಹೆಣ್ಣು ಮಕ್ಕಳಿಗೆ ಚೌಕಾಭಾರ, ಘಟಗೋಣಿಮಣೆ, ಕುಂಟಾಬಿಲ್ಲೆ ಆಡುವ ಬೇಸಿಗೆ ರಜಾ ಮಜಾ. ಸೂರ್ಯನ ಬೇಗೆಯಿಂದ ಅಲ್ಪ ಸ್ವಲ್ಪ ಸುಧಾರಿಸಿಕೊಳ್ಳುವುದಕ್ಕೆ ಋತುಮಾನಕ್ಕೆ ತಕ್ಕಂತೆ ಆಹಾರ, ಪಾನೀಯ.

ಶಿವರಾತ್ರಿಗೆ ಆರಂಭವಾಗುವ ಬೇಸಿಗೆ ಕಾಲಕ್ಕೆ ಸರಿಯಾಗಿ ಬೇಲದ ಹಣ್ಣಿನ ಪಾನಕವಾದ್ರೆ. ಯುಗಾದಿಗೆ ಪ್ರಕೃತಿಯೇ ಕರುಣಿಸಿದ ಮಾವು ಬೇವು ಬೆಲ್ಲ. ರಾಮನವಮಿಗೆ ನಾನಾ ಬಗೆಯ ಪೇಯಗಳು. ಕಲ್ಲಂಗಡಿ, ಕರಬೂಜಾ, ನಿಂಬೆ ಹಣ್ಣಿನ ರಸ ಸೇವನೆಗೆ ಇದು ಸಕಾಲ. ನೀರಿನ ಅಂಶ ಹೆಚ್ಚಾಗಿರುವ ಹಣ್ಣುಗಳು ಬೇಸಿಗೆಯಲ್ಲೇ ಫಲಕೊಡುವುದು ಡಿವೈನ್ ಕಾನ್ಸಪಿರಸಿ! ಹಣ್ಣುಗಳ ಜತೆಗೆ ತಂಪು ಪದಾರ್ಥ ಹೆಸರುಬೇಳೆ ಕೋಸಂಬರಿಗೂ ರಾಮನವಮಿಗೂ ಬಿಡಿಸಲಾರದ ನಂಟು. ನಾಲಕ್ಕು ಸೌತೇಕಾಯಿ ಹೋಳು, ಎರಡು ಲೋಟ ನೀರು ಮಜ್ಜಿಗೆಯನ್ನು ಪಡೆದವನೇ ದಿನದ ಪುಣ್ಯವಂತ.

ರಾಮನ ಹುಟ್ಟಿದ ದಿನ ರಾಮನವಮಿ
ಶ್ರೀ ರಾಮನವಮಿ ಹಿಂದೂ ದೇವರಾದ ರಾಮನ ಹುಟ್ಟಿದ ದಿನ. ಶ್ರೀ ರಾಮ ರಾಮಾಯಣದ ಕಥಾ ನಾಯಕ ಹಾಗೂ ಆದಿಕಾಲದ ಭಾರತದ ಅಯೋಧ್ಯೆಯ ರಾಜ. ದಶರಥ ಮಹಾ ರಾಜ ಶ್ರೀ ರಾಮನ ತಂದೆ. ಹಿಂದೂ ಸಂಪ್ರದಾಯದಲ್ಲಿ ರಾಮನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ. ಶ್ರೀ ರಾಮನವಮಿ ಯುಗಾದಿಯ ಎಂಟು ದಿನಗಳ ನಂತರ ಚೈತ್ರ ಮಾಸದ ಶುಕ್ಲ ಪಕ್ಷದಲ್ಲಿ ಆಚರಿಸಲಾಗುತ್ತದೆ.

ಈ ದಿನವನ್ನು ರಾಮನ ಕಥಾ ವಾಚನಗೋಷ್ಠಿಗಳು , ಹಿಂದೂ ಪವಿತ್ರ ಮಹಾಕಾವ್ಯವಾದ ರಾಮಾಯಣ ಸೇರಿದಂತೆ ರಾಮನ ಕಥೆಗಳನ್ನು ಓದಿ ದಿನವನ್ನು ಹಬ್ಬದ ರೀತಿ ಆಚರಿಸಲಾಗುತ್ತೆ. ಈ ದಿನದಂದು ಕೆಲವು ವೈಷ್ಣವ ಹಿಂದೂಗಳು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ, ಇತರರು ತಮ್ಮ ಮನೆಯಲ್ಲಿಯೇ ಪ್ರಾರ್ಥಿಸುತ್ತಾರೆ ಮತ್ತು ಕೆಲವರು ಪೂಜೆ ಮತ್ತು ಆರತಿಯ ಭಾಗವಾಗಿ ಸಂಗೀತದೊಂದಿಗೆ ಭಜನೆ ಅಥವಾ ಕೀರ್ತನೆಯಲ್ಲಿ ಭಾಗವಹಿಸುತ್ತಾರೆ. ಕೆಲವು ಭಕ್ತರು ಶಿಶು ರಾಮನ ಸಣ್ಣ ಪ್ರತಿಮೆಗಳನ್ನು ತೆಗೆದುಕೊಂಡು ಅದಕ್ಕೆ ಅಭಿಷೇಕವನ್ನು ಮಾಡಿ, ವಸ್ತ್ರವನ್ನು ತೊಡಿಸಿ ನಂತರ ಅದನ್ನು ತೊಟ್ಟಿಲಲ್ಲಿ ಇರಿಸುವ ಮೂಲಕ ಪೂಜಿಸುತ್ತಾರೆ. ದತ್ತಿ ಕಾರ್ಯಕ್ರಮಗಳು ಮತ್ತು ಹಲವು ಸಮುದಾಯಗಳಲ್ಲಿ ಭೋಜವನ್ನೂ ಆಯೋಜಿಸಲಾಗುತ್ತದೆ. ಈ ಹಬ್ಬವು ಅನೇಕ ಹಿಂದೂಗಳಿಗೆ ನೈತಿಕ ಪ್ರತಿಬಿಂಬದ ಒಂದು ಸಂದರ್ಭವಾಗಿದೆ.

ಕೆಲವರು ಈ ದಿನದಂದು ವ್ರತ (ಉಪವಾಸ) ಮಾಡುತ್ತಾರೆ. ಈ ದಿನದ ಪ್ರಮುಖ ಆಚರಣೆಗಳು ಅಯೋಧ್ಯೆ ಮತ್ತು ಸೀತಾ ಸಮಾಹಿತ್ ಸ್ಥಲ್ (ಉತ್ತರ ಪ್ರದೇಶ), ಸೀತಮಾರ್ಹಿ (ಬಿಹಾರ), ಜನಕ್ಪುರ್ಧಮ್ (ನೇಪಾಳ), ಭದ್ರಾಚಲಂ (ತೆಲಂಗಾಣ), ಕೋದಂಡರಾಮ ದೇವಸ್ಥಾನ, ವೊಂಟಿಮಿಟ್ಟಾ (ಆಂಧ್ರಪ್ರದೇಶ) ಮತ್ತು ರಾಮೇಶ್ವರಂ(ತಮಿಳುನಾಡು)ನಲ್ಲಿ ಕಾಣಬಹುದು. ರಥಯಾತ್ರೆಗಳು , ರಥದ ಶೋಭ ಯಾತ್ರೆ ಎಂದೂ ಕರೆಯಲ್ಪಡುವ ರಥದ ಮೆರವಣಿಗೆಗಳಲ್ಲಿ ಸೀತೆ, ಅವರ ಸಹೋದರ ಲಕ್ಷ್ಮಣ ಮತ್ತು ಹನುಮಾನ್ ಇವರನ್ನು ಹಲವಾರು ಸ್ಥಳಗಳಿಗೆ ಕರೆದೊಯ್ಯಲಾಗುತ್ತದೆ. ಅಯೋಧ್ಯೆಯಲ್ಲಿ, ಅನೇಕರು ಪವಿತ್ರವಾದ ಸರಯು ನದಿಯಲ್ಲಿ ಸ್ನಾನ ಮಾಡಿ ನಂತರ ರಾಮನ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ.

ಹಬ್ಬದ ಆಚರಣೆ
ರಾಮನವಮಿಯಂದು ದಕ್ಷಿಣ ಭಾರತದ ಮನೆಗಳಲ್ಲಿ, ಮುಖ್ಯವಾಗಿ ಕರ್ನಾಟಕದಲ್ಲಿ, ಪಾನಕ ಹಾಗೂ ಕೋಸಂಬರಿಗಳನ್ನು ಬಂದವರಿಗೆ ನೀಡಿ ಆಚರಿಸಲಾಗುತ್ತದೆ. ರಾಮ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ. ಈಗಿನ ಅಯೋಧ್ಯೆಯಲ್ಲಿ, ತಮಿಳುನಾಡಿನ ರಾಮೇಶ್ವರಂನಲ್ಲಿ ಈ ದಿನದಂದು ಶ್ರೀ ರಾಮನ ಪೂಜೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ. ಕರ್ನಾಟಕಾದ್ಯಂತ ಕರ್ನಾಟಕ ಸಂಗೀತ ಮತ್ತು ಹಿಂದುಸ್ತಾನಿ ಸಂಗೀತ ಕಛೇರಿಗಳು ಆಯೋಜಿಸಲ್ಪಡುತ್ತವೆ. ಇದರಲ್ಲಿ ಕರ್ನಾಟಕದ ಹಾಗೂ ಇತರೆ ರಾಜ್ಯಗಳಿಂದ ಸಂಗೀತ ವಿದ್ವಾಂಸರು ಬಂದು ಪಾಲ್ಗೊಳುತ್ತಾರೆ.

ಪೂರ್ವ ಭಾರತದ ರಾಜ್ಯಗಳಾದ ಒಡಿಶಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ, ಜಗನ್ನಾಥ ದೇವಾಲಯಗಳು ಮತ್ತು ಪ್ರಾದೇಶಿಕ ವೈಷ್ಣವ ಸಮುದಾಯದವರು ರಾಮ ನವಮಿಯನ್ನು ಆಚರಿಸುತ್ತಾರೆ ಮತ್ತು ಬೇಸಿಗೆಯಲ್ಲಿ ತಮ್ಮ ವಾರ್ಷಿಕ ಜಗನ್ನಾಥ ರಥಯಾತ್ರೆಗೆ ಸಿದ್ಧತೆಗಳು ಪ್ರಾರಂಭವಾಗುವ ದಿನವೆಂದು ಪರಿಗಣಿಸುತ್ತಾರೆ. ಇಸ್ಕಾನ್‌ಗೆ ಸಂಬಂಧಿಸಿದ ಭಕ್ತರು ಹಗಲಿನ ಹೊತ್ತಿನಲ್ಲಿ ಉಪವಾಸ ಮಾಡುತ್ತಾರೆ.

ರಾಮನವಮಿಯ ಮಹತ್ವ
ಈ ದಿನದ ಮಹತ್ವವು ದುಷ್ಟರ ಮೇಲೆ ಒಳ್ಳೆಯತನದ ವಿಜಯ, ಅಧರ್ಮವನ್ನು ಸೋಲಿಸಿ ಧರ್ಮದ ಸ್ಥಾಪನೆಯನ್ನು ಮಾಡಿದ ಕಾರ್ಯವನ್ನು ಸೂಚಿಸುತ್ತದೆ. ಶ್ರಿರಾಮನನ್ನು ಸೂರ್ಯದೇವನ ಪೂರ್ವಜನೆಂದೂ ಜನ ನಂಬುತ್ತಾರೆ . ಸಂತ ರಾಂಪಾಲ್ ಜಿ ಅವರ ಭಕ್ತರು ಆದಿ ರಾಮ (ಸುಪ್ರೀಂ ರಾಮ) ಬಗ್ಗೆ ಕಬೀರ್ ಸಾಹಿಬ್ ಅವರ ಬನಿಸ್ ಪಠಣ ಮಾಡುವ ಮೂಲಕ ಈ ದಿನವನ್ನು ಕಳೆಯುತ್ತಾರೆ. ಇವರನ್ನು ಅವರು ಸರ್ವೋಚ್ಚ ಸೃಷ್ಟಿಕರ್ತ ಎಂದು ಪರಿಗಣಿಸುತ್ತಾರೆ.

ಭಾರತದ ಹಲವೆಡೆ ರಾಮ ನವಮಿ ಆಚರಣೆ
ಉತ್ತರಪ್ರದೇಶ, ಬಿಹಾರ , ಜಾರ್ಖಂಡ್, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ನೆಲೆಸಿರುವ ಭಾರತೀಯ ಹಿಂದೂ ವಲಸಿಗರು ಆಚರಿಸುವ ಹಿಂದೂ ಹಬ್ಬಗಳಲ್ಲಿ ರಾಮ ನವಮಿಯೂ ಒಂದು.

ರಾಮನವಮಿಗೆ ಮಾಡುವ ವಿಶೇಷ ಆಹಾರ ಪದಾರ್ಥಗಳು
ಪಾನಕ, ತಮಿಳುನಾಡಿನಲ್ಲಿ ನೀರ್ ಮೋರ್ (ಮಜ್ಜಿಗೆ), ಕೋಸಂಬರಿ, ಫಲಾಹಾರ, ತೆಂಗಿನಕಾಯಿಯ ಲಡ್ಡೂ, ಕಾಜು ಬರ್ಫಿ, ತೊಗರಿಬೇಳೆಯ ಹಲ್ವಾ, ಪಂಚಾಮೃತಂ, ಸಬ್ಬಕ್ಕಿಯ ಪಾಯಸ, ಎಳ್ಳುಂಡೆ ಇತ್ಯಾದಿ.

ಇದನ್ನೂ ಓದಿ: Rama Navami 2021: ರಾಮನವಮಿ ಆಚರಣೆಯ ಮುಹೂರ್ತ, ಇತಿಹಾಸ ಮತ್ತು ತಿಳಿದುಕೊಳ್ಳಲೇಬೇಕಾದ ಮಹತ್ವ ಇಲ್ಲಿದೆ