AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಗುರು ‘ಭೈರವ’ ಕಲೆಯಿಂದ ಕೊವಿಡ್​ ಪರಿಹಾರಕ್ಕೆ ಸಿಕ್ತು 9 ಕೋಟಿ ರೂ!

ದೇಶದಲ್ಲೆಡೆ ಹಬ್ಬಿರುವ ಕೊರೊನಾದಿಂದ ತತ್ತರಿಸಿ ಹೋಗಿರುವ ರಾಜ್ಯಗಳಲ್ಲಿ ತಮಿಳುನಾಡು ಸಹ ಒಂದು. ಮಹಾಮಾರಿಯ ವಿರುದ್ಧ ಹೋರಾಡುತ್ತಿರುವ ಈ ರಾಜ್ಯವು ಸಾಕಷ್ಟು ಸಾವು ನೋವು ಅನುಭವಿಸಿದೆ. ಈ ಮಧ್ಯೆ ವಿಶ್ವವಿಖ್ಯಾತ ಇಶಾ ಪ್ರತಿಷ್ಠಾನವು ಕೊವಿಡ್​ ವಿರುದ್ಧದ ಹೋರಾಟಕ್ಕೆ ಸಹಾಯ ಹಸ್ತವನ್ನ ಚಾಚಿದೆ. ಸದ್ಗುರು ಜಗ್ಗಿ ವಾಸುದೇವ್​ ತಮ್ಮ ಕೈಯಾರೇ ಬಿಡಿಸಿರುವ ಎರಡು ಅದ್ಭುತವಾದ ಚಿತ್ರಕಲೆಗಳ ಮಾರಾಟದಿಂದ ಬರೋಬ್ಬರಿ 9 ಕೋಟಿ ರೂಪಾಯಿ ಸಂಗ್ರಹವಾಗಿದೆ. ಅದನ್ನು ಸದ್ಗುರು ಇಶಾ ಔಟ್​ರೀಚ್​ ಸಂಸ್ಥೆಯು ಕೊವಿಡ್​ನಿಂದ ಸಂಕಷ್ಟ ಎದುರಿಸುತ್ತಿರೋರ ನೆರವಿಗೆ ಬಳಸಿಕೊಳ್ಳಲು ಮುಂದಾಗಿದೆ. […]

ಸದ್ಗುರು ‘ಭೈರವ’ ಕಲೆಯಿಂದ ಕೊವಿಡ್​ ಪರಿಹಾರಕ್ಕೆ ಸಿಕ್ತು 9 ಕೋಟಿ ರೂ!
KUSHAL V
| Edited By: |

Updated on:Jul 06, 2020 | 5:49 PM

Share

ದೇಶದಲ್ಲೆಡೆ ಹಬ್ಬಿರುವ ಕೊರೊನಾದಿಂದ ತತ್ತರಿಸಿ ಹೋಗಿರುವ ರಾಜ್ಯಗಳಲ್ಲಿ ತಮಿಳುನಾಡು ಸಹ ಒಂದು. ಮಹಾಮಾರಿಯ ವಿರುದ್ಧ ಹೋರಾಡುತ್ತಿರುವ ಈ ರಾಜ್ಯವು ಸಾಕಷ್ಟು ಸಾವು ನೋವು ಅನುಭವಿಸಿದೆ. ಈ ಮಧ್ಯೆ ವಿಶ್ವವಿಖ್ಯಾತ ಇಶಾ ಪ್ರತಿಷ್ಠಾನವು ಕೊವಿಡ್​ ವಿರುದ್ಧದ ಹೋರಾಟಕ್ಕೆ ಸಹಾಯ ಹಸ್ತವನ್ನ ಚಾಚಿದೆ.

ಸದ್ಗುರು ಜಗ್ಗಿ ವಾಸುದೇವ್​ ತಮ್ಮ ಕೈಯಾರೇ ಬಿಡಿಸಿರುವ ಎರಡು ಅದ್ಭುತವಾದ ಚಿತ್ರಕಲೆಗಳ ಮಾರಾಟದಿಂದ ಬರೋಬ್ಬರಿ 9 ಕೋಟಿ ರೂಪಾಯಿ ಸಂಗ್ರಹವಾಗಿದೆ. ಅದನ್ನು ಸದ್ಗುರು ಇಶಾ ಔಟ್​ರೀಚ್​ ಸಂಸ್ಥೆಯು ಕೊವಿಡ್​ನಿಂದ ಸಂಕಷ್ಟ ಎದುರಿಸುತ್ತಿರೋರ ನೆರವಿಗೆ ಬಳಸಿಕೊಳ್ಳಲು ಮುಂದಾಗಿದೆ.

ಇದನ್ನು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಲಾಕ್​ಡೌನ್​ನಿಂದ ಸಂಕಷ್ಟ ಎದುರಿಸುತ್ತಿರೋರಿಗೆ ಆಹಾರ ಪೂರೈಸಲು ಬಳಸಲಾಗುತ್ತಿದೆ. ಜೊತೆಗೆ, ವೈದ್ಯಕೀಯ ಸಿಬ್ಬಂದಿಗೆ PPE ಕಿಟ್​ ಹಾಗೂ ಕೊವಿಡ್​ ಆಸ್ಪತ್ರೆಗಳಿಗೆ ಇತರೆ ಸುರಕ್ಷತಾ ಪರಿಕರಗಳನ್ನು ನೀಡಲು ಸಹ ಬಳಸಲಾಗುತ್ತಿದೆ.

ಪರಿಪೂರ್ಣವಾಗಿ ಬಾಳೋಣ (To Live totally) ಎಂಬ ಶೀರ್ಷಿಕೆಯಡಿ ರಚಿಸಲಾಗಿದ್ದ ಆಯಿಲ್​ ಪೇಂಟಿಂಗ್ ಸರಿಸುಮಾರು 4.1 ಕೋಟಿ ರೂಪಾಯಿ ಗಳಿಸಿದ್ದರೆ, ಇತ್ತೀಚೆಗೆ ಏಪ್ರಿಲ್​ನಲ್ಲಿ ಅಗಲಿದೆ ನೆಚ್ಚಿನ ಹೋರಿ ಭೈರವನ ನೆನಪಿನಲ್ಲಿ ಗೋಮಯ, ಸುಣ್ಣ, ಅರಿಶಿನ ಮತ್ತು ಕಲ್ಲಿದ್ದಲನ್ನು ಬಳಸಿ ಸದ್ಗುರು ಬಿಡಿಸಿರುವ ಅಮೋಘವಾದ ‘ಭೈರವ’ ಚಿತ್ರಕಲೆ ಬರೋಬ್ಬರಿ 5.1 ಕೋಟಿ ಗಳಿಸಿದೆ.

#BeatTheVirus ಎಂಬ ಹೆಸರಿನಲ್ಲಿ ಇಶಾ ಔಟ್​ರೀಚ್​ ಸಂಸ್ಥೆಯು ನಡೆಸುತ್ತಿರುವ ಅಭಿಯಾನಕ್ಕೆ ನನ್ನ ಅಳಿಲು ಸೇವೆ ಎಂದು ಸದ್ಗುರು ಜಗ್ಗಿ ವಾಸುದೇವ್​ ಹಂಚಿಕೊಂಡಿದ್ದಾರೆ. ಕೊರೊನಾದಿಂದ ಕಂಗಾಲಾಗಿರುವ ಸಾವಿರಾರು ಜನರ ಹಸಿವು ನೀಗಿಸಲು ಇದರ ಸದ್ಬಳಕೆಯಾಗಿರೋದಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

Published On - 5:39 pm, Mon, 6 July 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್