AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವಾರಗಳ ಬಿಗ್ ಬಾಸ್ ಸೀಸನ್​ಗೆ ಸಲ್ಲೂ ಪಡೆಯಲಿರೋದು ಬರೋಬ್ಬರಿ ರೂ. 450 ಕೋಟಿ!!!

ಬಾಲಿವುಡ್ ನಟ ಸಲ್ಮಾನ್ ಖಾನ್ ಬಹಲ ದಿನಗಳಿಂದ ಸುದ್ದಿಯಲ್ಲಿರಲಿಲ್ಲ, ದೇಶದಾದ್ಯಂತ ಲಾಕ್​ಡೌನ್ ಜಾರಿಯಲ್ಲಿದ್ದಾಗ ಪನ್ವೆಲ್​ನಲ್ಲಿರುವ ತನ್ನ ಫಾರ್ಮ್​ಹೌಸ್​ನಲ್ಲೇ ಇದ್ದು ಅದರ ಸುತ್ತಮುತ್ತ ವಾಸವಾಗಿರುವ ವಲಸೆ ಕಾರ್ಮಿಕರಿಗೆ ಫಾರ್ಮ್​ನಲ್ಲಿ ಬೆಳೆದ ತರಕಾರಿ ಮತ್ತು ಹಣ್ಣು ಹಂಪಲು ನೀಡಿ ನೆರವಾಗುತ್ತಿದ್ದ ಅವರ ಒಂದೇ ಒಂದು ಚಿತ್ರ ಈ ವರ್ಷ ಬಿಡುಗಡೆಯಾಗಿಲ್ಲವೆನ್ನುವುದು ಸೋಜಿಗದ ಸಂಗತಿಯೇ. ಹಾಗೆ ನೋಡಿದರೆ, ಸಲ್ಮಾನ್​ನ ಬಹು–ನಿರೀಕ್ಷಿತ ‘ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್,’ ರಂಜಾನ್ ಹಬ್ಬದಂದು ರಿಲೀಸ್ ಆಗಬೇಕಿತ್ತು, ಆದರೆ, ಕೊವಿಡ್-19 ಪಿಡುಗಿನಿಂದಾಗಿ ಅದು ಸಾಧ್ಯವಾಗಲಿಲ್ಲ. ಅದಾದ […]

12 ವಾರಗಳ ಬಿಗ್ ಬಾಸ್ ಸೀಸನ್​ಗೆ ಸಲ್ಲೂ ಪಡೆಯಲಿರೋದು ಬರೋಬ್ಬರಿ ರೂ. 450 ಕೋಟಿ!!!
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 05, 2020 | 3:02 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ ಬಹಲ ದಿನಗಳಿಂದ ಸುದ್ದಿಯಲ್ಲಿರಲಿಲ್ಲ, ದೇಶದಾದ್ಯಂತ ಲಾಕ್​ಡೌನ್ ಜಾರಿಯಲ್ಲಿದ್ದಾಗ ಪನ್ವೆಲ್​ನಲ್ಲಿರುವ ತನ್ನ ಫಾರ್ಮ್​ಹೌಸ್​ನಲ್ಲೇ ಇದ್ದು ಅದರ ಸುತ್ತಮುತ್ತ ವಾಸವಾಗಿರುವ ವಲಸೆ ಕಾರ್ಮಿಕರಿಗೆ ಫಾರ್ಮ್​ನಲ್ಲಿ ಬೆಳೆದ ತರಕಾರಿ ಮತ್ತು ಹಣ್ಣು ಹಂಪಲು ನೀಡಿ ನೆರವಾಗುತ್ತಿದ್ದ ಅವರ ಒಂದೇ ಒಂದು ಚಿತ್ರ ಈ ವರ್ಷ ಬಿಡುಗಡೆಯಾಗಿಲ್ಲವೆನ್ನುವುದು ಸೋಜಿಗದ ಸಂಗತಿಯೇ.

ಹಾಗೆ ನೋಡಿದರೆ, ಸಲ್ಮಾನ್​ನ ಬಹುನಿರೀಕ್ಷಿತ ‘ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್,’ ರಂಜಾನ್ ಹಬ್ಬದಂದು ರಿಲೀಸ್ ಆಗಬೇಕಿತ್ತು, ಆದರೆ, ಕೊವಿಡ್-19 ಪಿಡುಗಿನಿಂದಾಗಿ ಅದು ಸಾಧ್ಯವಾಗಲಿಲ್ಲ. ಅದಾದ ನಂತರ ಸುಶಾಂತ್ ಸಿಂಗ್ ರಜಪೂತ ಅಕಾಲಿಕ ಮರಣದಿಂದ ಬಾಲಿವುಡ್ ತತ್ತರಗೊಂಡಾಗ ಸಲ್ಮಾನ್ ವಿರುದ್ಧ ಸ್ವಜನ ಪಕ್ಷಪಾತದ ಆರೋಪಗಳು ಕೇಳಿಬಂದವು.

ಸಲ್ಲೂ ಭಾಯ್ ಈಗ ಸುದ್ದಿಯಲ್ಲಿದ್ದಾರೆ. ಅವರು ನಡೆಸಿಕೊಡುವ ಬಿಗ್ ಬಾಸ್ 14 ನೇ ಸೀಸನ್ ಅಕ್ಟೋಬರ್​ನಲ್ಲಿ ಶುರುವಾಗಲಿದೆಯಂತೆ. ಗೊರೆಗಾಂವ್​ನ ಫಿಲ್ಮ್​ಸಿಟಿಯಲ್ಲಿ ನಡೆಯುವ ವಾರಾಂತ್ಯದ ಶೂಟ್​ಗಳಿಗೆ ಸಲ್ಮಾನ್ ಹಾಜರಾಗಲಿದ್ದಾರೆಂದು ಮೂಲಗಳು ತಿಳಿಸಿವೆ.

ಈ ಬಾರಿಯ 12 ವಾರಗಳ ಬಿಗ್ ಬಾಸ್ ಸೀಸನ್​ಗೆ ಸಲ್ಮಾನ್ ಪಡೆಯಲಿರುವ ಸಂಭಾವನೆ ಎಷ್ಟು ಅಂತ ಊಹಿಸಬಲ್ಲಿರಾ? ಬರೋಬ್ಬರಿ 480 ಕೋಟಿ ರೂಪಾಯಿಗಳು!! ಹೌದು, ನೀವು ಓದಿದ್ದು ಸರಿ, ಪ್ರತಿ ಎಪಿಸೋಡ್​ಗೆ 20 ಕೋಟಿ ರೂಪಾಯಿಗಳಂತೆ ಪೂರ್ತಿ ಸೀಸನ್​ಗೆ ರೂ 480 ಕೋಟಿಗಳು. 

ಕಳೆದ ಸೀಸನ್​ಗೆ ಅವರು ಪ್ರತಿ ಎಪಿಸೋಡ್​ಗೆ ರೂ. 15 ಕೋಟಿ ಲೆಕ್ಕದಲ್ಲಿ 250 ಕೋಟಿ ರೂಪಾಯಿ ಪಡೆದಿದ್ದರು. ಒಂದು ಪಕ್ಷ ಈ ಸೀಸನ್​ನ ಎಪಿಸೋಡ್​ಗಳ ಸಂಖ್ಯೆಯೇನಾದರೂ ಹೆಚ್ಚಾದರೆ, ಸಲ್ಮಾನ್ ಅವುಗಳಿಗೆ ಪ್ರತ್ಯೇಕವಾಗಿ ಸಂಭಾವನೆ ಪಡೆಯಲಿದ್ದಾರೆ.

ಈಗಷ್ಟೇ ದೊರೆತಿರುವ ಮಾಹಿತಿ ಪ್ರಕಾರ, ಸಲ್ಮಾನ್ ಖಾನ್​ನ ಪ್ರೊಡಕ್ಷನ್ ಹೌಸ್ ರೂ. 450 ಕೋಟಿಗಳಿಗೆ ಬಿಗ್ ಬಾಸ್ ಸೀಸನ್ 14 ಡೀಲನ್ನು ಕುದಿರಿಸಿದೆಯಂತೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ