AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​​ಕುಮಾರ್​ ಜೊತೆ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಶನಿ ಮಹದೇವಪ್ಪ

ಕನ್ನಡದಲ್ಲಿ 500ರಕ್ಕೂ ಹೆಚ್ಚು ಚಿತ್ರಗಳಲ್ಲಿ ಶನಿ ಮಹದೇವಪ್ಪ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಟರುಗಳ ಜೊತೆ ತೆರೆ ಹಂಚಿಕೊಂಡ ಖ್ಯಾತಿ ಇವರಿಗಿದೆ.

ರಾಜ್​​ಕುಮಾರ್​ ಜೊತೆ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಶನಿ ಮಹದೇವಪ್ಪ
ಶನಿ ಮಹಾದೇವಪ್ಪ
ರಾಜೇಶ್ ದುಗ್ಗುಮನೆ
|

Updated on:Jan 03, 2021 | 7:41 PM

Share

ಕನ್ನಡ ಚಿತ್ರರಂಗ ಕಂಡ ಅದ್ಭುತ ನಟ ಡಾ. ರಾಜ್​ಕುಮಾರ್​. ಇವರ ಜೊತೆ ಒಂದಲ್ಲ ಎರಡಲ್ಲ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಹ ಕಲಾವಿದನಾಗಿ ನಟಿಸಿದ ಖ್ಯಾತಿ ಶನಿ ಮಹದೇವಪ್ಪ ಅವರಿಗಿದೆ. ಇಂಥ ಕಲಾವಿದನನ್ನು ನಾವು ಇಂದು ಕಳೆದುಕೊಂಡಿದ್ದೇವೆ.

ಕನ್ನಡದಲ್ಲಿ 500ರಕ್ಕೂ ಹೆಚ್ಚು ಚಿತ್ರಗಳಲ್ಲಿ ಶನಿ ಮಹದೇವಪ್ಪ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಟರುಗಳ ಜೊತೆ ತೆರೆ ಹಂಚಿಕೊಂಡ ಖ್ಯಾತಿ ಇವರಿಗಿದೆ. ಪೋಷಕ ಪಾತ್ರದಲ್ಲಿ ಬಣ್ಣ ಹಚ್ಚಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿ ಹೆಸರು ಮಾಡಿದ ಖ್ಯಾತಿ ಶನಿ ಮಹಾದೇವಪ್ಪ ಅವರದ್ದು.

ಸಿನಿಮಾ ಪಟ್ಟಿ

1978ರಲ್ಲಿ ತೆರೆಕಂಡ ಶಂಕರ ಗುರು, 1983ರಲ್ಲಿ ರಿಲೀಸ್​ ಆಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದ ಕವಿರತ್ನ ಕಾಳಿದಾಸ, ಶ್ರೀನಿವಾಸ ಕಲ್ಯಾಣ, ಶಿವಶಂಕರ್, ಗುರು ಬ್ರಹ್ಮ ಚಿತ್ರಗಳಲ್ಲಿ ಶನಿ ಮಹದೇವಪ್ಪ ಬಣ್ಣ ಹಚ್ಚಿದ್ದಾರೆ. 2008ರ ಮೂರನೇ ಕ್ಲಾಸ್​ ಮಂಜ ಬಿ.ಕಾಮ್​ ಭಾಗ್ಯ ಚಿತ್ರದಲ್ಲಿ ಇವರು ಕೊನೆಯದಾಗಿ ಬಣ್ಣ ಹಚ್ಚಿದ್ದರು.

ಗೌರಿ ಗಣೇಶ (1991), ಆತ್ಮ ಬಂಧನ (1992), ಮನ ಮೆಚ್ಚಿದ ಸೊಸೆ (1992), ಶಿವಶಂಕರ್ (1990), ರಾಮರಾಜ್ಯದಲ್ಲಿ ರಾಕ್ಷಸರು (1990), ಒಂಟಿ ಸಲಗ (1989), ಜಯ ಸಿಂಹ (1987), ಸತ್ಯಮ್​ ಶಿವಂ ಸುಂದರಂ (1987), ಜೀವನ ಜ್ಯೋತಿ (1987), ಮದುವೆ ಮಾಡು ತಮಾಶೆ ನೋಡು (1986), ಪ್ರೇಮದ ಕಾಣಿಕೆ (1976), ತ್ರಿಮೂರ್ತಿ (1975) ಇವು ಇವರು ನಟಿಸಿದ ಪ್ರಮುಖ ಚಿತ್ರಗಳಾಗಿವೆ.

ಅರಸಿ ಬಂದಿತ್ತು ಪ್ರಶಸ್ತಿ ಶನಿ ಮಹದೇವಪ್ಪ ಅವರು ಕನ್ನಡ ಚಿತ್ರರಂಗಕ್ಕೆ ನಿರಂತರವಾದ ಕೊಡುಗೆ ನೀಡಿದ್ದಾರೆ. ಅವರ ಕಲೆಗೆ ಗೌರವ ನೀಡುವ ಉದ್ದೇಶದಿಂದ ಶನಿ ಮಹದೇವಪ್ಪ ಅವರಿಗೆ ಎರಡು ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ‘ವರದರಾಜು ಅವಾರ್ಡ್​ 2009’, ‘ರಾಜ್​ಕುಮಾರ್​ ಸೌಹಾರ್ದ ಅವಾರ್ಡ್​’ ದೊರೆತಿದೆ.

ಈ ಹೆಸರು ಬರಲು ಕಾರಣವೇನು ಗೊತ್ತಾ? ಇವರಿಗೆ ಶನಿ ಮಹದೇವಪ್ಪ ಎನ್ನುವ ಹೆಸರು ಬರಲೂ ಒಂದು ಕಾರಣವಿದೆ. ಇವರ ಹುಟ್ಟಿನ ಹೆಸರು ಮಹದೇವಪ್ಪ ಎಂದು. ರಾಜವಿಕ್ರಮ ನಾಟಕದಲ್ಲಿ ಸತತವಾಗಿ ಮಹದೇವಪ್ಪ ಶನಿ ದೇವರ ಪಾತ್ರ ನಿರ್ವಹಿಸಿದ್ದರು. ಹೀಗಾಗಿ, ಅವರನ್ನು ಎಲ್ಲರೂ ಪ್ರೀತಿಯಿಂದ ಶನಿ ಮಹದೇವಪ್ಪ ಎಂದು ಕರೆಯಲು ಆರಂಭಿಸಿದ್ದರು.

ಕೊನೆಯ ಸಮಯದಲ್ಲಿ ಎದುರಾಗಿತ್ತು ಸಂಕಷ್ಟ ಕನ್ನಡ ಚಿತ್ರರಂಗ ಬೆಳೆಯುತ್ತಾ ಬಂದಂತೆ ಮಹದೇವಪ್ಪ ಅವರಿಗೆ ಅವಕಾಶ ಕಡಿಮೆ ಆಗುತ್ತಾ ಬಂದಿತ್ತು. ಕಮರ್ಷಿಯಲ್​ ಸಿನಿಮಾಗಳ ಅಬ್ಬರ ಹೆಚ್ಚಾದಂತೆ, ಇವರಿಗೆ ಸಿನಿಮಾಗಳಲ್ಲಿ ನಟಿಸಲು ಯಾರೂ ಆದ್ಯತೆ ನೀಡಿಲ್ಲ. ನಟನೆಯನ್ನೇ ಉಸಿರಾಗಿಸಿಕೊಂಡಿದ್ದ ಇವರಿಗೆ ಕೊನೆಯ ದಿನಗಳಲ್ಲಿ ಸಮಯ ಸಾಗಿಸೋದು ಕಷ್ಟವಾಗಿತ್ತು.

ಕೊರೊನಾ ಸೋಂಕಿನಿಂದ ಚಂದನವನದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶ

Published On - 7:31 pm, Sun, 3 January 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!