AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಳ ಕಚೇರಿ ಒಡೆದಿದ್ದು ಶಿವ ಸೇನೆಯಲ್ಲ, ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೊರೇಷನ್: ರಾವತ್

ಬಾಲಿವುಡ್ ನಟಿ ಕಂಗನಾ ರನೌತ್ ಅವರ ಕಟ್ಟಡ ಧ್ವಂಸ ಮತ್ತು ಶಿವ ಸೇನೆ ನಡುವೆ ಯಾವುದೇ ಸಂಬಂಧವಿಲ್ಲವೆಂದು ಪಕ್ಷದ ನಾಯಕ ಸಂಜಯ ರಾವತ್ ಇಂದು ಮುಂಬೈಯಲ್ಲಿ ಹೇಳಿದರು. ‘‘ಆಕೆಯ ಕಟ್ಟಡ ಒಡೆಯವ ವಿಷಯ ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೊರೇಷನ್​ಗೆ (ಬಿಎಮ್​ಸಿ) ಸಂಬಂಧಿರುವುದರಿಂದ ನಾನು ಆ ಬಗ್ಗೆ ಮಾತಾಡಲು ಇಚ್ಛಿಸುವುದಿಲ್ಲ,’’ ಎಂದು ಸುದ್ದಿಗಾರರಿಗೆ ಹೇಳಿದ ರಾವತ್, ‘‘ಸದರಿ ವಿಷಯ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದರೆ ಮೇಯರ್ ಇಲ್ಲವೇ ಬಿಎಮ್​ಸಿ ಕಮೀಷನರ್ ಜೊತೆ ಮಾತಾಡಿ,’’ ಎಂದರು. ಬುಧವಾರದಂದು ತಾನು ಬಿಡುಗಡೆ ಮಾಡಿದ್ದ […]

ಕಂಗನಾಳ ಕಚೇರಿ ಒಡೆದಿದ್ದು ಶಿವ ಸೇನೆಯಲ್ಲ, ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೊರೇಷನ್: ರಾವತ್
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 10, 2020 | 7:05 PM

Share

ಬಾಲಿವುಡ್ ನಟಿ ಕಂಗನಾ ರನೌತ್ ಅವರ ಕಟ್ಟಡ ಧ್ವಂಸ ಮತ್ತು ಶಿವ ಸೇನೆ ನಡುವೆ ಯಾವುದೇ ಸಂಬಂಧವಿಲ್ಲವೆಂದು ಪಕ್ಷದ ನಾಯಕ ಸಂಜಯ ರಾವತ್ ಇಂದು ಮುಂಬೈಯಲ್ಲಿ ಹೇಳಿದರು.

‘‘ಆಕೆಯ ಕಟ್ಟಡ ಒಡೆಯವ ವಿಷಯ ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೊರೇಷನ್​ಗೆ (ಬಿಎಮ್​ಸಿ) ಸಂಬಂಧಿರುವುದರಿಂದ ನಾನು ಆ ಬಗ್ಗೆ ಮಾತಾಡಲು ಇಚ್ಛಿಸುವುದಿಲ್ಲ,’’ ಎಂದು ಸುದ್ದಿಗಾರರಿಗೆ ಹೇಳಿದ ರಾವತ್, ‘‘ಸದರಿ ವಿಷಯ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದರೆ ಮೇಯರ್ ಇಲ್ಲವೇ ಬಿಎಮ್​ಸಿ ಕಮೀಷನರ್ ಜೊತೆ ಮಾತಾಡಿ,’’ ಎಂದರು.

ಬುಧವಾರದಂದು ತಾನು ಬಿಡುಗಡೆ ಮಾಡಿದ್ದ ವಿಡಿಯೊವೊಂದರಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ದ ಏಕವಚನದಲ್ಲೇ ಕೂಗಾಡಿದ್ದ ಕಂಗನಾ, ‘‘ನೀನು ನನ್ನ ಮನೆ ನಾಶ ಮಾಡಿದಂತೆಯೇ ನಿನ್ನ ದುರಹಂಕಾರ ಕೂಡ ಒಂದು ದಿನ ನಾಶವಾಗಲಿದೆ.’’ ಎಂದಿದ್ದರು. ಠಾಕ್ರೆ ವಿರುದ್ಧ ಕಂಗನಾಳ ಆಕ್ರೋಶದ ಮಾತುಗಳ ನಂತರ ಮುಂಬೈ ಪೊಲೀಸ್ ಎಫ್ಐಆರ್ ದಾಖಲಿಸಿದೆ.

ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸ್ ನಿರ್ವಹಿಸುತ್ತಿರುವ ರೀತಿಯ ಬಗ್ಗೆ ಅಸಾಮಾಧಾನ ವ್ಯಕ್ತಪಡಿಸಿರುವ ಕಂಗನಾ ಪೊಲೀಸ್ ಹಾಗೂ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಕ್ಷರಶಃ ಕಾದಾಟಕ್ಕಿಳಿದಿದ್ದಾಳೆ. ಮುಂಬೈ ನಗರವನ್ನು ಆಕೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ ನಂತರ ಶಿವ ಸೇನೆಯ ಕಾರ್ಯಕರ್ತರು ಆಕೆಗೆ ತಕ್ಕ ಶಾಸ್ತಿ ಮಾಡುವುದಾಗಿ ಪಣತೊಟ್ಟಿದ್ದಾರೆ. ಕೊವಿಡ್-19 ಸೋಂಕು ಶುರುವಾದಾಗಿನಿಂದ ಹಿಮಾಚಲ ಪ್ರದೇಶದಲಲ್ಲಿದ್ದ ಕಂಗನಾಗೆ ಮುಂಬೈಯಲ್ಲಿ ಕಾಲಿಡಲು ಬಿಡುವುದಿಲ್ಲ ಅಂತ ಸೇನೆಯ ಕಾರ್ಯಕರ್ತರು ಬೆದರಿಕೆಯೊಡ್ಡಿದ್ದರು. ಆದರೆ, ರಾಷ್ಟ್ರ ಪ್ರಶಸ್ತಿ ವಿಜೇತ ನಟಿಯು Z ಪ್ಲಸ್ ಭದ್ರತೆಯೊಂದಿಗೆ ನಿನ್ನೆ ಶಿಮ್ಲಾದಿಂದ ಮುಂಬೈಗೆ ಆಗಮಿಸಿದರು.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ