AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಳ ಕಚೇರಿ ಒಡೆದಿದ್ದು ಶಿವ ಸೇನೆಯಲ್ಲ, ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೊರೇಷನ್: ರಾವತ್

ಬಾಲಿವುಡ್ ನಟಿ ಕಂಗನಾ ರನೌತ್ ಅವರ ಕಟ್ಟಡ ಧ್ವಂಸ ಮತ್ತು ಶಿವ ಸೇನೆ ನಡುವೆ ಯಾವುದೇ ಸಂಬಂಧವಿಲ್ಲವೆಂದು ಪಕ್ಷದ ನಾಯಕ ಸಂಜಯ ರಾವತ್ ಇಂದು ಮುಂಬೈಯಲ್ಲಿ ಹೇಳಿದರು. ‘‘ಆಕೆಯ ಕಟ್ಟಡ ಒಡೆಯವ ವಿಷಯ ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೊರೇಷನ್​ಗೆ (ಬಿಎಮ್​ಸಿ) ಸಂಬಂಧಿರುವುದರಿಂದ ನಾನು ಆ ಬಗ್ಗೆ ಮಾತಾಡಲು ಇಚ್ಛಿಸುವುದಿಲ್ಲ,’’ ಎಂದು ಸುದ್ದಿಗಾರರಿಗೆ ಹೇಳಿದ ರಾವತ್, ‘‘ಸದರಿ ವಿಷಯ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದರೆ ಮೇಯರ್ ಇಲ್ಲವೇ ಬಿಎಮ್​ಸಿ ಕಮೀಷನರ್ ಜೊತೆ ಮಾತಾಡಿ,’’ ಎಂದರು. ಬುಧವಾರದಂದು ತಾನು ಬಿಡುಗಡೆ ಮಾಡಿದ್ದ […]

ಕಂಗನಾಳ ಕಚೇರಿ ಒಡೆದಿದ್ದು ಶಿವ ಸೇನೆಯಲ್ಲ, ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೊರೇಷನ್: ರಾವತ್
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 10, 2020 | 7:05 PM

Share

ಬಾಲಿವುಡ್ ನಟಿ ಕಂಗನಾ ರನೌತ್ ಅವರ ಕಟ್ಟಡ ಧ್ವಂಸ ಮತ್ತು ಶಿವ ಸೇನೆ ನಡುವೆ ಯಾವುದೇ ಸಂಬಂಧವಿಲ್ಲವೆಂದು ಪಕ್ಷದ ನಾಯಕ ಸಂಜಯ ರಾವತ್ ಇಂದು ಮುಂಬೈಯಲ್ಲಿ ಹೇಳಿದರು.

‘‘ಆಕೆಯ ಕಟ್ಟಡ ಒಡೆಯವ ವಿಷಯ ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೊರೇಷನ್​ಗೆ (ಬಿಎಮ್​ಸಿ) ಸಂಬಂಧಿರುವುದರಿಂದ ನಾನು ಆ ಬಗ್ಗೆ ಮಾತಾಡಲು ಇಚ್ಛಿಸುವುದಿಲ್ಲ,’’ ಎಂದು ಸುದ್ದಿಗಾರರಿಗೆ ಹೇಳಿದ ರಾವತ್, ‘‘ಸದರಿ ವಿಷಯ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದರೆ ಮೇಯರ್ ಇಲ್ಲವೇ ಬಿಎಮ್​ಸಿ ಕಮೀಷನರ್ ಜೊತೆ ಮಾತಾಡಿ,’’ ಎಂದರು.

ಬುಧವಾರದಂದು ತಾನು ಬಿಡುಗಡೆ ಮಾಡಿದ್ದ ವಿಡಿಯೊವೊಂದರಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ದ ಏಕವಚನದಲ್ಲೇ ಕೂಗಾಡಿದ್ದ ಕಂಗನಾ, ‘‘ನೀನು ನನ್ನ ಮನೆ ನಾಶ ಮಾಡಿದಂತೆಯೇ ನಿನ್ನ ದುರಹಂಕಾರ ಕೂಡ ಒಂದು ದಿನ ನಾಶವಾಗಲಿದೆ.’’ ಎಂದಿದ್ದರು. ಠಾಕ್ರೆ ವಿರುದ್ಧ ಕಂಗನಾಳ ಆಕ್ರೋಶದ ಮಾತುಗಳ ನಂತರ ಮುಂಬೈ ಪೊಲೀಸ್ ಎಫ್ಐಆರ್ ದಾಖಲಿಸಿದೆ.

ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸ್ ನಿರ್ವಹಿಸುತ್ತಿರುವ ರೀತಿಯ ಬಗ್ಗೆ ಅಸಾಮಾಧಾನ ವ್ಯಕ್ತಪಡಿಸಿರುವ ಕಂಗನಾ ಪೊಲೀಸ್ ಹಾಗೂ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಕ್ಷರಶಃ ಕಾದಾಟಕ್ಕಿಳಿದಿದ್ದಾಳೆ. ಮುಂಬೈ ನಗರವನ್ನು ಆಕೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ ನಂತರ ಶಿವ ಸೇನೆಯ ಕಾರ್ಯಕರ್ತರು ಆಕೆಗೆ ತಕ್ಕ ಶಾಸ್ತಿ ಮಾಡುವುದಾಗಿ ಪಣತೊಟ್ಟಿದ್ದಾರೆ. ಕೊವಿಡ್-19 ಸೋಂಕು ಶುರುವಾದಾಗಿನಿಂದ ಹಿಮಾಚಲ ಪ್ರದೇಶದಲಲ್ಲಿದ್ದ ಕಂಗನಾಗೆ ಮುಂಬೈಯಲ್ಲಿ ಕಾಲಿಡಲು ಬಿಡುವುದಿಲ್ಲ ಅಂತ ಸೇನೆಯ ಕಾರ್ಯಕರ್ತರು ಬೆದರಿಕೆಯೊಡ್ಡಿದ್ದರು. ಆದರೆ, ರಾಷ್ಟ್ರ ಪ್ರಶಸ್ತಿ ವಿಜೇತ ನಟಿಯು Z ಪ್ಲಸ್ ಭದ್ರತೆಯೊಂದಿಗೆ ನಿನ್ನೆ ಶಿಮ್ಲಾದಿಂದ ಮುಂಬೈಗೆ ಆಗಮಿಸಿದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್