AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆಯಾಗುವ ದಿನ ಸುಶಾಂತ್, ಡ್ರಗ್ ಡೀಲರ್​ನನ್ನು ಭೇಟಿಯಾಗಿದ್ದ: ಸುಬ್ರಮಣಿಯನ್ ಸ್ವಾಮಿ

ವಿವಾದಾತ್ಮಕ ವ್ಯಕ್ತಿಯೆಂದೇ ಗುರುತಿಸಿಕೊಂಡಿರುವ ಬಿಜೆಪಿ ಸಂಸದ ಮತ್ತ ಹೆಸರಾಂತ ವಕೀಲ ಸುಬ್ರಮಣಿಯನ್ ಸ್ವಾಮಿ ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಕುರಿತು ದಿಗ್ಭ್ರಮೆ ಹುಟ್ಟಿಸುವ ಸಂಗತಿಗಳನ್ನ್ನು ತಮ್ಮ ಸೋಷಿಯಲ್ ಮಿಡಿಯಾ ಅಕೌಂಟ್​ನಲ್ಲಿ ಹಂಚಿಕೊಂಡಿದ್ದಾರೆ. ಸುಶಾಂತ್ ಸಿಂಗ್ ಅವರಿಗೆ ದುಬೈನೊಂದಿಗೆ ಒಡನಾಟವಿಟ್ಟುಕೊಂಡಿರುವ ಒಬ್ಬ ಡ್ರಗ್ ಡೀಲರ್​ನೊಂದಿಗೆ ಸಂಪರ್ಕವಿತ್ತು ಎಂಬ ಆಘಾತಕಾರಿ ವಿಷಯವನ್ನು ಸ್ವಾಮಿ ತಮ್ಮ ಟ್ವಿಟ್ಟರ್ ಅಕೌಂಟ್​ನಲ್ಲಿ ಬರೆದುಕೊಂಡಿದ್ದಾರೆ. ಅವರ ಪೋಸ್ಟ್​ನಲ್ಲಿ ಗಮನಿಸಬೇಕಾದ ಮತ್ತೊಂದು ಕುತೂಹಲಕಾರಿ ಅಂಶವೆಂದರೆ, ಸುಶಾಂತ್ ಸಿಂಗ್ ಸಾವನ್ನು ಉಲ್ಲೇಖಿಸುವಾಗ ಅದನ್ನು ಸಾವು ಎನ್ನದೆ, […]

ಕೊಲೆಯಾಗುವ ದಿನ ಸುಶಾಂತ್, ಡ್ರಗ್ ಡೀಲರ್​ನನ್ನು ಭೇಟಿಯಾಗಿದ್ದ: ಸುಬ್ರಮಣಿಯನ್ ಸ್ವಾಮಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 25, 2020 | 3:30 PM

Share

ವಿವಾದಾತ್ಮಕ ವ್ಯಕ್ತಿಯೆಂದೇ ಗುರುತಿಸಿಕೊಂಡಿರುವ ಬಿಜೆಪಿ ಸಂಸದ ಮತ್ತ ಹೆಸರಾಂತ ವಕೀಲ ಸುಬ್ರಮಣಿಯನ್ ಸ್ವಾಮಿ ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಕುರಿತು ದಿಗ್ಭ್ರಮೆ ಹುಟ್ಟಿಸುವ ಸಂಗತಿಗಳನ್ನ್ನು ತಮ್ಮ ಸೋಷಿಯಲ್ ಮಿಡಿಯಾ ಅಕೌಂಟ್​ನಲ್ಲಿ ಹಂಚಿಕೊಂಡಿದ್ದಾರೆ.

ಸುಶಾಂತ್ ಸಿಂಗ್ ಅವರಿಗೆ ದುಬೈನೊಂದಿಗೆ ಒಡನಾಟವಿಟ್ಟುಕೊಂಡಿರುವ ಒಬ್ಬ ಡ್ರಗ್ ಡೀಲರ್​ನೊಂದಿಗೆ ಸಂಪರ್ಕವಿತ್ತು ಎಂಬ ಆಘಾತಕಾರಿ ವಿಷಯವನ್ನು ಸ್ವಾಮಿ ತಮ್ಮ ಟ್ವಿಟ್ಟರ್ ಅಕೌಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಅವರ ಪೋಸ್ಟ್​ನಲ್ಲಿ ಗಮನಿಸಬೇಕಾದ ಮತ್ತೊಂದು ಕುತೂಹಲಕಾರಿ ಅಂಶವೆಂದರೆ, ಸುಶಾಂತ್ ಸಿಂಗ್ ಸಾವನ್ನು ಉಲ್ಲೇಖಿಸುವಾಗ ಅದನ್ನು ಸಾವು ಎನ್ನದೆ, ‘ಕೊಲೆ’ ಎಂದು ಹೇಳುತ್ತಾರೆ.

‘‘ಸುನಂದಾ ಪುಷ್ಕರ್ ಸಾವು ಹೇಗೆ ಸಂಭವಿಸಿತು ಎನ್ನುವುದಕ್ಕೆ ಎ ಐ ಐ ಎಮ್ ಎಸ್​ನ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸುಳಿವು ಸಿಕ್ಕಿತ್ತು. ಆದರೆ, ಶ್ರೀದೇವಿ ಹಾಗೂ ಸುಶಾಂತ್ ಅವರ ಪ್ರಕರಣಗಳಲ್ಲಿ ಹಾಗಾಗಲಿಲ್ಲ. ಸುಶಾಂತ್ ಪ್ರಕರಣದಲ್ಲಿ ಹೇಳುವುದಾದರೆ, ಆತ ‘ಕೊಲೆ‘ಯಾಗುವ ದಿನ ದುಬೈನೊಂದಿಗೆ ಒಡನಾಟವಿಟ್ಟುಕೊಂಡಿದ್ದ ಆಯಷ್ ಖಾನ್ ಎಂಬ ಹೆಸರಿನ ಡ್ರಗ್ ಡೀಲರ್​ನನ್ನು ಭೇಟಿಗಾಗಿದ್ದ. ಯಾಕೆ?’’ ಎಂದು ಸ್ವಾಮಿ ಸೋಮವಾರದಂದು ಟ್ವೀಟ್ ಮಾಡಿದ್ದಾರೆ.

ಮಂಗಳವಾರದಂದು ಸುಶಾಂತ್ ಕುರಿತು ಮತ್ತೊಂದು ಟ್ವೀಟ್ ಮಾಡಿರುವಸುಬ್ರಮಣಿಯನ್ ಸ್ವಾಮಿ, ದಿವಂಗತ ನಟನ ಮರಣೋತ್ತರ ಪರೀಕ್ಷೆಯನ್ನು ಉದ್ದೇಶಪೂರ್ವಕವಾಗಿ ವಿಳಂಬಿಸಲಾಯಿತೆಂದು ಆಪಾದಿಸಿದ್ದಾರೆ. ಸುಶಾಂತ್​ನ ದೇಹವನ್ನು ಹೊಕ್ಕಿದ್ದ ವಿಷ ಸಂಪೂರ್ಣವಾಗಿ, ಅಂದರೆ ಅದನ್ನು ಪತ್ತೆಹಚ್ಚಲಾಗದ ಮಟ್ಟಿಗೆ ದೇಹದಲ್ಲಿ ಕರಗಿಹೋಗಲಿ ಎಂಬ ಕಾರಣಕ್ಕೆ ಮರಣೋತ್ತರ ಪರೀಕ್ಷೆಯನ್ನು ನಿಧಾನಿಸಲಾಯಿತಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ

‘‘ಕೊಲೆಗಡುಕರ ಪೈಶಾಚಿಕ ಮನಸ್ಥಿತಿ ಹಾಗೂ ಅವರ ಪ್ರಭಾವ ಕ್ರಮೇಣವಾಗಿ ಬಯಲಾಗುತ್ತಿದೆ. ಎಸ್ ಎಸ್ ಆರ್​ನ ಹೊಟ್ಟೆಯಲ್ಲಿದ್ದ ವಿಷವನ್ನು ಪಚನಕ್ರಿಯೆ ನಡೆಸುವ ದ್ರವಗಳು ಅದನ್ನು ಪತ್ತೆ ಹಚ್ಚಲಾಗದ ಮಟ್ಟಿಗೆ ಕರಗಿಸಲಿ ಎಂಬ ಕಾರಣಕ್ಕೆ ಮರಣೋತ್ತರ ಪರೀಕ್ಷೆಯನ್ನು ಬಲವಂತವಾಗಿ ಹಾಗೂ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಯಿತು. ಹಾಗೆ ಮಾಡಲು ಕಾರಣರಾದವರನ್ನು ಶಿಕ್ಷೆಗೆ ಗುರಿಪಡಿಸಲು ಇದು ಸೂಕ್ತ ಸಮಯ,’’ ಎಂದು ಸ್ವಾಮಿ ಹೇಳಿದ್ದಾರೆ.

ಏತನ್ಮಧ್ಯೆ, ಸುಶಾಂತ್ ಸಾವಿನ ತನಿಖೆಯನ್ನು ಮುಂದುವರಿಸಿರುವ ಕೇಂದ್ರ ತನಿಖಾ ದಳ (ಸಿಬಿಐ) ನಟನ ಗೆಳತಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಕುಟುಂಬದ ಇತರ ಸದಸ್ಯರನ್ನು ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!