AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos ಉತ್ತಮ ಸಮಾಜಕ್ಕಾಗಿ ಕೈ ಜೋಡಿಸಿದ ಕೋನಸಾಗರದ ಯುವಪಡೆ.. ನೀವೂ ಕಣ್ತುಂಬಿಕೊಳ್ಳಿ!

ಮನರಂಜನೆ ಮತ್ತು ಮನೋವಿಕಾಸ ಎರಡೂ ಒಟ್ಟೊಟ್ಟಿಗೆ!! ಸ್ವಚ್ಛ, ಸುಂದರ ಮತ್ತು ಹಸಿರು ಗ್ರಾಮ ನಿರ್ಮಾಣಕ್ಕೆ ಪಣತೊಟ್ಟ ಯುವಪಡೆ ರಂಗೋಲಿ ಸ್ಪರ್ಧೆಯ ಮೂಲಕವೂ ಸ್ವಚ್ಛತೆಯ ಕುರಿತು ಕಾಳಜಿ ಮೂಡಿಸುವ ಕ್ರಿಯಾಶೀಲ ಆಲೋಚನೆಗೆ ಕೈ ಹಾಕಿದೆ.

Photos ಉತ್ತಮ ಸಮಾಜಕ್ಕಾಗಿ ಕೈ ಜೋಡಿಸಿದ ಕೋನಸಾಗರದ ಯುವಪಡೆ.. ನೀವೂ ಕಣ್ತುಂಬಿಕೊಳ್ಳಿ!
ರಂಗೋಲಿ ಸ್ಪರ್ಧೆಯ ಜೊತೆಗೆ ಸ್ವಚ್ಛತೆಯ ಸಂದೇಶ ಸಾರುವ ತಂಡ
Follow us
Skanda
| Updated By: ಸಾಧು ಶ್ರೀನಾಥ್​

Updated on: Jan 18, 2021 | 11:40 AM

ಚಿತ್ರದುರ್ಗ: ಮನೆ ಮುಂದೆ ರಂಗೋಲಿ ಬಿಡಿಸುವುದರಲ್ಲಿ ತಲ್ಲೀನರಾದ ಮಹಿಳೆಯರು, ಗಿಡ, ಮರಗಳ ಪೋಷಣೆಯಲ್ಲಿ ತೊಡಗಿಸಿಕೊಂಡ ಯುವ ಸಮೂಹ, ಇಡೀ ಊರಿಗೆ ಊರನ್ನೇ ಸ್ವಚ್ಛಗೊಳಿಸುತ್ತಿರುವ ಗ್ರಾಮಸ್ಥರು.. ಈ ದೃಶ್ಯ ಕಂಡು ಬಂದಿದ್ದು ಮೊಳಕಾಲ್ಮೂರು ತಾಲ್ಲೂಕಿನ ಕೋನಸಾಗರ ಗ್ರಾಮದಲ್ಲಿ.

ಕೋನಸಾಗರ ಗ್ರಾಮದ ಶ್ರೀನಿತ್ಯ ಪರಿವರ್ತನಂ ಸಾಂಭುಯಾ ಟ್ರಸ್ಟ್ ಹೆಸರಿನಲ್ಲಿ ಗ್ರಾಮದ ಯುವಕರು ಕಳೆದ 7 ವರ್ಷಗಳಿಂದ ಸೇವಾ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಂಕ್ರಾಂತಿ ಹಬ್ಬದ ಅಂಗವಾಗಿ ಸ್ವಚ್ಛತಾ ಕೆಲಸ ಮತ್ತು ಪರಿಸರ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿರುವ ಯುವಕರು ಮನರಂಜನೆಗಾಗಿ ವಿವಿಧ ಸ್ಪರ್ಧೆಯನ್ನೂ ಆಯೋಜಿಸುತ್ತಿದ್ದಾರೆ. ಈ ಮೂಲಕ ಯುವ ಸಮೂಹ ಸಕಾರಾತ್ಮಕ ಯೋಚನೆಯಲ್ಲಿ ತೊಡಗಿಸಿಕೊಂಡು ಒಂದಾಗಿ ಕೆಲಸ ಮಾಡಿದರೆ ಸಮಾಜದಲ್ಲಿ ಯಾವ ಮಟ್ಟದ ಬದಲಾವಣೆಯನ್ನೂ ತರಬಹುದು ಎನ್ನುವುದಕ್ಕೆ ಅತ್ಯುತ್ತಮ ಉದಾಹರಣೆಯಾಗಿದ್ದಾರೆ.

ಗ್ರಾಮಸ್ಥರೆಲ್ಲರನ್ನೂ ಸೇರಿಸಿಕೊಂಡು ಊರನ್ನು ಚೊಕ್ಕಗೊಳಿಸುತ್ತಾ ಗಿಡಮರ ಬೆಳೆಸುವ ಕಾಯಕದಲ್ಲಿ ತೊಡಗಿಕೊಂಡಿರುವ ಯುವಕರು ಸ್ವಚ್ಛ, ಸುಂದರ ಮತ್ತು ಹಸಿರು ಗ್ರಾಮ ಪರಿಕಲ್ಪನೆಯಲ್ಲಿ ಹೆಜ್ಜೆಹಾಕುತ್ತಿದ್ದಾರೆ. ಗ್ರಾಮದ ಹಿರಿಯರು, ಮಹಿಳೆಯರು, ಯುವಕರು ಮತ್ತು ಮಕ್ಕಳನ್ನು ಒಳಗೊಳ್ಳುವ ಉದ್ದೇಶದಿಂದ ವಿವಿಧ ಬಗೆಯ ಸ್ಪರ್ಧೆಗಳನ್ನೂ ಆಯೋಜಿಸಿ ಗಮನ ಸೆಳೆಯುತ್ತಿದ್ದಾರೆ.

ಮಹಿಳೆಯರಿಗಾಗಿ ಏರ್ಪಡಿಸುವ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ₹2,000, ದ್ವಿತೀಯ ಬಹುಮಾನ ₹1,500, ತೃತೀಯ ಬಹುಮಾನ ₹1,000 ಮತ್ತು 15 ಸಮಾಧಾನಕರ ಬಹುಮಾನ ನೀಡಲಾಗುತ್ತಿದ್ದು, ರಂಗೋಲಿಯ ಸೌಂದರ್ಯದ ಜೊತೆಗೆ ಸ್ವಚ್ಛತೆ ಮತ್ತು ಪರಿಸರ ಕಾಳಜಿ ಬಗ್ಗೆ ಗಮನಹರಿಸಿ ಬಹುಮಾನ ನೀಡುವ ಯುವಕರ ಕ್ರಿಯಾತ್ಮಕ ಆಲೋಚನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗ್ರಾಮದಲ್ಲಿನ ಬಹುತೇಕ ಮನೆಯವರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಯುವಕರ ಸಾಮಾಜಿಕ ಕಳಕಳಿಗೆ ಬೆಂಬಲ ಸೂಚಿಸುತ್ತಿದ್ದಾರೆ.

ಆಧುನಿಕತೆಯ ಭರಾಟೆಯಲ್ಲಿ ತಮ್ಮದೇ ಲೋಕದಲ್ಲಿ ಮುಳುಗಿ ಸಮಾಜವನ್ನು ಕಡೆಗಣಿಸುವವರ ನಡುವೆ, ಸಮಾಜದ ಒಳಿತಿಗಾಗಿ ಪಣತೊಟ್ಟು ನಿಂತಿರುವ ಕೋನಸಾಗರ ಗ್ರಾಮದ ಯುವಕರು ಎಲ್ಲರಿಗೂ ಮಾದರಿಯಾಗಿದ್ದಾರೆ. ಇಂತಹ ಕ್ರಿಯಾಶೀಲ ಯೋಜನೆಗಳಲ್ಲಿ ಯುವಸಮೂಹ ಹೆಚ್ಚೆಚ್ಚು ತೊಡಗಿಸಿಕೊಂಡರೆ ಮಾತ್ರ ಒಂದು ಸಧೃಡ ಸಮಾಜವನ್ನು ನಿರ್ಮಿಸುವುದು ಸಾಧ್ಯ.

ಸರ್ಕಾರದ ಯೋಜನೆಗಳಿಗಾಗಿ ಕಾಯದೆ ನಮ್ಮಿಂದಾಗುವ ಕೆಲಸ ನಾವೇ ಮಾಡಿಕೊಳ್ಳುವುದು ಒಳಿತು. ನಮ್ಮ ಗ್ರಾಮವನ್ನು, ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಕರ್ತವ್ಯ.‌ ಊರು ಸುಂದರವಾಗಿದ್ದಷ್ಟೂ ಉತ್ತಮ ಆರೋಗ್ಯ ಮತ್ತು ಖುಷಿ ನಮ್ಮದಾಗುತ್ತದೆ. ಆ ಕಾರಣಕ್ಕಾಗಿ ಕಳೆದ 7 ವರ್ಷಗಳಿಂದ ಸ್ವಚ್ಛತೆ, ಪರಿಸರ ಕಾಳಜಿಯ ಕುರಿತು ಜಾಗೃತಿ ಮೂಡಿಉವ ಸ್ಪರ್ಧೆಗಳನ್ನು ಏರ್ಪಡಿಸುತ್ತಿದ್ದೇವೆ. ಮಲ್ಲಿಕಾರ್ಜುನ್, ಶ್ರೀನಿತ್ಯ ಪರಿವರ್ತನಂ ಸಾಂಭುಯಾ ಟ್ರಸ್ಟ್ ಕಾರ್ಯದರ್ಶಿ

ಆಧುನಿಕ ತಂತ್ರಜ್ಞಾನದ ಅಳವಡಿಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ -ಉಲ್ಲಾಸ ಕಾರಂತ

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ