AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ ಸುದ್ದಿ! ಮೇ 17ರ ಬಳಿಕ ತಿಮ್ಮಪ್ಪನ ದರ್ಶನ ಭಾಗ್ಯ ಸಿಗುತ್ತದಾ?

ತಿರುಪತಿ: ಮಾರ್ಚ್ 19ರಿಂದ ಕೊರೊನಾ ಕಾರಣಕ್ಕೆ ಭಕ್ತರಿಗೆ ತಿಮ್ಮಪ್ಪನ ದರ್ಶನ ಭಾಗ್ಯ ಇಲ್ಲದಂತಾಗಿದೆ. ಟಿಟಿಡಿ ತಾತ್ಕಾಲಿಕವಾಗಿ ಭಕ್ತರಿಗೆ ಪ್ರವೇಶ ನಿಲ್ಲಿಸಿದೆ. ಸತತ 52 ದಿನಗಳ ಬಳಿಕ ಇದೀಗ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಣಿಸುತ್ತಿರೋ ಒಂದೊಂದು ಸುಳಿವು ಭಕ್ತರಿಗೆ ಶುಭ ಸುದ್ದಿ ನೀಡುವ ಸಂಕೇತಗಳಾಗಿವೆ. ಮೇ 17ರ ಬಳಿಕ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ ಸಿಗುತ್ತದೆಯೇ? ಇಂಥದ್ದೊಂದು ಚರ್ಚೆ ಹುಟ್ಟು ಹಾಕಿರೋದಕ್ಕೆ ಕಾರಣ ದೇವಾಲಯದಲ್ಲಿ ಹಾಕಿರುವ ಸಾಮಾಜಿಕ ಅಂತರದ ಗುರುತುಗಳು. ತಿಮ್ಮಪ್ಪನ ದರ್ಶನಕ್ಕೆ ಕ್ಯೂನಲ್ಲಿ ಬರುವ ಭಕ್ತರು ಸಾಮಾಜಿಕ ಅಂತರ […]

ಶುಭ ಸುದ್ದಿ! ಮೇ 17ರ ಬಳಿಕ ತಿಮ್ಮಪ್ಪನ ದರ್ಶನ ಭಾಗ್ಯ ಸಿಗುತ್ತದಾ?
ಸಾಧು ಶ್ರೀನಾಥ್​
|

Updated on: May 13, 2020 | 2:48 PM

Share

ತಿರುಪತಿ: ಮಾರ್ಚ್ 19ರಿಂದ ಕೊರೊನಾ ಕಾರಣಕ್ಕೆ ಭಕ್ತರಿಗೆ ತಿಮ್ಮಪ್ಪನ ದರ್ಶನ ಭಾಗ್ಯ ಇಲ್ಲದಂತಾಗಿದೆ. ಟಿಟಿಡಿ ತಾತ್ಕಾಲಿಕವಾಗಿ ಭಕ್ತರಿಗೆ ಪ್ರವೇಶ ನಿಲ್ಲಿಸಿದೆ. ಸತತ 52 ದಿನಗಳ ಬಳಿಕ ಇದೀಗ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಣಿಸುತ್ತಿರೋ ಒಂದೊಂದು ಸುಳಿವು ಭಕ್ತರಿಗೆ ಶುಭ ಸುದ್ದಿ ನೀಡುವ ಸಂಕೇತಗಳಾಗಿವೆ. ಮೇ 17ರ ಬಳಿಕ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ ಸಿಗುತ್ತದೆಯೇ? ಇಂಥದ್ದೊಂದು ಚರ್ಚೆ ಹುಟ್ಟು ಹಾಕಿರೋದಕ್ಕೆ ಕಾರಣ ದೇವಾಲಯದಲ್ಲಿ ಹಾಕಿರುವ ಸಾಮಾಜಿಕ ಅಂತರದ ಗುರುತುಗಳು.

ತಿಮ್ಮಪ್ಪನ ದರ್ಶನಕ್ಕೆ ಕ್ಯೂನಲ್ಲಿ ಬರುವ ಭಕ್ತರು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಬಿಳಿ ಬಣ್ಣದ ಗುರುತುಗಳನ್ನು ಮಾಡಲಾಗಿದೆ. ಇಂಥದ್ದೊಂದು ಗುರುತುಗಳು ಟಿಟಿಡಿಯ ಸಿದ್ಧತೆಯ ಸೂಚನೆಗಳನ್ನು ನೀಡುತ್ತಿವೆ. ಸತತ 52 ದಿನಗಳ ಕಾಲ ಆದಾಯವೇ ಇಲ್ಲದೇ ನಡೆಯುತ್ತಿರೋ ತಿಮ್ಮಪ್ಪನ ದೇವಾಲಯವನ್ನು ತೆಗೆಯೋದಕ್ಕೆ ಟಿಟಿಡಿ ನಿರ್ಧರಿಸಿದೆ ಅನ್ನೋ ಅನುಮಾನ ಮೂಡಿಸುತ್ತಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವ ಆದೇಶ ನೋಡಿಕೊಂಡೇ ಟಿಟಿಡಿ ತೀರ್ಮಾನಕ್ಕೆ ಬರಲು ಮುಂದಾಗಿದೆ. ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಲೇ ಭಕ್ತರಿಗೆ ದರ್ಶನ ನೀಡುವ ವ್ಯವಸ್ಥೆ ಕಲ್ಪಿಸೋದಕ್ಕೆ ಟಿಟಿಡಿ ಮುಂದಾಗಿದೆ ಅನ್ನೋ ಚರ್ಚೆ ನಡೀತಿದೆ. ವಿಶ್ವದ ಶ್ರೀಮಂತ ದೇವರ ದೇಗುಲ ತೆರೆಯೋದು ಅದೆಷ್ಟು ಮುಖ್ಯ ಗೊತ್ತಾ? ಪ್ರತೀ ನಿಮಿಷಗಳ ಲೆಕ್ಕದಲ್ಲಿ ಲಕ್ಷಾಂತರ ರೂಪಾಯಿಗಳ ಲೆಕ್ಕದಲ್ಲಿ ದೇವಾಲಯ ದುಡಿಯುತ್ತಿದೆ. ಅದು ಹೇಗೆ ಅಂತೀರಾ? ಇಲ್ಲಿ ಓದಿ..

ತಿಮ್ಮಪ್ಪನ ಹುಂಡಿಗೆ ಪ್ರತೀ ವರ್ಷ ಕಡಿಮೆ ಅಂದ್ರೂ ಸಾವಿರ ಕೋಟಿ ರೂಪಾಯಿ ಬಂದು ಬೀಳುತ್ತದೆ. ಇದುವೇ ದೇವಾಲಯದ ಬಹುದೊಡ್ಡ ಆದಾಯ ಮೂಲ. ಇದನ್ನು ಬಿಟ್ರೆ ಈ ತನಕ ರಾಷ್ಟ್ರೀಯ ಬ್ಯಾಂಕ್​ಗಳಲ್ಲಿ ಠೇವಣಿ ಇಟ್ಟಿರೋ 9 ಟನ್ ಚಿನ್ನಕ್ಕೆ ಬಡ್ಡಿ ರೂಪದಲ್ಲಿ ಪ್ರತೀ ವರ್ಷ 100 ಕೆಜಿ ಚಿನ್ನ ನೀಡಲಾಗುತ್ತದೆ. ಇನ್ನು, ಗೋವಿಂದನ ಹೆಸರಿನಲ್ಲಿ ಸ್ಥಿರ ಠೇವಣಿ ಇಟ್ಟಿರೋ 14 ಸಾವಿರ ಕೋಟಿ ರೂಪಾಯಿಗೆ ಪ್ರತೀ ವರ್ಷ 845 ಕೋಟಿ ರೂಪಾಯಿ ಬಡ್ಡಿ ಸಿಗುತ್ತದೆ.

ವಿಐಪಿ, ವಿವಿಐಪಿ ಟಿಕೆಟ್ ಮಾರಾಟದಿಂದಾಗಿ ಟಿಟಿಡಿಗೆ ಕನಿಷ್ಠ 250 ಕೋಟಿ ರೂಪಾಯಿ ವಾರ್ಷಿಕ ಆದಾಯ ಸಲ್ಲುತ್ತದೆ. ಇನ್ನು, ತಿಮ್ಮಪ್ಪನ ಮಹಾಪ್ರಸಾದ ಲಡ್ಡು ಮಾರಾಟದಿಂದಲೂ ಟಿಟಿಡಿಗೆ ಪ್ರತೀ ವರ್ಷ ಕನಿಷ್ಠ 200 ಕೋಟಿ ರೂಪಾಯಿ ಲಾಭ ದೊರೆಯುತ್ತದೆ. ಇದೆಲ್ಲಕ್ಕಿಂತಲೂ ವಿಶೇಷ ಅನಿಸೋ ಆದಾಯದ ಮೂಲ ತಿಮ್ಮಪ್ಪನಿಗೆ ಭಕ್ತರು ಸಮರ್ಪಿಸೋ ಮುಡಿ ಕೂದಲು!

ಹೌದು, ಮುಡಿ ಕೂದಲನ್ನು ಟಿಟಿಡಿ ಪ್ರತೀ ವರ್ಷ ಹರಾಜು ಹಾಕುತ್ತದೆ. ಈ ಹರಾಜು ಪ್ರಕ್ರಿಯೆಯಲ್ಲಿ ಮುಡಿಯಿಂದಾಗಿಯೇ ಟಿಟಿಡಿ ಖಜಾನೆಗೆ ಪ್ರತೀ ವರ್ಷ ಕನಿಷ್ಠ ನೂರು ಕೋಟಿ ಸೇರುತ್ತದೆ.

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ