AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟೊಟೊ ಅವಾರ್ಡ್ 2021’ ರ ಅಂತಿಮ ಸುತ್ತಿನಲ್ಲಿ ಅಮೂಲ್ಯಾ ಬಿ, ಸಂದೀಪ ಈಶಾನ್ಯ, ಸ್ನೇಹಜಯಾ ಕಾರಂತ

‘ಟೊಟೊ ಪುರಸ್ಕಾರ 2021’ ರ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ಕನ್ನಡ ಸೃಜನಶೀಲ ಬರೆವಣಿಗೆಯಲ್ಲಿ ಅಮೂಲ್ಯಾ. ಬಿ, ಸಂದೀಪ ಈಶಾನ್ಯ, ಸ್ನೇಹಜಯಾ ಕಾರಂತ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ.

‘ಟೊಟೊ ಅವಾರ್ಡ್ 2021’ ರ ಅಂತಿಮ ಸುತ್ತಿನಲ್ಲಿ ಅಮೂಲ್ಯಾ ಬಿ, ಸಂದೀಪ ಈಶಾನ್ಯ, ಸ್ನೇಹಜಯಾ ಕಾರಂತ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jan 02, 2021 | 1:51 PM

Share

‘ಟೊಟೊ ಪುರಸ್ಕಾರ 2021’ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ಕನ್ನಡ ಸೃಜನಶೀಲ ಬರೆವಣಿಗೆಯಲ್ಲಿ ಅಮೂಲ್ಯಾ. ಬಿ, ಸಂದೀಪ ಈಶಾನ್ಯ, ಸ್ನೇಹಜಯಾ ಕಾರಂತ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ.

ಕನ್ನಡದ ಸೃಜನಶೀಲ ಯುವ ಬರಹಗಾರರ ವಿಭಾಗದಲ್ಲಿ ವಿಜೇತರಾದವರಿಗೆ 50,000 ರೂಪಾಯಿಗಳ ನಗದು ಬಹುಮಾನವನ್ನು ನೀಡಲಿದ್ದು, ಫೆಬ್ರವರಿಯಲ್ಲಿ ಅಂತಿಮ ವಿಜೇತರ ಹೆಸರನ್ನು ಘೋಷಿಸಲಾಗುವುದು ಎಂದು ಟೊಟೊ ಸಂಸ್ಥೆ ತಿಳಿಸಿದೆ.

ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊ ಪುರಸ್ಕಾರವು ಹದಿನೈದು ವರ್ಷಗಳಿಂದ ಯುವ ಪ್ರತಿಭೆಗಳಿಗೆ ಪ್ರೊತ್ಸಾಹ ನೀಡುತ್ತಾ ಬಂದಿದೆ. ಕಳೆದ ಹತ್ತು ವರ್ಷಗಳಿಂದ ಕನ್ನಡದ ಯುವಬರಹಗಾರರಿಗೂ ಈ ಪ್ರಶಸ್ತಿ ನೀಡಲಾಗುತ್ತಿದೆ.  ಟಿ.ಎಫ್.ಎ. (Toto Funds the Arts) ಸಂಸ್ಥೆಯು ಆಂಗಿರಸ ‘ಟೊಟೊ’ ವೆಲ್ಲಾನಿಯ ಸ್ಮರಣಾರ್ಥ 2004 ರಲ್ಲಿ ಇದು  ಸ್ಥಾಪಿತವಾಯಿತು. ಕಲೆಗಳ ಬಗ್ಗೆ ಗಾಢವಾದ ಆಸಕ್ತಿಯನ್ನಿರಿಸಿಕೊಂಡಿದ್ದ ಟೊಟೊರವರ ಅಕಾಲಿಕ ಮರಣವು ಅವರ ಕುಟುಂಬ ಮತ್ತು ಸ್ನೇಹಿತರನ್ನು ಈ ಸಂಸ್ಥೆಯ ಸ್ಥಾಪನೆಗೆ ಪ್ರೇರೇಪಿಸಿತು. ಈ ಮೂಲಕ ಯುವ ಪ್ರತಿಭೆಗಳು ತಮ್ಮ ಕಲಾತ್ಮಕ ಅಭಿವ್ಯಕ್ತಿಯನ್ನು ಕಂಡುಕೊಳ್ಳುವಲ್ಲಿ ಉತ್ತೇಜನ ಸಿಗಲಿ ಎನ್ನುವುದು ಇದರ ಆಶಯವಾಗಿದೆ.

2020 Year in Review | ಇಲ್ಲಿದೆ ಜನಮೆಚ್ಚಿದ ಹಾಡುಗಳ ಪಟ್ಟಿ; ಕೇಳಿ ಆನಂದಿಸಿ

Published On - 1:28 pm, Sat, 2 January 21

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!