AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀರ್ಣಕ್ರಿಯೆ ಸರಿಯಾಗಿ ನಡೆಸಿ ತೂಕ ಇಳಿಸುತ್ತಂತೆ ಹಸಿ ಮೆಣಸಿನಕಾಯಿ

ಕರ್ನಾಟಕದಲ್ಲಿ ಒಂದೊಂದು ಕಡೆ ಒಂದೊಂದು ರೀತಿಯ ಆಹಾರಶೈಲಿ ಪಾಲಿಸುತ್ತಾರೆ. ಅದರಲ್ಲೂ ಉತ್ತರ ಕರ್ನಾಟಕದವರು ತಮ್ಮ ಅಡುಗೆಯಲ್ಲಿ ಹಸಿ ಮೆಣಸಿನಕಾಯಿ ಹೆಚ್ಚಾಗಿಯೇ ಬಳಸುತ್ತಾರೆ. ಆದರೆ ಹಸಿ ಮೆಣಸಿನಕಾಯಿಯಲ್ಲಿರುವ ಅದ್ಭುತ ಗುಣದ ಬಗ್ಗೆ ತಿಳಿದರೆ ಖಾರ ತಿನ್ನದವರು ಕೂಡ ಹಸಿ ಮೆಣಸಿನಕಾಯಿ ಬಳಸಲು ಪ್ರಾರಂಭಿಸುತ್ತಾರೆ. ಹೌದು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿರುವ ಲೈಫ್‌ಸ್ಟೈಲ್‌ ಸಮಸ್ಯೆಯೆಂದರೆ ಮೈ ತೂಕ ಹೆಚ್ಚಾಗುವುದು. ದಪ್ಪಗಿರುವವರಿಗೆ ಮೈ ತೂಕ ಕಡಿಮೆ ಮಾಡುವುದು ಹೇಗೆ ಎನ್ನುವುದೇ ದೊಡ್ಡ ಸಮಸ್ಯೆಯಾಗಿದೆ. ಮೈ ತೂಕ ಕಡಿಮೆ ಮಾಡಲು ಬಯಸುವವರಿಗೆ ಹಸಿ […]

ಜೀರ್ಣಕ್ರಿಯೆ ಸರಿಯಾಗಿ ನಡೆಸಿ ತೂಕ ಇಳಿಸುತ್ತಂತೆ ಹಸಿ ಮೆಣಸಿನಕಾಯಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 08, 2019 | 2:39 PM

Share

ಕರ್ನಾಟಕದಲ್ಲಿ ಒಂದೊಂದು ಕಡೆ ಒಂದೊಂದು ರೀತಿಯ ಆಹಾರಶೈಲಿ ಪಾಲಿಸುತ್ತಾರೆ. ಅದರಲ್ಲೂ ಉತ್ತರ ಕರ್ನಾಟಕದವರು ತಮ್ಮ ಅಡುಗೆಯಲ್ಲಿ ಹಸಿ ಮೆಣಸಿನಕಾಯಿ ಹೆಚ್ಚಾಗಿಯೇ ಬಳಸುತ್ತಾರೆ. ಆದರೆ ಹಸಿ ಮೆಣಸಿನಕಾಯಿಯಲ್ಲಿರುವ ಅದ್ಭುತ ಗುಣದ ಬಗ್ಗೆ ತಿಳಿದರೆ ಖಾರ ತಿನ್ನದವರು ಕೂಡ ಹಸಿ ಮೆಣಸಿನಕಾಯಿ ಬಳಸಲು ಪ್ರಾರಂಭಿಸುತ್ತಾರೆ.

ಹೌದು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿರುವ ಲೈಫ್‌ಸ್ಟೈಲ್‌ ಸಮಸ್ಯೆಯೆಂದರೆ ಮೈ ತೂಕ ಹೆಚ್ಚಾಗುವುದು. ದಪ್ಪಗಿರುವವರಿಗೆ ಮೈ ತೂಕ ಕಡಿಮೆ ಮಾಡುವುದು ಹೇಗೆ ಎನ್ನುವುದೇ ದೊಡ್ಡ ಸಮಸ್ಯೆಯಾಗಿದೆ. ಮೈ ತೂಕ ಕಡಿಮೆ ಮಾಡಲು ಬಯಸುವವರಿಗೆ ಹಸಿ ಮೆಣಸಿನಕಾಯಿ ಹಾಕಿ ಮಾಡಿರುವ ಅಡುಗೆ ಪ್ರಯೋಜನಕಾರಿಯಾಗಿದೆ.

ತೂಕ ಇಳಿಸುವುದಕ್ಕೆ ಹೆಚ್ಚುಸಹಕಾರಿ: ಹಸಿ ಮೆಣಸಿನಕಾಯಿ ಚಯಾಪಚಯ ಕ್ರಿಯೆ ವೇಗವಾಗಿ ನಡೆಯುವಂತೆ ಮಾಡುತ್ತದೆ. ಖಾರದ ಆಹಾರವನ್ನು ತಿನ್ನುವುದರಿಂದ ನಿಮ್ಮ ಚಯಾಪಚಯ ಕ್ರಿಯೆ ಉತ್ತಮವಾಗಿ ನಡೆಯುವುದು. ತೂಕ ಇಳಿಕೆಗೆ ಪ್ರಮುಖವಾಗಿ ಚಯಾಪಚಯ ಕ್ರಿಯೆ ಚೆನ್ನಾಗಿ ನಡೆಯಬೇಕು. ಆಗ ಜೀರ್ಣಕ್ರಿಯೆ ಸರಿಯಾಗಿ ನಡೆಯುವುದು, ಇದರಿಂದ ತೂಕ ಇಳಿಕೆಗೆ ಸಹಕಾರಿ.

ಹಸಿ ಮೆಣಸಿನಕಾಯಿಯಲ್ಲಿ ಕ್ಯಾಪ್ಸಿಯಾಸಿನ್ ಅಂಶವಿದ್ದು ಇದು ಹೊಟ್ಟೆಬೊಜ್ಜು ಕರಗಿಸುವಲ್ಲಿ ಸಹಕಾರಿ ಎಂದು 2008ರಲ್ಲಿ ಅಮೆರಿಕ್ ಜರ್ನಲ್ ಆಫ್‌ ಕ್ಲಿನಿಕಲ್ ನ್ಯೂಟ್ರಿಷಿಯನ್‌ ನಲ್ಲಿ ಪ್ರಕಟವಾದ ಅಧ್ಯಯನ ವರದಿಯಲ್ಲಿ ಹೇಳಲಾಗಿದೆ. ಮಧುಮೇಹಿಗಳು ತಮ್ಮ ಮೈ ತೂಕ ಕಡಿಮೆ ಮಾಡಲು ಹಾಗೂ ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ಆಹಾರದಲ್ಲಿ ಹಸಿ ಮೆಣಸಿನಕಾಯಿ ಬಳಸುವುದು ಒಳ್ಳೆಯದು. ಇದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಿಸುವುದರ ಜೊತೆಗೆ ತೂಕ ಕಡಿಮೆಯಾಗಲು ಸಹಾಯ ಮಾಡುವುದು.

ತ್ವಚೆಯ ಕಾಂತಿಯನ್ನು ವೃದ್ಧಿಸುತ್ತದೆ: ಹಸಿ ಮೆಣಸಿನಕಾಯಿಯಲ್ಲಿ ವಿಟಮಿನ್ ಸಿ, ವಿಟಮಿನ್ ಬಿ6, ವಿಟಮಿನ್ ಎ, ಕಬ್ಬಿಣದಂಶ, ಸತು, ಪೊಟಾಷ್ಯಿಯಂ ಹಾಗೂ ಸ್ವಲ್ಪ ಪ್ರಮಾಣದಲ್ಲಿ ಕಾರ್ಬೋಹೈಡ್ರೇಟ್ಸ್ ಅಂಶವಿದೆ. ಇದರಲ್ಲಿ ವಿಟಮಿನ್ ಸಿ ಇರುವುದರಿಂದ ತ್ವಚೆ ಅರೋಗ್ಯ ಹೆಚ್ಚಿಸಿ, ತ್ವಚೆ ಕಾಂತಿಯುತವಾಗಿ ಕಾಣುವಂತೆ ಮಾಡುವುದು. ಇನ್ನು ವಿಟಮಿನ್ ಸಿ ರೋಗ ನಿರೋಧಕ ಶಕ್ತಿ ಹೆಚ್ಚು ಶೀತ ತಡೆಗಟ್ಟುವಲ್ಲಿ ಸಹಕಾರಿ.

ಅಜೀರ್ಣ ಸಮಸ್ಯೆ ಇರುವವರು ತಮ್ಮ ಆಹಾರದಲ್ಲಿ ಹಸಿ ಮೆಣಸಿನಕಾಯಿ ಸೇರಿಸಿದರೆ ಜೀರ್ಣಕ್ರಿಯೆ ಚೆನ್ನಾಗಿ ನಡೆಯುವುದು. ಮಲಬದ್ಧತೆ ಸಮಸ್ಯೆ ಇರುವವರು ಹಸಿ ಮೆಣಸಿನಕಾಯಿ ಜೀರ್ಣಕ್ರಿಯೆಗೆ ಸಹಾಯ ಮಾಡುವುದರಿಂದ ಇದನ್ನು ನಮ್ಮ ಆಹಾರ ಕ್ರಮದಲ್ಲಿ ಬಳಸುವುದು ಒಳ್ಳೆಯದು.

ಹಸಿ ಮೆಣಸಿನಕಾಯಿ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸುವುದು, ರಕ್ತ ಹೆಪ್ಪು ಗಟ್ಟುವುದನ್ನು ತಡೆಗಟ್ಟುತ್ತದೆ. ಸಂಧಿವಾತ, ಉರಿಯೂತ ಸಮಸ್ಯೆ ಇರುವವರು ಹಸಿ ಮೆಣಸಿನಕಾಯಿ ತಿಂದರೆ ಇದರಲ್ಲಿರುವ ಕ್ಯಾಪ್ಸಿಯಾಸಿನ್ ಅಂಶ ಸಂಧಿವಾತ ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಹಸಿ ಮೆಣಸಿನಕಾಯಿಯಲ್ಲಿ ಸಿಲಿಕಾನ್ಸ್ ಅಂಶವಿದ್ದು ಇದು ತಲೆಬುಡದಲ್ಲಿ ರಕ್ತ ಸಂಚಾರ ಚೆನ್ನಾಗಿ ನಡೆಯುವಂತೆ ಮಾಡುವುದರಿಂದ ಕೂದಲಿನ ಬುಡ ಬಲವಾಗುವುದು.

ಉಸಿರಾಟದ ತೊಂದರೆ ನಿವಾರಿಸಲು ಉಪಕಾರಿ: ಹಸಿ ಮೆಣಸಿನಕಾಯಿಯಲ್ಲಿರುವ ವಿಟಮಿನ್ ಎ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಉಸಿರಾಟದ ತೊಂದರೆ ನಿವಾರಿಸುವಲ್ಲಿ ಹಸಿ ಮೆಣಸಿನಕಾಯಿ ಸಹಕಾರಿಯಾಗಿದೆ. ಅಸ್ತಮಾ, ಕೆಮ್ಮು, ಶೀತ ಈ ಸಮಸ್ಯೆ ಕಡಿಮೆ ಮಾಡುವಲ್ಲಿ ಹಸಿಮೆಣಸಿನಕಾಯಿ ಹಾಕಿದ ಆಹಾರ ಪರಿಣಾಮಕಾರಿಯಾಗಿದೆ. ಆದ್ದರಿಂದ ಇನ್ನು ಮುಂದೆ ಅಡುಗೆಯಲ್ಲಿ ಖಾರದ ಪುಡಿ ಬದಲಿಗೆ ಹಸಿ ಮೆಣಸಿನಕಾಯಿ ಬಳಕೆ ಹೆಚ್ಚು ಮಾಡಿ.

ಖಾರದ ಪುಡಿಗೆ ಹೋಲಿಸಿದರೆ ಹಸಿ ಮೆಣಸಿನಕಾಯಿ ಹೆಚ್ಚು ಆರೋಗ್ಯಕರವಾಗಿದೆ. ಹಸಿ ಮೆಣಸಿನಕಾಯಿಯಲ್ಲಿ ಕಾರದ ಪುಡಿಗಿಂತ ಬೀಟಾ ಕೆರೋಟಿನ್, ಆ್ಯಂಟಿ ಅಕ್ಸಿಡೆಂಟ್ ಅಂಶ ಹೆಚ್ಚಿದೆ. ಇನ್ನು ಖಾರದ ಪುಡಿಯಲ್ಲಿ ಕೃತಕ ಬಣ್ಣ ಬಳಸಿರುವ ಸಾಧ್ಯತೆ ಇದೆ. ಹಸಿ ಮೆಣಸಿನಕಾಯಿಯಲ್ಲಿ ಯಾವುದೇ ಕೃತಕ ಬಣ್ಣ ಇರುವುದಿಲ್ಲ. ಹಸಿ ಮೆಣಸಿನಕಾಯಿ ಆರೋಗ್ಯಕ್ಕೆ ಒಳ್ಳೆಯದು ಎಂದು ತುಂಬಾ ತಿನ್ನಬೇಡಿ, ಮಿತಿಯಲ್ಲಿ ತಿನ್ನಿ, ಇಲ್ಲದಿದ್ದರೆ ಹೊಟ್ಟೆ ಉರಿ ಉಂಟಾಗುವುದು.

Published On - 2:19 pm, Fri, 8 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!