AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಆ ದಿನಗಳ ನೋವನ್ನ ಹೀಗೆ ನಿಭಾಯಿಸಬಹುದು!

ಹೆಚ್ಚಿನ ಮಹಿಳೆಯರಿಗೆ ಮಾಸಿಕ ದಿನಗಳೆಂದರೆ ಕೇವಲ ನೋವಿನ ದಿನಗಳು ಮಾತ್ರವಲ್ಲ, ಮಾನಸಿಕವಾಗಿಯೂ ಹಲವಾರು ಕಿರಿಕಿರಿಗಳ ದಿನಗಳಾಗಿರುತ್ತವೆ. ಈ ದಿನಗಳೇ ಏಕಪ್ಪಾ ಬರುತ್ತವೆ ಎನ್ನುವಂತಾಗುತ್ತವೆ. ಆದರೆ ಇದು ನಿಸರ್ಗ ನಿಯಮವಾಗಿದ್ದು ನೋವು ಕೊಡುವ ನಿಸರ್ಗವೇ ಇದರ ಪರಿಹಾರವನ್ನೂ ಒದಗಿಸಿದೆ. ಈ ಸಮಯದಲ್ಲಿ ಕೆಲವು ಆಹಾರಗಳನ್ನು ಸೇವಿಸುವ ಮೂಲಕ ನೋವು ಕಡಿಮೆಯಾಗುವ ಜೊತೆಗೆ ಮಾನಸಿಕ ಕಿರಿಕಿರಿಯನ್ನು ಎದುರಿಸಿ ಸ್ಥಿಮಿತ ಕಾಯ್ದುಕೊಳ್ಳಲೂ ಸಾಧ್ಯವಾಗುತ್ತದೆ. ಹದಿಹರೆಯದಿಂದ ಪ್ರಾರಂಭವಾಗುವ ಈ ದಿನಗಳು ರಜೋನಿವೃತ್ತಿಯವರೆಗೂ ಪ್ರತಿತಿಂಗಳೂ ಸಂಭವಿಸುವುದು ನೈಸರ್ಗಿಕ. ಆದರೆ ಈ ಅವಧಿಯಲ್ಲಿ ಕೆಲವು ಆಹಾರಗಳನ್ನು […]

ಮಹಿಳೆಯರ ಆ ದಿನಗಳ ನೋವನ್ನ ಹೀಗೆ ನಿಭಾಯಿಸಬಹುದು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 20, 2019 | 8:52 PM

Share

ಹೆಚ್ಚಿನ ಮಹಿಳೆಯರಿಗೆ ಮಾಸಿಕ ದಿನಗಳೆಂದರೆ ಕೇವಲ ನೋವಿನ ದಿನಗಳು ಮಾತ್ರವಲ್ಲ, ಮಾನಸಿಕವಾಗಿಯೂ ಹಲವಾರು ಕಿರಿಕಿರಿಗಳ ದಿನಗಳಾಗಿರುತ್ತವೆ. ಈ ದಿನಗಳೇ ಏಕಪ್ಪಾ ಬರುತ್ತವೆ ಎನ್ನುವಂತಾಗುತ್ತವೆ. ಆದರೆ ಇದು ನಿಸರ್ಗ ನಿಯಮವಾಗಿದ್ದು ನೋವು ಕೊಡುವ ನಿಸರ್ಗವೇ ಇದರ ಪರಿಹಾರವನ್ನೂ ಒದಗಿಸಿದೆ. ಈ ಸಮಯದಲ್ಲಿ ಕೆಲವು ಆಹಾರಗಳನ್ನು ಸೇವಿಸುವ ಮೂಲಕ ನೋವು ಕಡಿಮೆಯಾಗುವ ಜೊತೆಗೆ ಮಾನಸಿಕ ಕಿರಿಕಿರಿಯನ್ನು ಎದುರಿಸಿ ಸ್ಥಿಮಿತ ಕಾಯ್ದುಕೊಳ್ಳಲೂ ಸಾಧ್ಯವಾಗುತ್ತದೆ. ಹದಿಹರೆಯದಿಂದ ಪ್ರಾರಂಭವಾಗುವ ಈ ದಿನಗಳು ರಜೋನಿವೃತ್ತಿಯವರೆಗೂ ಪ್ರತಿತಿಂಗಳೂ ಸಂಭವಿಸುವುದು ನೈಸರ್ಗಿಕ. ಆದರೆ ಈ ಅವಧಿಯಲ್ಲಿ ಕೆಲವು ಆಹಾರಗಳನ್ನು ಸೇವಿಸುವ ಮೂಲಕ ನೈಸರ್ಗಿಕ ಕ್ರಿಯೆಯ ಪರಿಣಾಮಗಳನ್ನು ಸುಲಭವಾಗಿ ಎದುರಿಸಲು ದೇಹವನ್ನು ಸಜ್ಜುಗೊಳಿಸಬಹುದು.

ಸೇವಿಸಬೇಕಾದ ಆಹಾರಗಳು: ಹಲವು ಬಗೆಯ ಪೋಷಕಾಂಶಗಳಿಂದ ಕೂಡಿರುವ ಹಾಲು ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯುತ್ತಮ ಆಹಾರವಾಗಿದೆ. ಇದರಲ್ಲಿರುವ ಕ್ಯಾಲ್ಸಿಯಂ ಹಾಗೂ ಇತರ ಪೋಷಕಾಂಶಗಳು ಕಳೆದುಕೊಂಡ ರಕ್ತವನ್ನು ಮತ್ತೆ ನವೀಕರಿಸಲು ನೆರವಾಗುತ್ತವೆ.

ಮಾಸಿಕ ದಿನಗಳಲ್ಲಿ ವಿಟಮಿನ್ ಇ ಅತಿ ಅಗತ್ಯವಾಗಿ ಬೇಕಾಗಿರುವ ಪೋಷಕಾಂಶವಾಗಿದೆ. ಬಾದಾಮಿಯಲಿ ಇದು ಹೇರಳವಾಗಿದ್ದು ಕೆಳಹೊಟ್ಟೆಯ ಉಬ್ಬರಿಕೆ ಮತ್ತು ನೋವನ್ನು ಕಡಿಮೆಗೊಳಿಸಲು ಬಹಳ ಹೆಚ್ಚಿನ ನೆರವು ನೀಡುತ್ತದೆ.

ಈ ಅವಧಿಯಲ್ಲಿ ಹಸಿರು ಮತ್ತು ದಪ್ಪನೆಯ ಎಲೆಗಳಿರುವ ಸೊಪ್ಪುಗಳನ್ನು ತಿನ್ನುವುದು ಅಗತ್ಯ. ವಿಶೇಷವಾಗಿ ಬಸಲೆ ಸೊಪ್ಪು ಮತ್ತು ಪಾಲಕ್. ಇವುಗಳಲ್ಲಿ ಅತ್ಯಧಿಕ ಪ್ರಮಾಣದ ಕಬ್ಬಿಣದ ಅಂಶವಿದ್ದು ರಕ್ತದ ಉತ್ಪಾದನೆಗೆ ನೆರವು ನೀಡುತ್ತದೆ. ಹೆಚ್ಚಿನ ಕಬ್ಬಿಣ ಸಿಗುವ ಮೂಲಕ ಉರಿಯೂತ ಮತ್ತು ನೋವನ್ನು ಕಡಿಮೆಯಾಗಿಸುತ್ತದೆ.

ದಿನಕ್ಕೊಂದು ಸೇಬು ಮಾಸಿಕ ನೋವನ್ನೂ ದೂರವಿರಿಸಬಲ್ಲುದು. ಇದರಲ್ಲಿ ಉತ್ತಮ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಕರಗುವ ನಾರು ವಿಶೇಷವಾಗಿ ಮಲಬದ್ದತೆಯಾಗದಂತೆ ತಡೆದು ಮಾಸಿಕ ದಿನಗಳಲ್ಲಿ ಕನಿಷ್ಟ ನೋವಾಗುವಲ್ಲಿ ಸಹಕರಿಸುತ್ತದೆ.

ಕಪ್ಪು ಚಾಕಲೇಟಿನಲ್ಲಿಯೂ ಆಂಟಿ ಆಕ್ಸಿಡೆಂಟುಗಳು ಹೇರಳವಾಗಿದ್ದು ಮಾಸಿಕ ದಿನಗಳ ಉರಿಯೂತ, ನೋವು ಮತ್ತು ಸಂಕಟವನ್ನು ನಿವಾರಿಸಲು ನೆರವಾಗುತ್ತದೆ. ಅಲ್ಲದೇ ಈ ಪೋಷಕಾಂಶಗಳು ಅತಿ ಕಡಿಮೆ ಸಮಯದಲ್ಲಿ ರಕ್ತದಲ್ಲಿ ಹೀರಲ್ಪಡುವ ಕಾರಣ ನೋವನ್ನು ತಕ್ಷಣವೇ ಕಡಿಮೆಗೊಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ ನೋವು ಕಾಣಿಸಿಕೊಳ್ಳುವಂತೆ ಅನ್ನಿಸುತ್ತಿದ್ದಾಗಲೇ ಕೊಂಚ ಕಪ್ಪು ಚಾಕಲೇಟು ತಿಂದರೆ ನೋವು ವಿಪರೀತವಾಗುವುದಿಲ್ಲ.

ಮಾಸಿಕ ದಿನಗಳಲ್ಲಿ ತಿನ್ನಲೇಬೇಕಾದ ಇನ್ನೊಂದು ಆಹಾರವೆಂದರೆ ಬಾಳೆಹಣ್ಣು. ಇದರಲ್ಲಿ ಹೆಚ್ಚಿನ ಪ್ರಮಾಣದ ಮೆಗ್ನೀಶಿಯಂ ಇದ್ದು ಕೆಳಹೊಟ್ಟೆಯ ನೋವು ಮತ್ತು ಸೆಡೆತಗಳಿಂದ ರಕ್ಷಿಸುತ್ತದೆ. ಅಲ್ಲದೇ ಇದರಲ್ಲಿರುವ ಕರಗದ ನಾರು ಮಲಬದ್ದತೆಯಾಗದಂತೆ ಸಹಕರಿಸುತ್ತದೆ. ವಿಶೇಷವಾಗಿ ಮಾಸಿಕ ದಿನಗಳಲ್ಲಿ ಮನೋಭಾವನೆ ಏರುಪೇರಾಗದಿರಲು ಬಾಳೆಹಣ್ಣಿನ ಸೇವನೆ ಉತ್ತಮವಾಗಿದೆ.

ಅಗಸೆ ಬೀಜ ಸಹಾ ಮಾಸಿಕ ದಿನಗಳಲ್ಲಿ ಸೇವಿಸಲು ಯೋಗ್ಯವಾದ ಆಹಾರವಾಗಿದೆ. ಇದರಲ್ಲಿ ಉತ್ತಮ ಪ್ರಮಾಣದ ಒಮೆಗಾ 3 ಕೊಬ್ಬಿನ ಆಮ್ಲವಿದ್ದು ಕೆಳಹೊಟ್ಟೆಯ ನೋವನ್ನು ಕಡಿಮೆ ಮಾಡುವ ಕ್ಷಮತೆ ಹೊಂದಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ