AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿಯ ಐದನೇ ದಿನ ಸ್ಕಂದಮಾತಾ ಆರಾಧನೆ ಹೇಗೆ ಮಾಡಬೇಕು?

ನವರಾತ್ರಿಯ ಒಂಬತ್ತು ದಿನವೂ ದುರ್ಗೆಯ ಆರಾಧನೆಗೆ ಪ್ರಶಸ್ತ. ಈ ವೇಳೆ ನವದುರ್ಗೆಯರನ್ನು ಆರಾಧಿಸೋದು ವಿಶೇಷ. ನವರಾತ್ರಿಯ ಐದನೇ ದಿನ ಕರುಣೆ ತುಂಬಿದ ಸ್ಕಂದಮಾತಾ ದೇವಿಯ ಆರಾಧನೆಗೆ ಮೀಸಲು. ನವದುರ್ಗೆಯರಲ್ಲಿ ಸ್ಕಂದಮಾತೆಯದ್ದು ಐದನೇ ರೂಪ. ಪುರಾಣದ ಪ್ರಕಾರ, ದುರ್ಗೆಗೆ ಸ್ಕಂದಮಾತಾ ಎಂದು ಹೆಸರು ಬರಲು ಒಂದು ಕಾರಣವಿದೆ. ಅದೇನಂದ್ರೆ, ಪಾತಾಳಲೋಕದಲ್ಲಿರುವ ತಾರಕಾಸುರ ಎಂಬ ರಾಕ್ಷಸನನ್ನು ವಧೆ ಮಾಡಲು, ದೇವಿ ಸ್ಕಂದನಿಗೆ ಜನ್ಮ ಕೊಡ್ತಾಳೆ. ಆದ್ದರಿಂದ ಈಕೆಯನ್ನು ಸ್ಕಂದಮಾತಾ ಅಂತಾ ಕರೆಯಲಾಗುತ್ತೆ. ಸ್ಕಂದಮಾತೆಯ ರೂಪ ಅತ್ಯಂತ ವಿಶಿಷ್ಟ. ಈ ದೇವಿ […]

ನವರಾತ್ರಿಯ ಐದನೇ ದಿನ ಸ್ಕಂದಮಾತಾ ಆರಾಧನೆ ಹೇಗೆ ಮಾಡಬೇಕು?
ಸಾಧು ಶ್ರೀನಾಥ್​
| Edited By: |

Updated on:Oct 21, 2020 | 8:29 AM

Share

ನವರಾತ್ರಿಯ ಒಂಬತ್ತು ದಿನವೂ ದುರ್ಗೆಯ ಆರಾಧನೆಗೆ ಪ್ರಶಸ್ತ. ಈ ವೇಳೆ ನವದುರ್ಗೆಯರನ್ನು ಆರಾಧಿಸೋದು ವಿಶೇಷ. ನವರಾತ್ರಿಯ ಐದನೇ ದಿನ ಕರುಣೆ ತುಂಬಿದ ಸ್ಕಂದಮಾತಾ ದೇವಿಯ ಆರಾಧನೆಗೆ ಮೀಸಲು. ನವದುರ್ಗೆಯರಲ್ಲಿ ಸ್ಕಂದಮಾತೆಯದ್ದು ಐದನೇ ರೂಪ. ಪುರಾಣದ ಪ್ರಕಾರ, ದುರ್ಗೆಗೆ ಸ್ಕಂದಮಾತಾ ಎಂದು ಹೆಸರು ಬರಲು ಒಂದು ಕಾರಣವಿದೆ.

ಅದೇನಂದ್ರೆ, ಪಾತಾಳಲೋಕದಲ್ಲಿರುವ ತಾರಕಾಸುರ ಎಂಬ ರಾಕ್ಷಸನನ್ನು ವಧೆ ಮಾಡಲು, ದೇವಿ ಸ್ಕಂದನಿಗೆ ಜನ್ಮ ಕೊಡ್ತಾಳೆ. ಆದ್ದರಿಂದ ಈಕೆಯನ್ನು ಸ್ಕಂದಮಾತಾ ಅಂತಾ ಕರೆಯಲಾಗುತ್ತೆ. ಸ್ಕಂದಮಾತೆಯ ರೂಪ ಅತ್ಯಂತ ವಿಶಿಷ್ಟ. ಈ ದೇವಿ ಸಿಂಹದ ಮೇಲೆ ಕುಳಿತಿರುತ್ತಾಳೆ. ಶ್ವೇತವರ್ಣಳಾಗಿ ಸುಂದರವಾಗಿ ಕಾಣುತ್ತಾಳೆ.

ನಾಲ್ಕು ಭುಜಗಳನ್ನು ಹೊಂದಿದ್ದು, ಎರಡು ಕೈಗಳಲ್ಲಿ ಕಮಲಗಳನ್ನು ಹಿಡಿದಿರುತ್ತಾಳೆ. ಇನ್ನು ತಾಯಿಯ ಬಲ ತೊಡೆಯ ಮೇಲೆ ತಾನು ಜನ್ಮ ನೀಡಿದ ಸ್ಕಂದನನ್ನು ಕೂರಿಸಿಕೊಂಡಿರ್ತಾಳೆ. ಸ್ಕಂದಮಾತೆಯದ್ದು ಕರುಣೆ ತುಂಬಿದ ತಾಯಿಯ ರೂಪವಾಗಿದೆ. ಮಾತೃ ಹೃದಯಿ ಆಗಿರುವ ಸ್ಕಂದಮಾತೆಯನ್ನು ಆರಾಧಿಸಲು ವಿಶೇಷ ಮಂತ್ರವಿದೆ. ಈ ಮಂತ್ರವನ್ನು ಜಪಿಸಿದ್ರೆ ಶೀಘ್ರ ಫಲಗಳನ್ನು ಪಡೆಯಬಹುದು ಅನ್ನೋ ನಂಬಿಕೆ ಇದೆ.

ಸ್ಕಂದಮಾತಾ ಮಂತ್ರ

ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ

ನವರಾತ್ರಿಯ ಐದನೇ ದಿನ ಪುರಾಣದ ಪ್ರಕಾರ ಅತ್ಯಂತ ಮಹತ್ವದ್ದು ಎಂದು ಉಲ್ಲೇಖವಿದೆ. ಈ ದಿನ ವಿಶೇಷವಾಗಿ ಸ್ಕಂದಮಾತೆಯನ್ನು ಪೂಜಿಸಿದ್ರೆ ಆದಿಶಕ್ತಿಯ ಸಂಪೂರ್ಣ ಆಶೀರ್ವಾದ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಸ್ಕಂದಮಾತೆಯ ಆರಾಧನೆಯಿಂದ ಏನೆಲ್ಲ ಫಲಗಳು ಪ್ರಾಪ್ತಿಯಾಗುತ್ವೆ.

ಸ್ಕಂದಮಾತಾ ಪೂಜಾ ಫಲಗಳು ಈಕೆ ತಪ್ಪಿತಸ್ಥರ ಪಾಲಿನ ಕ್ಷಮಯಾಧರಿತ್ರಿ. ಸುಖ, ಪರಮಶಾಂತಿಯನ್ನು ನೀಡ್ತಾಳೆ. ಸ್ಕಂದಮಾತಾ ಪೂಜೆಯಿಂದ ಮೋಕ್ಷ ಪ್ರಾಪ್ತಿ. ಸ್ಕಂದಮಾತಾ ಆರಾಧನೆಯಿಂದ ಸಾತ್ವಿಕ ಕಳೆ ಬರುತ್ತೆ. ಸ್ಕಂದಮಾತಾ ಸ್ಮರಣೆಯಿಂದ ಸ್ಕಂದನನ್ನು ಪೂಜಿಸಿದ ಪುಣ್ಯಪ್ರಾಪ್ತಿ.

Published On - 1:56 pm, Thu, 3 October 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ