AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿಯ ಆರನೇ ದಿನ ದೇವಿಯ ಯಾವ ರೂಪ ಆರಾಧಿಸಬೇಕು?

ನವರಾತ್ರಿಯ ಆರನೇ ದಿನ ಕಾತ್ಯಾಯಿನಿ ಆರಾಧನೆ ವಿಶೇಷ. ನವದುರ್ಗೆಯರಲ್ಲಿ ಕಾತ್ಯಾಯಿನಿಯದ್ದು ಆರನೇ ರೂಪ. ತ್ರಿಮೂರ್ತಿಗಳ ಅಂಶವೇ ಈ ದೇವಿ. ಈಕೆಯನ್ನು ಮೊದಲು ಕಾತ್ಯಾಯನ ಋಷಿ ಪೂಜಿಸಿದ್ದರಿಂದ ಇವಳಿಗೆ ಕಾತ್ಯಾಯಿನಿ ಎಂಬ ಹೆಸರು ಬಂತು. ಕಾತ್ಯಾಯಿನಿ ಅಂದ್ರೆ ಪರೋಪಕಾರದ ಪ್ರತಿರೂಪ. ಈ ದೇವಿಯದ್ದು ಅತ್ಯಂತ ಭವ್ಯ ಸ್ವರೂಪ. ಇವಳು ಸದಾ ಬಂಗಾರದಂತೆ ಹೊಳೆಯುತ್ತಾಳೆ. ಈ ದೇವಿಗೆ ನಾಲ್ಕು ಭುಜಗಳಿವೆ. ಬಲಗಡೆಯ ಮೇಲಿನ ಕೈ ಅಭಯ ಮುದ್ರೆಯಲ್ಲಿದೆ. ಬಲಗಡೆಯ ಕೆಳಗಿನ ಕೈ ವರಮುದ್ರೆಯಲ್ಲಿದೆ. ಎಡಗಡೆಯ ಮೇಲಿನ ಕೈಯಲ್ಲಿ ಖಡ್ಗವಿದೆ. ಎಡಗಡೆಯ […]

ನವರಾತ್ರಿಯ ಆರನೇ ದಿನ ದೇವಿಯ ಯಾವ ರೂಪ ಆರಾಧಿಸಬೇಕು?
ಸಾಧು ಶ್ರೀನಾಥ್​
|

Updated on:Oct 04, 2019 | 2:37 PM

Share

ನವರಾತ್ರಿಯ ಆರನೇ ದಿನ ಕಾತ್ಯಾಯಿನಿ ಆರಾಧನೆ ವಿಶೇಷ. ನವದುರ್ಗೆಯರಲ್ಲಿ ಕಾತ್ಯಾಯಿನಿಯದ್ದು ಆರನೇ ರೂಪ. ತ್ರಿಮೂರ್ತಿಗಳ ಅಂಶವೇ ಈ ದೇವಿ. ಈಕೆಯನ್ನು ಮೊದಲು ಕಾತ್ಯಾಯನ ಋಷಿ ಪೂಜಿಸಿದ್ದರಿಂದ ಇವಳಿಗೆ ಕಾತ್ಯಾಯಿನಿ ಎಂಬ ಹೆಸರು ಬಂತು. ಕಾತ್ಯಾಯಿನಿ ಅಂದ್ರೆ ಪರೋಪಕಾರದ ಪ್ರತಿರೂಪ. ಈ ದೇವಿಯದ್ದು ಅತ್ಯಂತ ಭವ್ಯ ಸ್ವರೂಪ. ಇವಳು ಸದಾ ಬಂಗಾರದಂತೆ ಹೊಳೆಯುತ್ತಾಳೆ. ಈ ದೇವಿಗೆ ನಾಲ್ಕು ಭುಜಗಳಿವೆ. ಬಲಗಡೆಯ ಮೇಲಿನ ಕೈ ಅಭಯ ಮುದ್ರೆಯಲ್ಲಿದೆ. ಬಲಗಡೆಯ ಕೆಳಗಿನ ಕೈ ವರಮುದ್ರೆಯಲ್ಲಿದೆ. ಎಡಗಡೆಯ ಮೇಲಿನ ಕೈಯಲ್ಲಿ ಖಡ್ಗವಿದೆ. ಎಡಗಡೆಯ ಕೆಳಗಿನ ಕೈಯಲ್ಲಿ ಕಮಲವಿದೆ. ಕಾತ್ಯಾಯಿನಿ ದುಷ್ಟರನ್ನು ಸಂಹರಿಸುವ, ಶಿಷ್ಟರ ಉದ್ಧಾರ ಮಾಡುವ ಶಕ್ತಿದೇವತೆ. ಈಕೆಯನ್ನು ಮಂತ್ರ ಸಹಿತವಾಗಿ ಆರಾಧಿಸಿದ್ರೆ ದುಷ್ಟಶಕ್ತಿಗಳು ನಾಶವಾಗುತ್ತವೆ ಎಂಬ ನಂಬಿಕೆ ಇದೆ.

ಕಾತ್ಯಾಯಿನಿ ಮಂತ್ರ

ಚಂದ್ರಹಾಸೋಜ್ವಲಕರಾ ಶಾರ್ದೂಲವರವಾಹನಾ ಕಾತ್ಯಾಯನೀ ಶುಭಂ ದದ್ಯಾದ್ದೇವಿ ದಾನವಘಾತಿನೀ

ಕಲಿಯುಗದಲ್ಲಿ ಕಾತ್ಯಾಯಿನಿ ಮೋಕ್ಷ ನೀಡ್ತಾಳೆ ಅಂತಾ ನಮ್ಮ ಪುರಾಣಗಳು ಹೇಳುತ್ತವೆ. ಶ್ರೀಕೃಷ್ಣ ಪರಮಾತ್ಮನನ್ನು ಪತಿಯಾಗಿ ಪಡೆಯಲು ಗೋಪಿಕೆಯರು ಈ ದೇವಿಯನ್ನು ಪೂಜಿಸಿದ್ರಂತೆ. ನವರಾತ್ರಿಯ ಆರನೇ ದಿನ ಈ ತಾಯಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಿದ್ರೆ ವಿಶೇಷ ಫಲಗಳನ್ನು ಪಡೆಯಬಹುದು ಎನ್ನಲಾಗುತ್ತೆ.

ಕಾತ್ಯಾಯಿನಿ ದೇವಿ ಪೂಜಾ ಫಲಗಳು

* ಅಮೋಘ ಫಲಗಳನ್ನು ಕರುಣಿಸ್ತಾಳೆ * ಧರ್ಮ, ಅರ್ಥ, ಕಾಮ, ಮೋಕ್ಷ ಪ್ರಾಪ್ತಿ * ರೋಗಗಳು ದೂರ * ಶೋಕ ಪರಿಹಾರ * ಭಯ ನಿವಾರಣೆ * ಜನ್ಮ ಜನ್ಮಾಂತರದ ಪಾಪ ಪರಿಹಾರ * ಉತ್ತಮ ಪದವಿ ಪ್ರಾಪ್ತಿ * ಶತ್ರುಗಳ ಶತ್ರುತ್ವ ಗುಣ ಧ್ವಂಸ * ಸುಖಶಾಂತಿ, ನೆಮ್ಮದಿ ಪ್ರಾಪ್ತಿ 

Published On - 2:34 pm, Fri, 4 October 19

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ