ಮಾಂಗಲ್ಯದ ಜೊತೆಗೆ ಕರಿಮಣಿ ಕಡ್ಡಾಯವಾಗಿ ಧರಿಸಲೇಬೇಕಾ..?

ನಮ್ಮ ಭಾರತೀಯ ಸಂಪ್ರದಾಯದಲ್ಲಿ ಪ್ರತಿಯೊಂದು ಆಚರಣೆಗೂ ಒಂದೊಂದು ಸಾಂಪ್ರದಾಯಿಕ ಮಹತ್ವವಿದೆ. ಹಾಗೆಯೇ ಅದರ ಹಿಂದೆ ವೈಜ್ಞಾನಿಕ ಪ್ರಜ್ಞೆಯೂ ಇರುತ್ತೆ. ಅದಕ್ಕೊಂದು ಉತ್ತಮ ಉದಾಹರಣೆ ಎಂದರೆ ಸುಮಂಗಲಿಯರು ಧರಿಸುವ ಕರಿಮಣಿ. ಕರಿಮಣಿ ಸರ ಸ್ತ್ರೀಯರು ಮದುವೆಯಾಗಿರುವುದರ ಸಂಕೇತ. ಮಂಗಳಕರವಾದ, ಸೌಭಾಗ್ಯವಾದ ಆಭರಣ. ಮುತ್ತೈದೆಯರು ಕರಿಮಣಿ ಜೊತೆಗೆ ತಾಳಿ, ಕುಂಕುಮ, ಗಾಜಿನ ಬಳೆ, ಕಾಲುಂಗುರ, ಮುಡಿಗೆ ಅರಳಿದ ಹೂವು ಧರಿಸಿದ್ದರೆ ಸುಮಂಗಲಿ ಎನಿಸಿಕೊಳ್ತಾರೆ. ಆದ್ರೆ ಇಂದು ಆಧುನಿಕತೆಯ ಮೋಹಕ್ಕೆ ಒಳಗಾಗಿರುವ ಗೃಹಿಣಿಯರು ಸೌಭಾಗ್ಯದ ಸೂಚಕವಾದ ಇವುಗಳನ್ನು ಧರಿಸುವುದರಲ್ಲಿ ಆಸಕ್ತಿ ವಹಿಸುತ್ತಿಲ್ಲ. […]

ಮಾಂಗಲ್ಯದ ಜೊತೆಗೆ ಕರಿಮಣಿ ಕಡ್ಡಾಯವಾಗಿ ಧರಿಸಲೇಬೇಕಾ..?
Follow us
|

Updated on:Oct 14, 2019 | 1:56 PM

ನಮ್ಮ ಭಾರತೀಯ ಸಂಪ್ರದಾಯದಲ್ಲಿ ಪ್ರತಿಯೊಂದು ಆಚರಣೆಗೂ ಒಂದೊಂದು ಸಾಂಪ್ರದಾಯಿಕ ಮಹತ್ವವಿದೆ. ಹಾಗೆಯೇ ಅದರ ಹಿಂದೆ ವೈಜ್ಞಾನಿಕ ಪ್ರಜ್ಞೆಯೂ ಇರುತ್ತೆ. ಅದಕ್ಕೊಂದು ಉತ್ತಮ ಉದಾಹರಣೆ ಎಂದರೆ ಸುಮಂಗಲಿಯರು ಧರಿಸುವ ಕರಿಮಣಿ. ಕರಿಮಣಿ ಸರ ಸ್ತ್ರೀಯರು ಮದುವೆಯಾಗಿರುವುದರ ಸಂಕೇತ. ಮಂಗಳಕರವಾದ, ಸೌಭಾಗ್ಯವಾದ ಆಭರಣ. ಮುತ್ತೈದೆಯರು ಕರಿಮಣಿ ಜೊತೆಗೆ ತಾಳಿ, ಕುಂಕುಮ, ಗಾಜಿನ ಬಳೆ, ಕಾಲುಂಗುರ, ಮುಡಿಗೆ ಅರಳಿದ ಹೂವು ಧರಿಸಿದ್ದರೆ ಸುಮಂಗಲಿ ಎನಿಸಿಕೊಳ್ತಾರೆ. ಆದ್ರೆ ಇಂದು ಆಧುನಿಕತೆಯ ಮೋಹಕ್ಕೆ ಒಳಗಾಗಿರುವ ಗೃಹಿಣಿಯರು ಸೌಭಾಗ್ಯದ ಸೂಚಕವಾದ ಇವುಗಳನ್ನು ಧರಿಸುವುದರಲ್ಲಿ ಆಸಕ್ತಿ ವಹಿಸುತ್ತಿಲ್ಲ.

ಕರಿಮಣಿ ಧರಿಸೋದ್ರಿಂದ ಏನೇನು ಲಾಭವಾಗುತ್ತೆ ಗೊತ್ತಾ..? ಸಂಪ್ರದಾಯವನ್ನು ಎತ್ತಿ ಹಿಡಿಯುವ ಮಂಗಳಕರ ಆಭರಣಗಳನ್ನು ಧರಿಸುವುದರಿಂದ ನಾರಿ ಪೂಜನೀಯಳಾಗ್ತಾಳೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ದುಷ್ಟಶಕ್ತಿಗಳ ದೃಷ್ಟಿ ಮಾಂಗಲ್ಯದ ಮೇಲೆ ಬೀಳದಂತಿರಲು ಕರಿಮಣಿಯನ್ನು ಗೃಹಿಣಿಯರು ಧರಿಸ್ತಾರೆ. ಅಷ್ಟೇ ಅಲ್ಲದೇ, ಕರಿಮಣಿಯು ಸಂತಾನ ಸಾಫಲ್ಯ, ಧನ, ಸುಖದ ಚಿಹ್ನೆಯಾಗಿದೆ. ಕೆಲವರು ಇದರ ಸ್ಥಾನದಲ್ಲಿ ಹವಳವನ್ನು ಉಪಯೋಗಿಸ್ತಾರೆ. ಅದೂ ಸಹ ಶ್ರೇಷ್ಠವಾದುದ್ದೇ ಆಗಿದೆ. ಕರಿಮಣಿಸರದ ವೈಶಿಷ್ಟ್ಯವೆಂದರೆ ಎದೆಯ ಭಾಗದಲ್ಲಿ ಉಂಟಾಗುವ ಉಷ್ಣತೆಯನ್ನು ಅದು ಹೀರಿಕೊಳ್ಳುತ್ತೆ. ಇದರ ಅತಿ ಮುಖ್ಯವಾದ ಉಪಯುಕ್ತತೆ ಹಾಲುಣಿಸುವ ತಾಯಿಯಲ್ಲಿ ಎದೆಹಾಲಿನ ಉಷ್ಣತೆಯನ್ನು ಹೀರಿಕೊಂಡು ಎದೆಹಾಲು ಕೆಡದಂತೆ ಕಾಪಾಡುತ್ತೆ. ಈ ಮೂಲಕ ಎದೆಹಾಲು ಶಿಶುವಿಗೆ ಸಮ ಉಷ್ಣತೆಯಲ್ಲಿರಲು ಸಹಾಯ ಮಾಡುತ್ತೆ. ಆಧ್ಯಾತ್ಮಿಕವಾಗಿ ಕರಿಮಣಿಸರ ಕತ್ತಿನ ಸುತ್ತ ಸುಷುಮ್ನಾ ನಾಡಿಗೆ, ಸಮ್ಮಿಲನ ಚಕ್ರಗಳ ಆಧಾರವಾದ ಬೆನ್ನೆಲುಬಿನ ಮೇಲ್ಭಾಗ ವಿಶುದ್ಧ ಚಕ್ರಕ್ಕೆ ಹೊಂದಿಕೊಂಡಂತೆ ಇರುತ್ತೆ.

ಅಲ್ಲದೇ, ಇದು ಹೃದಯದ ಭಾಗದಲ್ಲಿರುವ ಅನಾಹತ ಚಕ್ರದಲ್ಲಿ ಸಮ್ಮಿಲನಗೊಳ್ಳುತ್ತೆ. ಹೃದಯ ಜ್ಯೋತಿಯು ಸದಾ ದರ್ಶನೀಯವೆಂದು ಸೂಚಿಸುವುದೇ ಮಾಂಗಲ್ಯದ ಸಂಕೇತ. ಜ್ಯೋತಿಷ್ಯಶಾಸ್ತ್ರ ಗ್ರಂಥಗಳಲ್ಲಿ ದ್ವಾದಶ ರಾಶಿಯವರು ಎಷ್ಟೆಷ್ಟು ಕರಿಮಣಿಯನ್ನು ಸರದಲ್ಲಿ ಹಾಕಿಕೊಳ್ಳಬೇಕೆಂಬುದನ್ನು ಉಲ್ಲೇಖಿಸಲಾಗಿದೆ. ಹೀಗೆ ಕರಿಮಣಿಸರವು ಸ್ತ್ರೀಯ ಸೌಭಾಗ್ಯವೆನಿಸುವುದರಲ್ಲಿ ಮಹತ್ತರ ಪಾತ್ರವನ್ನು ವಹಿಸಿದೆ.

Published On - 6:16 pm, Wed, 9 October 19

ತಾಜಾ ಸುದ್ದಿ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ