AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗುರು ಕಚ್ಚೋ ಅಭ್ಯಾಸ ಇದೆಯಾ? ಹಾಗಿದ್ರೆ ಇದನ್ನು ಓದಿ

ಒಬ್ಬೊಬ್ಬರಿಗೆ ಒಂದೊಂದು ರೀತಿಯ ಅಭ್ಯಾಸವಿರುತ್ತೆ. ಕೆಲವರು ಕುಳಿತಿದ್ದಾಗ ಕಾಲನ್ನು ಅಲ್ಲಾಡಿಸಿದ್ರೆ, ಕೆಲವರಿಗೆ ಕೂದಲು ಬಾಯಲ್ಲಿ ಇಟ್ಟುಕೊಳ್ಳುವ ಅಭ್ಯಾಸ. ಇಂತಹ ಅಭ್ಯಾಸಗಳಲ್ಲಿ ಒಂದು ಉಗುರು ಕಚ್ಚೋದು. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಉಗುರು ಕಚ್ಚುವುದು ರಾಕ್ಷಸ ಗುಣವನ್ನು ಪ್ರೇರೇಪಿಸುತ್ತೆ. ಅಲ್ಲದೇ ಉಗುರಿನಲ್ಲಿರುವ ಮಣ್ಣು, ಕ್ರಿಮಿಕೀಟಗಳು ದೇಹದಲ್ಲಿ ಪ್ರವೇಶಿಸಿ ನಮಗೆ ಅಶಾಂತಿಯನ್ನು ಉಂಟುಮಾಡುತ್ತೆ. ನಮ್ಮ ದೇಹದ ಕೈಕಾಲುಗಳಲ್ಲಿರುವ ಉಗುರುಗಳು ಅತ್ಯಂತ ವಿಷಪೂರಿತವಾಗಿರುತ್ತವೆ. ಹೀಗಾಗೇ ನಮ್ಮ ಧರ್ಮಶಾಸ್ತ್ರ ಉಗುರು ಕಚ್ಚುವ ಅಭ್ಯಾಸವು ದಾರಿದ್ರ್ಯದ ಪ್ರತಿರೂಪವೆಂದು ಹೇಳುತ್ತೆ. […]

ಉಗುರು ಕಚ್ಚೋ ಅಭ್ಯಾಸ ಇದೆಯಾ? ಹಾಗಿದ್ರೆ ಇದನ್ನು ಓದಿ
ಸಾಧು ಶ್ರೀನಾಥ್​
|

Updated on:Dec 13, 2019 | 1:42 PM

Share

ಒಬ್ಬೊಬ್ಬರಿಗೆ ಒಂದೊಂದು ರೀತಿಯ ಅಭ್ಯಾಸವಿರುತ್ತೆ. ಕೆಲವರು ಕುಳಿತಿದ್ದಾಗ ಕಾಲನ್ನು ಅಲ್ಲಾಡಿಸಿದ್ರೆ, ಕೆಲವರಿಗೆ ಕೂದಲು ಬಾಯಲ್ಲಿ ಇಟ್ಟುಕೊಳ್ಳುವ ಅಭ್ಯಾಸ. ಇಂತಹ ಅಭ್ಯಾಸಗಳಲ್ಲಿ ಒಂದು ಉಗುರು ಕಚ್ಚೋದು. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ.

ಉಗುರು ಕಚ್ಚುವುದು ರಾಕ್ಷಸ ಗುಣವನ್ನು ಪ್ರೇರೇಪಿಸುತ್ತೆ. ಅಲ್ಲದೇ ಉಗುರಿನಲ್ಲಿರುವ ಮಣ್ಣು, ಕ್ರಿಮಿಕೀಟಗಳು ದೇಹದಲ್ಲಿ ಪ್ರವೇಶಿಸಿ ನಮಗೆ ಅಶಾಂತಿಯನ್ನು ಉಂಟುಮಾಡುತ್ತೆ. ನಮ್ಮ ದೇಹದ ಕೈಕಾಲುಗಳಲ್ಲಿರುವ ಉಗುರುಗಳು ಅತ್ಯಂತ ವಿಷಪೂರಿತವಾಗಿರುತ್ತವೆ. ಹೀಗಾಗೇ ನಮ್ಮ ಧರ್ಮಶಾಸ್ತ್ರ ಉಗುರು ಕಚ್ಚುವ ಅಭ್ಯಾಸವು ದಾರಿದ್ರ್ಯದ ಪ್ರತಿರೂಪವೆಂದು ಹೇಳುತ್ತೆ.

ನಾವು ಆಹಾರವನ್ನು ಸೇವಿಸುವಾಗ ಅಜಾಗರೂಕತೆಯಿಂದ ಉಗುರು ನಮ್ಮ ದೇಹ ಸೇರಿದ್ರೆ ಕರುಳಿಗೆ ತೊಂದರೆಯಾಗುತ್ತೆ. ಈ ಕಾರಣದಿಂದಾಗೇ ಉಗುರನ್ನು ಮನೆಯ ಒಳಗೆ ಕತ್ತರಿಸಬಾರದು ಎನ್ನಲಾಗುತ್ತೆ. ವೈದ್ಯಶಾಸ್ತ್ರದ ಪ್ರಕಾರ, ಉಗುರು ಕಚ್ಚುವುದು ಕ್ಯಾಲ್ಸಿಯಂ ಕೊರತೆಯ ಲಕ್ಷಣ ಎನ್ನಲಾಗುತ್ತೆ. ಕೆಲವರು ಮಾಡಲು ಕೆಲಸವಿಲ್ಲದೇ ಕೂತಾಗ, ಇಲ್ಲವೇ ತೀವ್ರ ಒತ್ತಡದಲ್ಲಿದ್ದಾಗ ಉಗುರು ಕಚ್ಚುವುದನ್ನು ರೂಢಿಸಿಕೊಳ್ತಾರೆ. ಇದು ಒತ್ತಡದಿಂದ ಹೊರಬರುವ ಒಂದು ಕ್ರಿಯೆ ಅಷ್ಟೇ. ಉಗುರು ಕಚ್ಚುವುದರಿಂದ ನಮ್ಮ ಆರೋಗ್ಯದ ಮೇಲೆ ಗಂಭೀರವಾದ ಪರಿಣಾಮಗಳು ಉಂಟಾಗುತ್ತವೆ.

ಉಗುರು ಕಚ್ಚುವುದರಿಂದಾಗುವ ಆರೋಗ್ಯ ಸಮಸ್ಯೆಗಳು: -ಉಗುರಿನಲ್ಲಿರುವ ಕಲ್ಮಶ ಹೊಟ್ಟೆ ಸೇರುವುದರಿಂದ ಜಂತು ಹುಳದ ತೊಂದರೆ ಅನುಭವಿಸಬೇಕಾಗುತ್ತೆ -ಹಲ್ಲು ಬಲಹೀನವಾಗಬಹುದು -ಕರುಳಿನ ಸಮಸ್ಯೆ ಕಾಡುತ್ತೆ -ಜೀರ್ಣಕ್ರಿಯೆ ಸರಿಯಾಗಿ ಆಗೋದಿಲ್ಲ -ಉಗುರು ತುಂಡಾದ್ರೆ ಚರ್ಮಕ್ಕೆ ನೋವಾಗುತ್ತೆ

ಮನಸ್ಸಿಗೆ ತುಂಬಾ ಬೇಜಾರಾದಾಗ ಕೆಲವರು ಉಗುರು ಕಚ್ಚುತ್ತಾರೆ. ಕಾರಣಗಳು ಏನೇ ಇದ್ದರೂ ಉಗುರು ಕಚ್ಚುವುದು ತುಂಬಾ ಅಪಾಯ. ಇದರಿಂದ ಆರೋಗ್ಯ ಕೆಡುತ್ತೆ. ಇದನ್ನು ಹೇಳಿದ್ರೆ ಯಾರೂ ಕೇಳೋದಿಲ್ಲ ಅಂತಾ ನಮ್ಮ ಹಿರಿಯರು ಉಗುರು ಕಚ್ಚಿದ್ರೆ ದಾರಿದ್ರ್ಯ ಕಾಡುತ್ತೆ ಎಂದು ಹೇಳಿದ್ದಾರೆ. ಹೀಗಾಗೇ ಇಂತಹ ಕೆಟ್ಟ ಅಭ್ಯಾಸಗಳಿಂದ ದೂರವಿರೋದು ಒಳ್ಳೆಯದು ಎನ್ನುತ್ತವೆ ನಮ್ಮ ಶಾಸ್ತ್ರಗಳು. ಈ ಕೆಟ್ಟ ಅಭ್ಯಾಸ ಇರುವವರನ್ನು ನೋಡಿದರೆ ಬೇರೆಯವರಿಗೆ ಕೀಳು ಭಾವನೆ ಉಂಟಾಗುತ್ತೆ. ಹೀಗಾಗಿ ಈ ಅಭ್ಯಾಸ ಇರುವವರು ಆದಷ್ಟು ಬೇಗ ಬಿಟ್ಟರೆ ಒಳ್ಳೆಯದು. ಇದ್ರಿಂದ ಸುಂದರ, ಸ್ವಾಸ್ಥ್ಯ ಜೀವನ ನಮ್ಮದಾಗುತ್ತೆ.

Published On - 11:21 am, Fri, 13 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ