AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಮುಂಭಾಗವೇ ತುಳಸಿ ಗಿಡ ನೆಡೋದೇಕೆ?

ಗಿಡಮರಗಳಿಗೆ ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನಮಾನ ನೀಡಲಾಗಿದೆ. ಜ್ಯೋತಿಷ್ಯಶಾಸ್ತ್ರದಲ್ಲಿ ಋುಷಿಮುನಿಗಳು ಒಂದೊಂದು ನಕ್ಷತ್ರ ಹಾಗೂ ಒಂದೊಂದು ಗ್ರಹಕ್ಕೂ ಮರಗಿಡಗಳ ಹೆಸರಿಟ್ಟಿದ್ದಾರೆ. “ವೃಕ್ಷೋ ರಕ್ಷತಿ ರಕ್ಷಿತಃ” ಅಂದ್ರೆ ಮರಗಿಡಗಳನ್ನು ರಕ್ಷಿಸಿದ್ರೆ ಮನುಕುಲ ಉಳಿಯುತ್ತೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮರಗಿಡಗಳ ಪೋಷಣೆ, ಆರಾಧನೆ, ರಕ್ಷಣೆಯಿಂದ ದೋಷಗಳು ನಿವಾರಣೆಯಾಗುತ್ತವೆ ಎನ್ನಲಾಗುತ್ತೆ. ಮನೆಯ ವಾಸ್ತುದೋಷ ನಿವಾರಣೆಗೂ ಇದು ಪೂರಕವಾಗಿದೆ. ಹೌದು, ಮನೆಯಂಗಳದಲ್ಲಿ ತುಳಸಿ ಇದ್ರೆ ಯಾವ ದೋಷಗಳೂ ಬಾಧಿಸಲ್ಲ ಅಂತಾ ನಮ್ಮ ಶಾಸ್ತ್ರಗಳು ಹೇಳುತ್ತವೆ. ಹಾಗೇ ಮನೆಯಲ್ಲಿ ತುಳಸಿ ಗಿಡ ಇದ್ರೆ ವೈದ್ಯನಿದ್ದಂತೆ […]

ಮನೆಯ ಮುಂಭಾಗವೇ ತುಳಸಿ ಗಿಡ ನೆಡೋದೇಕೆ?
ಸಾಧು ಶ್ರೀನಾಥ್​
|

Updated on:Oct 16, 2019 | 12:30 PM

Share

ಗಿಡಮರಗಳಿಗೆ ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನಮಾನ ನೀಡಲಾಗಿದೆ. ಜ್ಯೋತಿಷ್ಯಶಾಸ್ತ್ರದಲ್ಲಿ ಋುಷಿಮುನಿಗಳು ಒಂದೊಂದು ನಕ್ಷತ್ರ ಹಾಗೂ ಒಂದೊಂದು ಗ್ರಹಕ್ಕೂ ಮರಗಿಡಗಳ ಹೆಸರಿಟ್ಟಿದ್ದಾರೆ. “ವೃಕ್ಷೋ ರಕ್ಷತಿ ರಕ್ಷಿತಃ” ಅಂದ್ರೆ ಮರಗಿಡಗಳನ್ನು ರಕ್ಷಿಸಿದ್ರೆ ಮನುಕುಲ ಉಳಿಯುತ್ತೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮರಗಿಡಗಳ ಪೋಷಣೆ, ಆರಾಧನೆ, ರಕ್ಷಣೆಯಿಂದ ದೋಷಗಳು ನಿವಾರಣೆಯಾಗುತ್ತವೆ ಎನ್ನಲಾಗುತ್ತೆ. ಮನೆಯ ವಾಸ್ತುದೋಷ ನಿವಾರಣೆಗೂ ಇದು ಪೂರಕವಾಗಿದೆ. ಹೌದು, ಮನೆಯಂಗಳದಲ್ಲಿ ತುಳಸಿ ಇದ್ರೆ ಯಾವ ದೋಷಗಳೂ ಬಾಧಿಸಲ್ಲ ಅಂತಾ ನಮ್ಮ ಶಾಸ್ತ್ರಗಳು ಹೇಳುತ್ತವೆ. ಹಾಗೇ ಮನೆಯಲ್ಲಿ ತುಳಸಿ ಗಿಡ ಇದ್ರೆ ವೈದ್ಯನಿದ್ದಂತೆ ಎನ್ನಲಾಗುತ್ತೆ. ದೇವದಾನವರ ನಡುವಿನ ಸಮುದ್ರಮಥನದಲ್ಲಿ ವರವಾಗಿ ಭೂಲೋಕಕ್ಕೆ ಬಂದವುಗಳಲ್ಲಿ ಬೇವು, ಬಿಲ್ವ, ಅಶ್ವತ್ಥದೊಂದಿಗೆ ತುಳಸಿಯೂ ಸಹ ಇತ್ತು. ಶ್ರೀ ಮಹಾವಿಷ್ಣುವಿಗೆ ಪ್ರಿಯವಾದದ್ದು, ಪ್ರೀತಿಕರವಾದದ್ದು ತುಳಸಿ.

ತುಳಸಿಯ ಪ್ರಯೋಜನಗಳು *ತುಳಸಿ ಬೃಂದಾವನ ಇರುವ ಮನೆಗೆ ದುಷ್ಟಶಕ್ತಿಗಳ ಕಾಟವಿರಲ್ಲ. *ತುಳಸಿಯ ಗಾಳಿ ಸೋಕಿದರೆ ಸೂಕ್ಷ್ಮ ಕ್ರಿಮಿಕೀಟಗಳು ನಾಶವಾಗುತ್ತವೆ. *ಮನೆಯ ಮುಂದೆ ವಿವಿಧ ಬಗೆಯ ತುಳಸಿ ಗಿಡಗಳನ್ನು ಬೆಳೆಸುವುದರಿಂದ ಮನೆಯ ವಾತಾವರಣ ಶುದ್ಧವಾಗುತ್ತೆ. *ಕೃಷ್ಣ ತುಳಸಿಯು ಔಷಧೀಯ ಗುಣವನ್ನು ಹೊಂದಿದೆ. ಇದರ ರಸವನ್ನು ಸೇವಿಸಿದರೆ ಕೆಮ್ಮು ನಿವಾರಣೆಯಾಗುತ್ತೆ.

ತುಳಸಿಯನ್ನು ಪೂಜೆಗೆ ಮತ್ತು ದೇವರಿಗೆ ಅಲಂಕಾರ ಮಾಡಲು ಬಳಸಲಾಗುತ್ತದೆ. ಹೆಚ್ಚಿನವರು ತೋಟಗಳಲ್ಲಿ ಅನೇಕ ರೀತಿಯ ಗಿಡಗಳನ್ನು ಬೆಳೆಸುತ್ತಾರೆ. ಆದರೆ ಗಿಡಗಳನ್ನು ಬೆಳೆಸಲು ಕೂಡ ವಾಸ್ತು ಅಗತ್ಯ. ಇಲ್ಲದಿದ್ದರೆ ಇದರಿಂದ ಕುಟುಂಬದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತೆ ಎನ್ನಲಾಗುತ್ತೆ. ಆದ್ದರಿಂದ ವಾಸ್ತು ದೋಷ ಪರಿಹಾರಕ್ಕೆ ಮನೆಯಲ್ಲಿ ತುಳಸಿ ಗಿಡ ನೆಡಬೇಕು ಎಂಬ ನಂಬಿಕೆ ಇದೆ. ಹಾಗೇ ತುಳಸಿ ಗಿಡದ ಜೊತೆ ಈ ಒಂದು ಗಿಡವನ್ನು ನೆಟ್ಟರೆ ಮನೆಯಲ್ಲಿ ಎಂದೂ ಆರ್ಥಿಕ ಸಮಸ್ಯೆ ಎದುರಾಗುವುದಿಲ್ಲವಂತೆ. ಆ ಗಿಡ ಯಾವುದೆಂದರೆ ಬಾಳೆಗಿಡ. ಮನೆ ಮುಂದೆ ತುಳಸಿ ಗಿಡದ ಜೊತೆ ಬಾಳೆಗಿಡ ಇದ್ದರೆ ಶುಭ ಸಂಕೇತ ಅಂತಾ ಶಾಸ್ತ್ರಗಳಲ್ಲಿ ಉಲ್ಲೇಖವಿದೆ. ತುಳಸಿ ಗಿಡದ ಅಕ್ಕಪಕ್ಕ ಬಾಳೆಗಿಡವನ್ನು ಬಿಟ್ಟು ಬೇರೆ ಯಾವ ಗಿಡಗಳನ್ನು ನೆಡಬಾರದು ಅಂತಾ ನಮ್ಮ ಹಿರಿಯರು ಹೇಳ್ತಾರೆ.

Published On - 7:43 am, Wed, 16 October 19

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ