AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ ಮಾಸದಲ್ಲಿ ದೀಪವನ್ನು ಏಕೆ ಹಚ್ಚಬೇಕು?

ಕಾರ್ತಿಕ ಮಾಸದಲ್ಲಿ ಹಗಲು ಕಡಿಮೆ, ರಾತ್ರಿ ಹೆಚ್ಚು. ರಾತ್ರಿಯ ಅವಧಿ ಹೆಚ್ಚಾಗಿರುವ ಈ ಮಾಸದಲ್ಲಿ ಕತ್ತಲು ಕೂಡ ಜಾಸ್ತಿಯೇ ಇರುತ್ತೆ. ಕತ್ತಲನ್ನು ಕಳೆಯಲು ಬೆಳಕು ಬೇಕು. ಬೆಳಕು ಬೆಳಗಲು ಸಾಧನವೊಂದು ಬೇಕು. ಹಗಲಾದರೆ ಸೂರ್ಯನಿರುತ್ತಾನೆ. ಅದೇ ರಾತ್ರಿ? ಈಗೇನೋ ವಿದ್ಯುದ್ದೀಪಗಳಿವೆ. ಹಿಂದೆಲ್ಲಾ? ಹಣತೆಯ ದೀಪಗಳೇ ಬೆಳಕಿನ ಮೂಲಗಳಾಗಿದ್ವು. ಈ ಕಾರಣದಿಂದ ಹುಟ್ಟಿಕೊಂಡಿದ್ದೇ ಕಾರ್ತಿಕ ದೀಪ. ಇದಕ್ಕೆ ಜೊತೆಯಾಗಿ ಚಳಿ ಇರುತ್ತೆ. ಹವಾಮಾನದಲ್ಲಿ ಬಿಸಿಯ ಪ್ರಮಾಣ ತಗ್ಗಿರುತ್ತೆ. ಇದ್ರಿಂದ ಆರೋಗ್ಯದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳು ಹೆಚ್ಚಿರುತ್ತೆ. ಹೀಗಾಗೇ ಈ ಮಾಸದಲ್ಲಿ […]

ಕಾರ್ತಿಕ ಮಾಸದಲ್ಲಿ ದೀಪವನ್ನು ಏಕೆ ಹಚ್ಚಬೇಕು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 11, 2019 | 1:11 PM

Share

ಕಾರ್ತಿಕ ಮಾಸದಲ್ಲಿ ಹಗಲು ಕಡಿಮೆ, ರಾತ್ರಿ ಹೆಚ್ಚು. ರಾತ್ರಿಯ ಅವಧಿ ಹೆಚ್ಚಾಗಿರುವ ಈ ಮಾಸದಲ್ಲಿ ಕತ್ತಲು ಕೂಡ ಜಾಸ್ತಿಯೇ ಇರುತ್ತೆ. ಕತ್ತಲನ್ನು ಕಳೆಯಲು ಬೆಳಕು ಬೇಕು. ಬೆಳಕು ಬೆಳಗಲು ಸಾಧನವೊಂದು ಬೇಕು. ಹಗಲಾದರೆ ಸೂರ್ಯನಿರುತ್ತಾನೆ. ಅದೇ ರಾತ್ರಿ? ಈಗೇನೋ ವಿದ್ಯುದ್ದೀಪಗಳಿವೆ. ಹಿಂದೆಲ್ಲಾ? ಹಣತೆಯ ದೀಪಗಳೇ ಬೆಳಕಿನ ಮೂಲಗಳಾಗಿದ್ವು. ಈ ಕಾರಣದಿಂದ ಹುಟ್ಟಿಕೊಂಡಿದ್ದೇ ಕಾರ್ತಿಕ ದೀಪ. ಇದಕ್ಕೆ ಜೊತೆಯಾಗಿ ಚಳಿ ಇರುತ್ತೆ.

ಹವಾಮಾನದಲ್ಲಿ ಬಿಸಿಯ ಪ್ರಮಾಣ ತಗ್ಗಿರುತ್ತೆ. ಇದ್ರಿಂದ ಆರೋಗ್ಯದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳು ಹೆಚ್ಚಿರುತ್ತೆ. ಹೀಗಾಗೇ ಈ ಮಾಸದಲ್ಲಿ ನಿತ್ಯ ಸಂಜೆ ಮನೆಯ ಮುಂದೆ ದೀಪಗಳನ್ನು ಹಚ್ಚುವುದರಿಂದ ಶುಭವಾಗುತ್ತೆ ಅಂತಾ ನಮ್ಮ ಶಾಸ್ತ್ರಗಳಲ್ಲಿ ಉಲ್ಲೇಖವಿದೆ. ಹಾಗಾದ್ರೆ ಈ ಮಾಸದಲ್ಲಿ ದೀಪ ಹಚ್ಚೋದು ಹೇಗೆ ಅಂತಿದ್ದೀರಾ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಕಾರ್ತಿಕ ಮಾಸದಲ್ಲಿ ಎಳ್ಳೆಣ್ಣೆ ಅಥವಾ ಹಸುವಿನ ತುಪ್ಪದಿಂದ ದೀಪವನ್ನು ಹಚ್ಚೋದು ಪುಣ್ಯಪ್ರದ ಎನ್ನಲಾಗುತ್ತೆ. ಇಂತಹ ದೀಪಗಳನ್ನು ಹಚ್ಚೋದ್ರಿಂದ ಶುಭಫಲಗಳುಂಟಾಗುತ್ತವೆ.

ಎಳ್ಳೆಣ್ಣೆ-ತುಪ್ಪದ ದೀಪ ಹಚ್ಚುವುದರ ಫಲಗಳು -ಕಣ್ಣುಗಳಿಗೆ ಆಹ್ಲಾದತೆ ಉಂಟಾಗುತ್ತೆ. -ದೃಷ್ಟಿ ದೋಷಗಳು ದೂರವಾಗುತ್ತವೆ. -ಚಳಿಯ ವಾತಾವರಣದಿಂದ ಕಾಡುವ ಶ್ವಾಸಕೋಶ ವ್ಯಾಧಿಗಳು ದೂರವಾಗುತ್ತವೆ. -ಚಳಿಗಾಲದಲ್ಲಿ ಹೆಚ್ಚುವ ಕ್ರಿಮಿಕೀಟಗಳು ನಶಿಸುತ್ತವೆ.

ದೀಪ ಬೆಳಗುವ ಮೂಲಕ ಕತ್ತಲನ್ನು ಕಳೆಯಬೇಕು ಎನ್ನುವ ಚಿಂತನೆಯಲ್ಲಿ ಮೂಡಿ ಬಂದದ್ದೇ ಕಾರ್ತಿಕ ದೀಪೋತ್ಸವ. ಕಾರ್ತಿಕ ಮಾಸ ಎರಡು ರೀತಿಯಲ್ಲಿ ಗಮನ ಸೆಳೆಯುತ್ತೆ. ಒಂದು ಕತ್ತಲು, ಮತ್ತೊಂದು ಸ್ಥಿತಿ. ಕತ್ತಲು ಲಯ ಭಾವವಾದರೆ, ಸ್ಥಿತಿ ಬದುಕಿನ ಗತಿ. ಲಯ ಭಾವವೇ ಶಿವ. ಬದುಕಿನ ಗತಿಯೇ ವಿಷ್ಣು.

ಕಾರ್ತಿಕ ಮಾಸ ಶಿವ ಹಾಗೂ ವಿಷ್ಣುಗೆ ಪ್ರಿಯವಾದ ಮಾಸ. ಹೀಗಾಗಿ ಶಿವ ಮತ್ತು ವಿಷ್ಣು ಭಕ್ತರು ಒಂದುಗೂಡಿ ದೇಗುಲಗಳಲ್ಲಿ , ಮನೆಯ ಮುಂಭಾಗದಲ್ಲಿ ದೀಪಗಳನ್ನು ಬೆಳಗುತ್ತಾರೆ. ಆ ದೀಪದ ಬೆಳಕಿನಲ್ಲೇ ತನ್ಮಯತೆಯನ್ನು ಕಂಡುಕೊಳ್ಳುತ್ತಾರೆ. ಕಾರ್ತಿಕ ಮಾಸ ಹತ್ತು ಹಲವು ವಿಶೇಷತೆಗಳಿಂದ ಗಮನ ಸೆಳೆಯುತ್ತೆ. ಶಿವ ಮತ್ತು ವಿಷ್ಣು ಬೇರೆಯಲ್ಲ.

ಇಬ್ಬರೂ ಒಂದೇ ಎನ್ನುವ ಸಂದೇಶವನ್ನು ಸಾರುವ ಮಾಸವೇ ಕಾರ್ತಿಕ ಮಾಸ. ಆಷಾಢ ಶುಕ್ಲ ಏಕಾದಶಿಯಂದು ಯೋಗ ನಿದ್ರೆಗೆ ಜಾರುವ ಶ್ರೀಹರಿ ತುಳಸಿ ಹಬ್ಬದಂದು ಅಂದರೆ ಕಾರ್ತಿಕ ಮಾಸದ ಉತ್ಥಾನ ದ್ವಾದಶಿಯಂದು ಮೇಲೇಳುತ್ತಾನೆ. ಕಾರ್ತಿಕ ಮಾಸದಲ್ಲೇ ಶಿವನಿಂದ ತ್ರಿಪುರಾಸುರನ ವಧೆಯೂ ಆಗುತ್ತೆ. ಇಂತಹ ಪವಿತ್ರ ಮಾಸದಲ್ಲಿ ದೀಪ ಬೆಳಗುವ ಮೂಲಕ ಶಿವ ಹಾಗೂ ಮಹಾವಿಷ್ಣುವಿನ ಕೃಪೆಗೆ ಪಾತ್ರರಾಗಬಹುದು.

Published On - 11:40 am, Mon, 11 November 19

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ