AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಆಚರಣೆಯ ಹಿಂದೆ ಇದೆ ರಾಮಾಯಣದ ನಂಟು!

ಹಿಂದೂ ಧರ್ಮದಲ್ಲಿ ದೀಪಗಳ ಹಬ್ಬ ದೀಪಾವಳಿಗೆ ವಿಶೇಷ ಮಹತ್ವವಿದೆ. ಮನೆ ಹಾಗೂ ಮನದ ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲವು ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲವು ಕಡೆ ಮುಂದಿನ ಎರಡು ದಿನಗಳನ್ನು ಸೇರಿಸಿ 5 ದಿನ ವಿಜೃಂಭಣೆಯಿಂದ ಹಬ್ಬ ಆಚರಿಸಲಾಗುತ್ತೆ. ದೀಪಾವಳಿ ಹಬ್ಬ […]

ದೀಪಾವಳಿ ಆಚರಣೆಯ ಹಿಂದೆ ಇದೆ ರಾಮಾಯಣದ ನಂಟು!
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Oct 29, 2019 | 7:02 AM

Share

ಹಿಂದೂ ಧರ್ಮದಲ್ಲಿ ದೀಪಗಳ ಹಬ್ಬ ದೀಪಾವಳಿಗೆ ವಿಶೇಷ ಮಹತ್ವವಿದೆ. ಮನೆ ಹಾಗೂ ಮನದ ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲವು ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲವು ಕಡೆ ಮುಂದಿನ ಎರಡು ದಿನಗಳನ್ನು ಸೇರಿಸಿ 5 ದಿನ ವಿಜೃಂಭಣೆಯಿಂದ ಹಬ್ಬ ಆಚರಿಸಲಾಗುತ್ತೆ.

ದೀಪಾವಳಿ ಹಬ್ಬ ಆಚರಣೆಯ ಹಿಂದೆ ರಾಮಾಯಣದ ನಂಟು ಬೆಸೆದುಕೊಂಡಿದೆ. ರಾವಣನನ್ನು ಸಂಹರಿಸಿದ ರಾಮಚಂದ್ರನು ಸೀತೆ, ಲಕ್ಷ್ಮಣ ಹಾಗೂ ಹನುಮಂತನೊಡನೆ ಲಂಕೆಯಿಂದ ಆಯೋಧ್ಯೆಗೆ ಹಿಂದಿರುಗಿದ ದಿನವೇ ದೀಪಾವಳಿ ಎನ್ನಲಾಗುತ್ತೆ. ರಾಮ ಅಯೋಧ್ಯೆಗೆ ಆಗಮಿಸಿದ ಆ ದಿನ ಜನರು ಆನಂದದಿಂದ ದೀಪಗಳನ್ನು ಬೆಳಗಿಸಿ ರಾಮನನ್ನು ಸ್ವಾಗತಿಸಿದ್ದರು ಎನ್ನಲಾಗುತ್ತೆ. ಅಲ್ಲದೇ ಪಾಂಡವರು ಕೂಡ ಇದೇ ದಿನ ತಮ್ಮ ಅಜ್ಞಾತವಾಸವನ್ನು ಮುಗಿಸಿದ್ರು ಎನ್ನಲಾಗುತ್ತೆ.

ಭಾರತದ ಬೇರೆ ಬೇರೆ ಪ್ರದೇಶಗಳಲ್ಲಿ ದೀಪಾವಳಿಗೆ ಅದರದ್ದೇ ಆದ ಮಹತ್ವವಿದೆ. ಹಾಗೂ ಅವರದ್ದೇ ಆದ ಕೆಲವು ಸಂಪ್ರದಾಯಗಳು ಇರುತ್ತವೆ. ಕೆಲವರು ತಮ್ಮ ಸಂಪ್ರದಾಯಕ್ಕೆ ತಕ್ಕಂತೆ ಹಬ್ಬವನ್ನು ಆಚರಿಸ್ತಾರೆ. ದೀಪಾವಳಿ ಅಂದರೆ ದೀಪಗಳ ಸಾಲು ಎಂದರ್ಥ. ಆದ್ದರಿಂದ ದೀಪಗಳು ಈ ಹಬ್ಬದ ಸಮಯದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ಮಣ್ಣಿನ ಹಣತೆ ಹಚ್ಚಿಡುವುದು ಶುಭ ದೀಪಾವಳಿಯ ಸಂಕೇತ. ಕತ್ತಲೆಯು ನಮ್ಮಲ್ಲಿ ಅಧೈರ್ಯವನ್ನು ತುಂಬುತ್ತೆ. ನಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುತ್ತೆ. ಆದ್ದರಿಂದ ಜನರು ಭರವಸೆಯ ಬೆಳಕನ್ನು ಹಣತೆಗಳನ್ನು ಹಚ್ಚಿ ದೀಪಾವಳಿಯನ್ನು ಆಚರಿಸ್ತಾರೆ.

ಇನ್ನು ಒಡಿಶಾ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ದೀಪಾವಳಿಯ ರಾತ್ರಿಯಂದು ಮಹಾಕಾಳಿ ಅಥವಾ ನಿಶಿ ಪೂಜೆಯನ್ನು ಮಾಡಲಾಗುತ್ತೆ. ಪಾರ್ವತಿದೇವಿಯು ಕಾಳಿ ಅವತಾರವನ್ನು ತಾಳಿ ಅಸುರರ ರುಂಡವನ್ನು ಕತ್ತರಿಸಿ ಚಂಡಾಡಿದ ದಿನವೇ ದೀಪಾವಳಿ ಎಂಬ ನಂಬಿಕೆಯೂ ಇದೆ. ಹೀಗಾಗೇ ತಡರಾತ್ರಿಯಲ್ಲಿ ಕಾಳಿ ಪೂಜೆಯನ್ನು ಆರಂಭಿಸ್ತಾರೆ. ಮತ್ತು ಮುಂಜಾನೆ ಪ್ರಾತಃಕಾಲ ಮಗಿಯುವ ಹೊತ್ತಿಗೆ ಪೂಜೆಯನ್ನು ಮುಗಿಸ್ತಾರೆ. ಹೀಗೆ ದೀಪಾವಳಿ ಆಚರಣೆಯ ಹಿಂದೆ ಒಂದೊಂದು ಕಡೆ ಒಂದೊಂದು ವಿಶಿಷ್ಟ ಸಂಪ್ರದಾಯ ರೂಢಿಯಲ್ಲಿದೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್