AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿಯ 3ನೇ ದಿನ.. ಚಂದ್ರಘಂಟಾ ದೇವಿಯನ್ನ ಹೇಗೆ ಆರಾಧಿಸಬೇಕು?

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ. ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ […]

ನವರಾತ್ರಿಯ 3ನೇ ದಿನ.. ಚಂದ್ರಘಂಟಾ ದೇವಿಯನ್ನ ಹೇಗೆ ಆರಾಧಿಸಬೇಕು?
ಸಾಧು ಶ್ರೀನಾಥ್​
| Edited By: |

Updated on:Oct 21, 2020 | 8:28 AM

Share

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ.

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ.

ಚಂದ್ರಘಂಟಾ ದೇವಿ ಸದಾ ಯುದ್ಧಕ್ಕೆ ಸನ್ನದ್ಧಳಾಗಿ ಹೊರಟಂತೆ ಕಾಣುತ್ತಾಳೆ. ದೇವಿಯ ಚಂದ್ರಘಂಟಾ ರೂಪದ ಮೂಲಕ ದುಷ್ಟರ ದಮನ, ಶಿಷ್ಟರ ರಕ್ಷಣೆಗೆ ಸದಾಕಾಲಸನ್ನದ್ಧಳಾಗಿರ್ತಾಳೆ. ಚಂದ್ರಘಂಟಾ ಮಾತೆ ಸಕಲ ಐಶ್ವರ್ಯ, ಅಧಿಕಾರವನ್ನು ಕರುಣಿಸುವ ದೇವತೆ. ನವರಾತ್ರಿಯ 3ನೇ ದಿನ ಇವಳನ್ನು ಪೂಜಿಸಿದ್ರೆ ಭಕ್ತರ ಕಷ್ಟಗಳು ಬಹು ಬೇಗ ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ. ಇನ್ನು ದೇವಿಯ ಚಂದ್ರಘಂಟಾ ಸ್ವರೂಪ ಆರಾಧನೆಗೆ ಒಂದು ಮಂತ್ರವಿದೆ. ಈ ದೇವಿಯ ಮಂತ್ರ ಜಪಿಸುವುದರಿಂದ ರಕ್ಷಣೆ, ಶಕ್ತಿ ಸಿಗುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗೇ ಚಂದ್ರಘಂಟಾ ಪೂಜಾ ಮಂತ್ರ ಹೇಳಿ ಈ ದಿನ ದೇವಿಯ ಆರಾಧನೆ ಮಾಡಲಾಗುತ್ತೆ.

ಚಂದ್ರಘಂಟಾ ಪೂಜಾ ಮಂತ್ರ

ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ

ಚಂದ್ರಘಂಟಾ ಪೂಜಾ ಫಲ

* ಪಾಪ ಪರಿಹಾರ * ಭಯ ದೂರ * ದುಷ್ಟಶಕ್ತಿಗಳಿಂದ ರಕ್ಷಣೆ * ಸಾಧಕರಿಗೆ ಆಧ್ಯಾತ್ಮಿಕ ಅನುಭವ * ಸೌಮ್ಯತೆ ವಿನಮ್ರತೆ ಪ್ರಾಪ್ತಿ * ಕೌಟುಂಬಿಕ ಜೀವನದಲ್ಲಿ ನೆಮ್ಮದಿ * ಇಹಪರಲೋಕದಲ್ಲಿ ಸದ್ಗತಿ

ನವರಾತ್ರಿಯ ದುರ್ಗಾ ಉಪಾಸನೆಯಲ್ಲಿ 3ನೇ ದಿನದ ಪೂಜೆ ವಿಶೇಷವಾದುದು. ಈ ದಿನ ಸಾಧಕನ ಮನಸ್ಸು ಮಣಿಪೂರ ಚಕ್ರದಲ್ಲಿ ಪ್ರವೇಶಿಸುತ್ತೆ. ಚಂದ್ರಘಂಟೆಯ ಕೃಪೆಯಿಂದ ಸಾಧಕರಿಗೆ ವಿಶೇಷ ಅನುಭೂತಿಯಾಗುತ್ತೆ. ಹೀಗೇ ನವರಾತ್ರಿಯ ಮೂರನೇ ದಿನ ವಿಶೇಷ ಫಲ ಪ್ರಾಪ್ತಿಗಾಗಿ ಚಂದ್ರಘಂಟಾ ದೇವಿಯನ್ನು ಭಕ್ತರು ಶ್ರದ್ಧಾ ಭಕ್ತಿಯಿಂದ ಪೂಜಿಸ್ತಾರೆ.

Published On - 4:44 pm, Tue, 1 October 19

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!