AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿಯ 4ನೇ ದಿನ ಕೂಷ್ಮಾಂಡ ದೇವಿ ಆರಾಧನೆಯಿಂದ ಸಿಗುವ ಫಲಗಳೇನು?

ದೇಶಾದ್ಯಂತ ನವರಾತ್ರಿಯ ಸಂಭ್ರಮ ಕಳೆಕಟ್ಟಿದೆ. ಅನೇಕರು ಉಪವಾಸ ವ್ರತ ಕೈಗೊಂಡು ನವರಾತ್ರಿಯನ್ನು ಸಂಭ್ರಮದಿಂದ ಆಚರಿಸ್ತಿದ್ದಾರೆ. ಇನ್ನು ಕೆಲವರು, ಅವರದ್ದೇ ಆದ ಸಂಪ್ರದಾಯದ ಮೂಲಕ ನವರಾತ್ರಿ ವ್ರತವನ್ನು ಕೈಗೊಂಡಿದ್ದಾರೆ. ಜನಸಾಮಾನ್ಯರು, ಆಧ್ಯಾತ್ಮ ಸಾಧಕರು ಸೇರಿದಂತೆ ಎಲ್ಲರೂ ನವದುರ್ಗೆಯರನ್ನು ಆರಾಧಿಸುತ್ತಿದ್ದಾರೆ. ಇಂದು ನವರಾತ್ರಿಯ ನಾಲ್ಕನೇ ದಿನ. ಇಂದು ದೇವಿಯ ಕೂಷ್ಮಾಂಡ ರೂಪವನ್ನು ಆರಾಧಿಸೋದು ವಿಶೇಷ. ನವದುರ್ಗೆಯರಲ್ಲಿ ಕೂಷ್ಮಾಂಡ ದೇವಿ ನಾಲ್ಕನೇಯವಳು. ಈಕೆ ತನ್ನ ಮಧುರ ನಗುವಿನಿಂದ ಬ್ರಹ್ಮಾಂಡವನ್ನು ರಚಿಸಿದ ಕಾರಣ ಇವಳನ್ನು ಕೂಷ್ಮಾಂಡ ದೇವಿ ಎನ್ನಲಾಗುತ್ತೆ. ಇವಳು ಆದಿಶಕ್ತಿಯ ಪ್ರತಿರೂಪ. […]

ನವರಾತ್ರಿಯ 4ನೇ ದಿನ ಕೂಷ್ಮಾಂಡ ದೇವಿ ಆರಾಧನೆಯಿಂದ ಸಿಗುವ ಫಲಗಳೇನು?
ಸಾಧು ಶ್ರೀನಾಥ್​
| Edited By: |

Updated on:Oct 21, 2020 | 8:29 AM

Share

ದೇಶಾದ್ಯಂತ ನವರಾತ್ರಿಯ ಸಂಭ್ರಮ ಕಳೆಕಟ್ಟಿದೆ. ಅನೇಕರು ಉಪವಾಸ ವ್ರತ ಕೈಗೊಂಡು ನವರಾತ್ರಿಯನ್ನು ಸಂಭ್ರಮದಿಂದ ಆಚರಿಸ್ತಿದ್ದಾರೆ. ಇನ್ನು ಕೆಲವರು, ಅವರದ್ದೇ ಆದ ಸಂಪ್ರದಾಯದ ಮೂಲಕ ನವರಾತ್ರಿ ವ್ರತವನ್ನು ಕೈಗೊಂಡಿದ್ದಾರೆ. ಜನಸಾಮಾನ್ಯರು, ಆಧ್ಯಾತ್ಮ ಸಾಧಕರು ಸೇರಿದಂತೆ ಎಲ್ಲರೂ ನವದುರ್ಗೆಯರನ್ನು ಆರಾಧಿಸುತ್ತಿದ್ದಾರೆ.

ಇಂದು ನವರಾತ್ರಿಯ ನಾಲ್ಕನೇ ದಿನ. ಇಂದು ದೇವಿಯ ಕೂಷ್ಮಾಂಡ ರೂಪವನ್ನು ಆರಾಧಿಸೋದು ವಿಶೇಷ. ನವದುರ್ಗೆಯರಲ್ಲಿ ಕೂಷ್ಮಾಂಡ ದೇವಿ ನಾಲ್ಕನೇಯವಳು. ಈಕೆ ತನ್ನ ಮಧುರ ನಗುವಿನಿಂದ ಬ್ರಹ್ಮಾಂಡವನ್ನು ರಚಿಸಿದ ಕಾರಣ ಇವಳನ್ನು ಕೂಷ್ಮಾಂಡ ದೇವಿ ಎನ್ನಲಾಗುತ್ತೆ. ಇವಳು ಆದಿಶಕ್ತಿಯ ಪ್ರತಿರೂಪ. ಇವಳ ವಾಹನ ಸಿಂಹ. ತೇಜೋಮಯಿ ರೂಪ ಹೊಂದಿರುವ ಕೂಷ್ಮಾಂಡ ದೇವಿ ಅಷ್ಟಭುಜಗಳನ್ನು ಹೊಂದಿದ್ದಾಳೆ. ತನ್ನ ಅಷ್ಟಭುಜಗಳಲ್ಲಿ ಕಮಂಡಲ, ಧನಸ್ಸು, ಬಾಣ, ಕಮಲ, ಅಮೃತ ತುಂಬಿದ ಕಲಶ, ಚಕ್ರ, ಗದೆಯನ್ನು ಹಿಡಿದಿದ್ದಾಳೆ. ಕೂಷ್ಮಾಂಡ ದೇವಿಯ ಪ್ರಭೆ ಸೂರ್ಯನಿಗೆ ಸಮಾನ ಎಂದು ಹೇಳಲಾಗುತ್ತೆ. ಅಲ್ಲದೇ ಕೂಷ್ಮಾಂಡ ದೇವಿ ಕಾಳಿದಾಸನಿಗೆ ಜ್ಞಾನ ನೀಡಿದ ದೇವಿ ಎಂತಲೂ ಪುರಾಣದಲ್ಲಿ ಉಲ್ಲೇಖವಿದೆ. ಈ ಕೂಷ್ಮಾಂಡ ದೇವಿಯ ತಾಂತ್ರಿಕ ಪೂಜೆ ಶ್ರೇಷ್ಠ. ಈ ದೇವಿ ಸ್ತುತಿಯಿಂದ ರಕ್ಷಣೆ ಸಿಗುತ್ತೆ ಅನ್ನೋ ನಂಬಿಕೆ ಇದೆ. ಕೂಷ್ಮಾಂಡ ದೇವಿಯ ಆರಾಧನೆಗೆ ವಿಶೇಷ ಮಂತ್ರವಿದೆ. ಆ ಮಂತ್ರವನ್ನು ಪಠಿಸಿ ಕೂಷ್ಮಾಂಡ ದೇವಿಯ ಆರಾಧನೆ ಮಾಡಿದ್ರೆ ವಿಶೇಷ ಫಲಗಳು ಪ್ರಾಪ್ತಿಯಾಗುತ್ತವೆ ಎನ್ನಲಾಗುತ್ತೆ.

ಕೂಷ್ಮಾಂಡದೇವಿ ಮಂತ್ರ

ಸುರಾಸಂಪೂರ್ಣಕಲಶಂ ರುದಿರಾಪ್ಲು ತಮೇವ ಚ ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ

ಸಂಸ್ಕೃತದಲ್ಲಿ ಕುಂಬಳಕಾಯಿಯನ್ನು ಕೂಷ್ಮಾಂಡ ಎನ್ನಲಾಗುತ್ತೆ. ಈ ದೇವಿಗೆ ಕುಂಬಳಕಾಯಿ ಬಲಿ ಅತ್ಯಂತ ಪ್ರಿಯ ಎಂಬ ನಂಬಿಕೆ ಇದೆ. ಹೀಗಾಗೇ ಯೋಗ ಸಾಧಕರು ಕೂಷ್ಮಾಂಡ ದೇವಿಗೆ ಕುಂಬಳಕಾಯಿ ಬಲಿ ನೀಡುವ ಸಂಪ್ರದಾಯವಿದೆ. ಈಕೆಯನ್ನು ಶ್ರದ್ಧಾಭಕ್ತಿಯಿಂದ ಪೂಜಿಸಿದ್ರೆ ಕಷ್ಟಗಳನ್ನು ಪರಿಹರಿಸ್ತಾಳೆ, ಅಜ್ಞಾನವನ್ನು ದೂರ ಮಾಡ್ತಾಳೆ ಅನ್ನೋದು ಇವಳ ಭಕ್ತರ ನಂಬಿಕೆ.

ಕೂಷ್ಮಾಂಡ ದೇವಿ ಆರಾಧನೆಯ ಫಲಗಳು

* ರೋಗ ಪರಿಹಾರ * ದುಃಖ ದೂರ * ಆಯಸ್ಸು, ಆರೋಗ್ಯ ವೃದ್ಧಿ * ಜೀವನದಲ್ಲಿ ಯಶಸ್ಸು ಪ್ರಾಪ್ತಿ

ಆಯಸ್ಸು ವೃದ್ಧಿಗಾಗಿ ಸಾಧಕರು ನವರಾತ್ರಿಯ ನಾಲ್ಕನೇ ಕೂಷ್ಮಾಂಡ ದೇವಿಯನ್ನು ಸಾಧಕರು ವಿಶೇಷವಾಗಿ ಆರಾಧಿಸ್ತಾರೆ. ಹೀಗೆ ದೇವಿಯನ್ನು ಆರಾಧಿಸೋದ್ರಿಂದ ಸಾಧಕನ ಮನಸ್ಸು ಅನಾಹತ ಚಕ್ರದಲ್ಲಿ ನೆಲೆ ನಿಲ್ಲುತ್ತೆ. ಮನಸ್ಸು ಏಕಾಗ್ರತೆ ಸಾಧಿಸುತ್ತೆ ಅಂತಾ ಧರ್ಮಶಾಸ್ತ್ರ ಹೇಳುತ್ತೆ.

Published On - 4:44 pm, Wed, 2 October 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ