AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋ ಪೂಜೆಯಿಂದ ಗ್ರಹದೋಷಗಳು ನಶಿಸುತ್ತವೆಯೆ?

ಹಿಂದೂ ಧರ್ಮದಲ್ಲಿ ಗೋವಿಗೆ ಅನಾದಿಕಾಲದಿಂದಲೂ ಪವಿತ್ರ ಸ್ಥಾನವನ್ನು ನೀಡಲಾಗಿದೆ. ರೈತ ದೇಶದ ಬೆನ್ನೆಲುಬಾದರೆ, ಗೋವುಗಳು ರೈತನಿಗೆ ಬೆನ್ನೆಲುಬು. ಇಂತಹ ಗೋವುಗಳನ್ನು ಕೃಷಿ ಚಟುವಟಿಕೆ, ಹೈನುಗಾರಿಕೆಗೆ ಮಾತ್ರ ಸೀಮಿತವಾಗಿರಿಸದೇ ದೈವೀ ಸ್ಥಾನವನ್ನು ನೀಡಲಾಗಿದೆ. ಪರಿಣಾಮ ಭಾರತೀಯರು ಗೋವುಗಳನ್ನು ದೇವರೆಂದು ಪೂಜಿಸ್ತಾರೆ. ಯಾರ ಮನೆಯಲ್ಲಿ ಗೋವುಗಳ ಪೂಜೆಯನ್ನು ಭಯ ಭಕ್ತಿಯಿಂದ ಮಾಡ್ತಾರೋ ಆ ಮನೆಯಲ್ಲಿ ಸುಖ-ಸಮೃದ್ಧಿ, ಶಾಂತಿ, ಐಶ್ವರ್ಯ ನೆಲೆಸಿರುತ್ತೆ. ಅಲ್ಲದೇ ಆ ಮನೆಗೆ ಯಾವುದೇ ರೀತಿಯ ಕಷ್ಟಗಳು ಬರೋದಿಲ್ಲ ಎಂಬ ನಂಬಿಕೆ ಇದೆ. ಗೋ ಮಾತೆಯಲ್ಲಿ 33 ಕೋಟಿ […]

ಗೋ ಪೂಜೆಯಿಂದ ಗ್ರಹದೋಷಗಳು ನಶಿಸುತ್ತವೆಯೆ?
ಸಾಧು ಶ್ರೀನಾಥ್​
|

Updated on: Nov 10, 2019 | 7:39 AM

Share

ಹಿಂದೂ ಧರ್ಮದಲ್ಲಿ ಗೋವಿಗೆ ಅನಾದಿಕಾಲದಿಂದಲೂ ಪವಿತ್ರ ಸ್ಥಾನವನ್ನು ನೀಡಲಾಗಿದೆ. ರೈತ ದೇಶದ ಬೆನ್ನೆಲುಬಾದರೆ, ಗೋವುಗಳು ರೈತನಿಗೆ ಬೆನ್ನೆಲುಬು. ಇಂತಹ ಗೋವುಗಳನ್ನು ಕೃಷಿ ಚಟುವಟಿಕೆ, ಹೈನುಗಾರಿಕೆಗೆ ಮಾತ್ರ ಸೀಮಿತವಾಗಿರಿಸದೇ ದೈವೀ ಸ್ಥಾನವನ್ನು ನೀಡಲಾಗಿದೆ. ಪರಿಣಾಮ ಭಾರತೀಯರು ಗೋವುಗಳನ್ನು ದೇವರೆಂದು ಪೂಜಿಸ್ತಾರೆ. ಯಾರ ಮನೆಯಲ್ಲಿ ಗೋವುಗಳ ಪೂಜೆಯನ್ನು ಭಯ ಭಕ್ತಿಯಿಂದ ಮಾಡ್ತಾರೋ ಆ ಮನೆಯಲ್ಲಿ ಸುಖ-ಸಮೃದ್ಧಿ, ಶಾಂತಿ, ಐಶ್ವರ್ಯ ನೆಲೆಸಿರುತ್ತೆ. ಅಲ್ಲದೇ ಆ ಮನೆಗೆ ಯಾವುದೇ ರೀತಿಯ ಕಷ್ಟಗಳು ಬರೋದಿಲ್ಲ ಎಂಬ ನಂಬಿಕೆ ಇದೆ.

ಗೋ ಮಾತೆಯಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿರುತ್ತಾರೆ ಎಂಬ ನಂಬಿಕೆ ಇದೆ. ಎಲ್ಲಿ ಗೋವುಗಳು ಸುಖವಾಗಿರುತ್ತವೆಯೋ ಅಲ್ಲಿ ದೇವಾನುದೇವತೆಗಳು ಸಂತೃಪ್ತರಾಗಿರ್ತಾರೆ. ಆ ಸ್ಥಳ ಸಮೃದ್ಧವಾಗಿರುತ್ತೆ ಎನ್ನಲಾಗುತ್ತೆ. ಇನ್ನು ಗೋವುಗಳ ಕೊರಳಿಗೆ ಕಟ್ಟುವ ಘಂಟೆಯಿಂದ ಹೊರಹೊಮ್ಮುವ ಘಂಟಾನಾದಕ್ಕೆ ದುಷ್ಟಶಕ್ತಿಗಳನ್ನು ಓಡಿಸುವ ಶಕ್ತಿ ಇದೆ ಎನ್ನಲಾಗುತ್ತೆ. ಹಿಂದೂ ಪುರಾಣಗಳ ಪ್ರಕಾರ, ಗೋಮಾತೆಯ ಸಗಣಿಯಲ್ಲಿ ಸಾಕ್ಷಾತ್ ಲಕ್ಷ್ಮೀಯೇ ವಾಸವಾಗಿರ್ತಾಳೆ.

ಗೋ ಮೂತ್ರದಲ್ಲಿ ಗಂಗೆ ನೆಲೆಸಿರುತ್ತಾಳೆ. ಗೋವಿನ ಸಗಣಿಯಿಂದ ಮಾಡಿದ ಧೂಪವನ್ನು ಪ್ರತಿದಿನ ಮನೆ, ಕಚೇರಿ, ದೇವಸ್ಥಾನದಲ್ಲಿ ಹಚ್ಚಿದ್ರೆ ಪರಿಸರ ಶುದ್ಧಗೊಳ್ಳುವುದರ ಜೊತೆಗೆ ಉಸಿರಾಟಕ್ಕೆ ಸಂಬಂಧಿಸಿದ ತೊಂದರೆಗಳು ನಿವಾರಣೆಯಾಗುತ್ತವೆ. ಎನ್ನಲಾಗುತ್ತೆ. ಜೊತೆಗೆ ನಕಾರಾತ್ಮಕ ಶಕ್ತಿಗಳು ಪ್ರವೇಶ ಮಾಡುವುದಿಲ್ಲ. ಗೋ ಪೂಜೆ ಎಲ್ಲಾ ದೇವರುಗಳ ಪೂಜೆಗಿಂತ ಮಿಗಿಲು. ಯಾಕಂದ್ರೆ ಎಲ್ಲಾ ದೇವರುಗಳು ಒಂದೇ ಕಡೆ ಸಿಗುವುದಿಲ್ಲ. ಒಂದೊಂದು ದೇವರಿಗೂ ಒಂದೊಂದು ದೇವಸ್ಥಾನಗಳಿರುತ್ತೆ.

ಇನ್ನು ಶ್ರೀ ಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ಗೋವನ್ನು ಸಂಸ್ಕೃತಿಯ ಸಂರಕ್ಷಕ ಎಂದು ಹೇಳ್ತಾನೆ. ಆದ್ದರಿಂದ ಹಿಂದೂಗಳು ಅತ್ಯಂತ ಶ್ರದ್ಧಾ ಭಕ್ತಿಯಿಂದ ಗೋ ಪೂಜೆ ಮಾಡ್ತಾರೆ. 33 ಕೋಟಿ‌ ದೇವತೆಗಳ ಆವಾಸ‌ ಸ್ಥಾನವಾಗಿರುವ ಗೋವನ್ನು ಪೂಜಿಸುವುದರಿಂದ ಸಕಲ ಪಾಪ ನಿವಾರಣೆಯಾಗುತ್ತೆ ಎಂಬ ನಂಬಿಕೆ ಇದೆ. ಪ್ರಾಚೀನ ಭಾರತೀಯ ಕಲ್ಪನೆಯಂತೆ ನಮ್ಮ ಸುತ್ತಲೂ ಗೋವುಗಳಿರುವುದು ಸಮೃದ್ಧಿಯ ಸಂಕೇತ. ಹೀಗಾಗೇ ರೈತರು ಬೆಳೆಯ ಕೊಯ್ಲಿನ ಜೊತೆಗೆ‌ ಸಂಕ್ರಾಂತಿಯ ವೇಳೆ ಗೋಪೂಜೆಯನ್ನು ಮಾಡ್ತಾರೆ.

ಇನ್ನು ಗ್ರಹದೋಷ ಉಳ್ಳವರು ಆಲಯದಲ್ಲಿ ನವಗ್ರಹ ಪ್ರದಕ್ಷಿಣೆ ಮಾಡುವ ಜೊತೆಗೆ ಆಯಾ ಗ್ರಹದೋಷ ಸಂಬಂಧಿತ ವಾರಗಳಂದು ಆಯಾ ಗ್ರಹಕ್ಕೆ ಪ್ರಿಯವಾದ ಧಾನ್ಯವನ್ನು ನೆನೆಸಿ ಅದರೊಂದಿಗೆ ಬೆಲ್ಲವನ್ನು ಸೇರಿಸಿ ಗೋಮಾತೆಗೆ ನೀಡಿದ್ರೆ ಶುಭಪ್ರದ. ನಂತರ ಗೋವಿಗೆ 3 ಪ್ರದಕ್ಷಿಣೆ ಹಾಕಿ, ಗೋವಿನ ಬಾಲಕ್ಕೆ ನಮಸ್ಕರಿಸಿದರೆ ಗ್ರಹಬಾಧೆಗಳು ದೂರಾಗುತ್ತವೆ ಅಂತಾ ಶಾಸ್ತ್ರಗಳಲ್ಲಿ ಉಲ್ಲೇಖವಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ