AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಿಗೆ ಮಾಡುವ ಅಭಿಷೇಕಗಳು ಯಾವುವು? ಭಗವಂತನಿಗೆ ಹಾಲಿನ ಅಭಿಷೇಕ ಮಾಡೋದೇಕೆ?

ಗಂಗಾಧರನಿಗೆ ಭಕ್ತಿ, ನಿಷ್ಠೆಯಿಂದ ಕೇವಲ ನೀರಿನಿಂದ ಅಭಿಷೇಕ ಮಾಡಿದ್ರೂ ಸಾಕು ಆತ ಬಹಳ ಬೇಗ ಒಲಿಯುತ್ತಾನೆ ಅಂತಾ ಹೇಳಲಾಗುತ್ತೆ. ಅದ್ರಲ್ಲೂ ಶಿವನಿಗೆ ಹಾಲಿನಿಂದ ಅಭಿಷೇಕ ಮಾಡಿದ್ರೆ ವಿಶೇಷ ಫಲಗಳು ಪ್ರಾಪ್ತಿಯಾಗುತ್ತೆ ಎನ್ನಲಾಗುತ್ತೆ.

ದೇವರಿಗೆ ಮಾಡುವ ಅಭಿಷೇಕಗಳು ಯಾವುವು? ಭಗವಂತನಿಗೆ ಹಾಲಿನ ಅಭಿಷೇಕ ಮಾಡೋದೇಕೆ?
ಶಿವನಿಗೆ ಹಾಲಿನ ಅಭಿಷೇಕ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 30, 2021 | 6:36 AM

Share

ಹಿಂದೂ ಸಂಪ್ರದಾಯದ ಪ್ರಕಾರ, ಮನದಲ್ಲಿ ಹಾಗೂ ಮನೆಯಲ್ಲಿ ಭಗವಂತನನ್ನು ಪೂಜಿಸುವ ಪರಿಪಾಠ ಬಹಳ ಹಿಂದಿನಿಂದಲೂ ಇದೆ. ಇದರ ಜೊತೆಗೆ ಭಗವಂತನ ಸಾನಿಧ್ಯವಾದ ದೇವಾಲಯಗಳಿಗೆ ಹೋಗ್ತೀವಿ. ದೇಗುಲಗಳಲ್ಲಿ ಕುಂಕುಮಾರ್ಚನೆ, ಬಿಲ್ವಾರ್ಚನೆ, ಕ್ಷೀರಾಭಿಷೇಕ, ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಬೆಣ್ಣೆ ಅಲಂಕಾರ, ಗೋಡಂಬಿ ಅಲಂಕಾರ, ಅರಿಶಿನ-ಕುಂಕುಮ ಅಲಂಕಾರ, ಪುಷ್ಪಾಲಂಕಾರ, ಹಣ್ಣಿನ ಅಲಂಕಾರ, ತರಕಾರಿ ಅಲಂಕಾರ ಸೇರಿದಂತೆ ಅನೇಕ ರೀತಿಯ ಅಲಂಕಾರಗಳನ್ನು ಭಗವಂತನಿಗೆ ಮಾಡಲಾಗುತ್ತೆ. ಇದಿಷ್ಟೇ ಅಲ್ಲದೇ, ಅನೇಕ ವಿಧಾನಗಳಿಂದ ಭಗವಂತನನ್ನು ಆರಾಧಿಸಲಾಗುತ್ತೆ. ಅದ್ರಲ್ಲೂ ವಿಶೇಷವಾಗಿ ಭಗವಂತನಿಗೆ ಮಾಡೋ ಅಭಿಷೇಕಗಳಲ್ಲಿ ಅನೇಕ ವಿಧಗಳಿವೆ. ಆ ಆಭಿಷೇಕಗಳು ಯಾವುವು? ಬನ್ನಿ ತಿಳಿಯೋಣ.

ಭಗವಂತನಿಗೆ ಮಾಡುವ ಅಭಿಷೇಕಗಳು 1)ನೀರಿನ ಅಭಿಷೇಕ 2)ತಾಳೆ ಹೂವಿನ ಅಭಿಷೇಕ 3)ಗುಲಾಬಿ ಜಲದ ಅಭಿಷೇಕ 4)ಚಂದನ ಅಥವಾ ಗಂಧದ ಅಭಿಷೇಕ 5)ಶಂಖದಿಂದ ಅಭಿಷೇಕ 6)ಬಿಲ್ವಪತ್ರೆ ಅಭಿಷೇಕ 7)ದರ್ಬೆ ಅಭಿಷೇಕ 8)ರುದ್ರಾಕ್ಷಿ ಅಭಿಷೇಕ 9)ನವರತ್ನ ಅಭಿಷೇಕ 10)ಹಣ್ಣಿನ ರಸಗಳ ಅಭಿಷೇಕ 11)ಪಂಚಗವ್ಯ ಅಭಿಷೇಕ 12)ಪಂಚಾಮೃತ ಅಭಿಷೇಕ 13)ಕ್ಷೀರಾಭಿಷೇಕ

ಹೀಗೆ ಅನೇಕ ದ್ರವ್ಯಗಳು, ಹೂಗಳು, ವಸ್ತುಗಳಿಂದ ಭಗವಂತನಿಗೆ ಅಭಿಷೇಕ ಮಾಡಲಾಗುತ್ತೆ. ಶಿವ ಪುರಾಣದ ಪ್ರಕಾರ, ಲಯಕಾರಕ ಪರಮೇಶ್ವರ ಅಭಿಷೇಕಪ್ರಿಯ. ಗಂಗಾಧರನಿಗೆ ಭಕ್ತಿ, ನಿಷ್ಠೆಯಿಂದ ಕೇವಲ ನೀರಿನಿಂದ ಅಭಿಷೇಕ ಮಾಡಿದ್ರೂ ಸಾಕು ಆತ ಬಹಳ ಬೇಗ ಒಲಿಯುತ್ತಾನೆ ಅಂತಾ ಹೇಳಲಾಗುತ್ತೆ. ಅದ್ರಲ್ಲೂ ಶಿವನಿಗೆ ಹಾಲಿನಿಂದ ಅಭಿಷೇಕ ಮಾಡಿದ್ರೆ ವಿಶೇಷ ಫಲಗಳು ಪ್ರಾಪ್ತಿಯಾಗುತ್ತೆ ಎನ್ನಲಾಗುತ್ತೆ. ಆದ್ರೆ ಶಿವನಿಗೆ ಹಾಲಿನ ಅಭಿಷೇಕ ಮಾಡುವಾಗ ಕೆಲ ನಿಯಮಗಳನ್ನು ಪಾಲಿಸಿದ್ರೆ ವಿಶೇಷ ಫಲ ಪ್ರಾಪ್ತಿಯಾಗುತ್ತೆ ಅಂತಾ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಅಷ್ಟಕ್ಕೂ, ಹಾಲಿನ ಅಭಿಷೇಕ ಮಾಡಲು ಪಾಲಿಸಬೇಕಾದ ಕ್ರಮಗಳೇನು? ಇಲ್ಲಿ ತಿಳಿಯಿರಿ.

ಶಿವನಿಗೆ ಕ್ಷೀರಾಭಿಷೇಕ ಮಾಡಲು ಪಾಲಿಸಬೇಕಾದ ನಿಯಮಗಳು 1)ಆಗಷ್ಟೇ ಕರೆದ ಹಾಲನ್ನು ಅಭಿಷೇಕಕ್ಕೆ ಬಳಸಿದ್ರೆ ಒಳ್ಳೇದು. ಮುಂಜಾನೆ ಕರೆದ ಹಾಲನ್ನು ಸಾಯಂಕಾಲದ ಅಭೀಷೇಕಕ್ಕೆ ಬಳಸಬಾರದು. 2)ಶಿವನಿಗೆ ತಣ್ಣನೆಯ ಹಾಲಿನ ಅಭಿಷೇಕ ಮಾಡಿದ್ರೆ ಶುಭ. 3)ಶಿವನಿಗೆ ಪ್ಯಾಕೆಟ್ ಹಾಲನ್ನು ನೇರವಾಗಿ ಬಳಸಬಾರದು. ಪ್ಯಾಕೇಟ್ ಹಾಲನ್ನು ಪಾತ್ರೆಗೆ ವರ್ಗಾಯಿಸಿ ನಂತರ ಅಭಿಷೇಕ ಮಾಡಬೇಕು. 4)ಮನೆಯಲ್ಲಿರುವ ಶಿವಲಿಂಗಕ್ಕೆ ನೀರಿನ ಕಾರಂಜಿಯ ವ್ಯವಸ್ಥೆ ಮಾಡಿ. ಇಲ್ಲವೇ ಧಾರಾಪಾತ್ರೆಯ ಮೂಲಕ ಶಿವನ ತಲೆ ಮೇಲೆ ಸದಾ ನೀರು ಬೀಳುತ್ತಿರುವಂತೆ ಮಾಡಿದರೆ ಶುಭಪ್ರದ.

ಹೀಗೆ ಭಗವಂತನಿಗೆ ಅನೇಕ ವಿಧಗಳಲ್ಲಿ ಪೂಜೆ-ಪುನಸ್ಕಾರ, ನೈವೇದ್ಯ, ಸೇವೆ, ಜಪತಪಾದಿಗಳನ್ನು ಮಾಡಿ ಆರಾಧಿಸಲಾಗುತ್ತೆ. ಇವೆಲ್ಲವುಗಳಿಂಗಿಂತ ಶಿವ ಭಕ್ತಿಯಿಂದ ಮಾಡುವ ಜಲಾಭಿಷೇಕ ಹಾಗೂ ಕ್ಷೀರಾಭಿಷೇಕಕ್ಕೆ ಸಂಪ್ರೀತನಾಗಿ ನಮ್ಮ ಬೇಡಿಕೆಯನ್ನೆಲ್ಲಾ ಈಡೇರಿಸ್ತಾನೆ ಅಂತಾ ಹೇಳಲಾಗುತ್ತೆ. ಇನ್ನು ಅಭಿಷೇಕಕ್ಕೆ ಹಾಲು ಬಳಸೋದು ಅತ್ಯಂತ ಶ್ರೇಷ್ಠ ಎನ್ನಲಾಗುತ್ತೆ. ಯಾಕಂದ್ರೆ ಗೋವು ಬಹಳ ಪವಿತ್ರ ಹಾಗೂ ಪೂಜನೀಯವಾದುದು ಅಂತಾ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಇಂತಹ ಗೋವಿನ ಹಾಲಿನಿಂದ ಮಾಡುವ ಅಭಿಷೇಕಕ್ಕೆ ಭಗವಂತ ಸಂಪ್ರೀತನಾಗ್ತಾನೆ ಎಂಬ ನಂಬಿಕೆ ಇದೆ.

ಇದನ್ನೂ ಓದಿ: ಭಕ್ತರ ಎಲ್ಲಾ ಕೋರಿಕೆ ಈಡೇರಿಸುವ ಶಿವನಿಗೆ ಯಾವ ಅಭಿಷೇಕ ಮಾಡಿದರೆ ಏನು ಫಲ?

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ