AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಗೆ ಬೆಂಬಲಕ್ಕೆ ವಿದ್ಯಾಬಾಲನ್ ಮತ್ತು ಲಕ್ಷ್ಮಿಮಂಚು

ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಬಿಂಬಿಸಲ್ಪಡುತ್ತಿರುವ ರಿಯಾ ಚಕ್ರವರ್ತಿ, ರಾಷ್ಟ್ರೀಯ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ನಂತರ ಆಕೆಯ ಬೆಂಬಲಕ್ಕೆ ಕೊನೆಗೂ ಕೆಲ ನಟಿಯರು ಮುಂದೆ ಬಂದಿದ್ದಾರೆ. ಬಾಲಿವುಡ್ ಸುಪ್ರಸಿದ್ಧ ತಾರೆ ವಿದ್ಯಾ ಬಾಲನ್ ಮಾಧ್ಯಮಗಳಲ್ಲಿ ಆಕೆಯ ಚಾರಿತ್ರ್ಯವಧೆ ಅಗುತ್ತ್ತಿದೆ, ಅದು ಕೂಡಲೇ ನಿಲ್ಲಬೇಕು ಎಂದಿದ್ದಾರೆ. ವಿದ್ಯಾಗಿಂತ ಮೊದಲು, ರಿಯಾ ಅನುಭವಿಸುತ್ತಿರುವ ಮಾನಸಿಕ ಹಿಂಸೆಗೆ ಸ್ಪಂದಿಸಿದ್ದು ದಕ್ಷಿಣ ಭಾರತದ ನಟಿ ಲಕ್ಷ್ಮಿ ಮಂಚು. ರವಿವಾರದಂದು ರಿಯಾಳ ಸ್ಥಿತಿಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಾ ಟ್ವೀಟ್ ಮಾಡಿರುವ […]

ರಿಯಾಗೆ ಬೆಂಬಲಕ್ಕೆ ವಿದ್ಯಾಬಾಲನ್ ಮತ್ತು ಲಕ್ಷ್ಮಿಮಂಚು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 02, 2020 | 5:22 PM

Share

ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಬಿಂಬಿಸಲ್ಪಡುತ್ತಿರುವ ರಿಯಾ ಚಕ್ರವರ್ತಿ, ರಾಷ್ಟ್ರೀಯ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ನಂತರ ಆಕೆಯ ಬೆಂಬಲಕ್ಕೆ ಕೊನೆಗೂ ಕೆಲ ನಟಿಯರು ಮುಂದೆ ಬಂದಿದ್ದಾರೆ. ಬಾಲಿವುಡ್ ಸುಪ್ರಸಿದ್ಧ ತಾರೆ ವಿದ್ಯಾ ಬಾಲನ್ ಮಾಧ್ಯಮಗಳಲ್ಲಿ ಆಕೆಯ ಚಾರಿತ್ರ್ಯವಧೆ ಅಗುತ್ತ್ತಿದೆ, ಅದು ಕೂಡಲೇ ನಿಲ್ಲಬೇಕು ಎಂದಿದ್ದಾರೆ.

ವಿದ್ಯಾಗಿಂತ ಮೊದಲು, ರಿಯಾ ಅನುಭವಿಸುತ್ತಿರುವ ಮಾನಸಿಕ ಹಿಂಸೆಗೆ ಸ್ಪಂದಿಸಿದ್ದು ದಕ್ಷಿಣ ಭಾರತದ ನಟಿ ಲಕ್ಷ್ಮಿ ಮಂಚು. ರವಿವಾರದಂದು ರಿಯಾಳ ಸ್ಥಿತಿಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಾ ಟ್ವೀಟ್ ಮಾಡಿರುವ ಲಕ್ಷ್ಮಿ, ಮಾಧ್ಯಮದಲ್ಲಿ ಆಕೆಯನ್ನು ರಾಕ್ಷಸಿಯಂತೆ ಚಿತ್ರಿಸಲಾಗುತ್ತಿದೆ ಎಂದು ಹೇಳುತ್ತಾ, ಆಕೆಯೆಡೆ ಕ್ರೌರ್ಯತೆ ಬಿಟ್ಟು, ಕನಿಕರ ತೋರಿ ಎಂದು ಮಾಧ್ಯಮದವರಿಗೆ ವಿನಂತಿಸಿಕೊಂಡಿದ್ದಾರೆ. 

‘‘ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ಸುಶಾಂತ್ ಸಿಂಗ್ ರಜಪೂತ ಅವರ ಸಾವಿಗೆ ನ್ಯಾಯ ಒದಗಿಸಲು ಹೆಣಗುತ್ತಿರುವ ಎಲ್ಲ ಸಂಸ್ಥೆಗಳ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ, ಆದರೆ ಪ್ರಕರಣದ ಸತ್ಯಾಸತ್ಯತೆಗಳು ಬಯಲಾಗುವವರೆಗೆ ನಾವು ರಿಯಾ ಮತ್ತು ಆಕೆಯ ಕುಟುಂಬದ ಸದಸ್ಯರ ಬಗ್ಗೆ ನಿರ್ದಯತೆಯಿಂದ ಮಾತಾಡುತ್ತಾ ಅವರ ಚಾರಿತ್ರ್ಯವಧೆಯಲ್ಲಿ ತೊಡಗುವುದನ್ನು ನಿಲ್ಲಿಸಬೇಕು,’’ ಎಂದು ಲಕ್ಷ್ಮಿ ಟ್ವೀಟ್ ಮಾಡಿದ್ದಾರೆ.

ರಿಯಾಳನ್ನು ಸಪೋರ್ಟ್ ಮಾಡಿರುವ ಲಕ್ಷ್ಮಿ ಬಗ್ಗೆ ಮೆಚ್ಚುಗೆ ಸೂಚಿಸಿರುವ ವಿದ್ಯಾ ಬಾಲನ್, ರಿಯಾ ಅನುಭವಿಸುತ್ತಿರುವ ಸಂಕಟ ನೋಡುತ್ತಿದ್ದರೆ, ಹೃದಯ ಕಿತ್ತುಬಂದಂತಾಗುತ್ತದೆ ಎಂದು ಹೇಳಿದ್ದಾರೆ.

‘‘ನಮ್ಮೆಲ್ಲರ ಅಚ್ಚುಮೆಚ್ಚಿನ ಯುವನಟರಾಗಿದ್ದ ಸುಶಾಂತ್ ಸಿಂಗ್ ರಜಪೂತನ ಅಕಾಲಿಕ ಮರಣವು ಒಂದು ಮಿಡಿಯಾ ಸರ್ಕಸ್ ಆಗಿ ಮಾರ್ಪಟ್ಟಿರುವುದು ನಿಜಕ್ಕೂ ದುರಂತ. ಮಿಡಿಯಾದಲ್ಲಿ ಪ್ರತಿದಿನ ರಿಯಾಳ ಚಾರಿತ್ರ್ಯವಧೆಯಾಗುತ್ತಿರುವದನ್ನು ನೋಡುತ್ತಿದ್ದರೆ ಕರುಳು ಕಿತ್ತುಬಂದಂತಾಗುತ್ತದೆ. ನಮಗೆಲ್ಲ ಗೊತ್ತಿರೋದು ಆರೋಪ ಸಾಬೀತಾಗುವವರೆಗೂ ಯಾರೊಬ್ಬರೂ ದೋಷಿಯಲ್ಲ. ಅದರಿದು ಉಲ್ಟಾ ಆದಂತಿದೆ. ನಿರ್ದೋಷಿಯೊಬ್ಬನ ಅಮಾಯಕತನ ಸಾಬೀತಾಗುವವರೆಗೆ ಅವನು ಆರೋಪಿ ಎಂದು ಬಿಂಬಿಸಲಾಗುತ್ತಿದೆ. ನ್ಯಾಯಾಂಗದ ಏಜೆನ್ಸಿಗಳು ತಮ್ಮ ಕೆಲಸ ಮಾಡುತ್ತಿವೆ. ತೀರ್ಪುಗಳನ್ನು ಹೇಳಿಬಿಡುವ ಪ್ರವೃತ್ತಿಯಿಂದ ನಾವು ದೂರವಿರವುದು ಒಳಿತು.‘‘ ಎಂದು ವಿದ್ಯಾ ಹೇಳಿದ್ದ್ದಾರೆ. 

ನಿಮಗೆ ಗೊತ್ತಿರಬಹುದು. ಸಿಬಿಐ ಅಧಿಕಾರಿಗಳು ಕಳೆದ ನಾಲ್ಕು ದಿನಗಳಲ್ಲಿ ರಿಯಾಳನ್ನು 35 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಸಿಬಿಐ ಅಲ್ಲದೆ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಮಾದಕ ಪದಾರ್ಥ ನಿಯಂತ್ರಣ ಬ್ಯುರೊ (ಎನ್​ಸಿಬಿ) ಸಹ ರಿಯಾ, ಮತ್ತಾಕೆಯ ಕುಟುಂಬದ ಸದಸ್ಯರನ್ನು ವಿಚಾರಣೆ ನಡೆಸುತ್ತಿವೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ