AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಗೆ ಬೆಂಬಲಕ್ಕೆ ವಿದ್ಯಾಬಾಲನ್ ಮತ್ತು ಲಕ್ಷ್ಮಿಮಂಚು

ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಬಿಂಬಿಸಲ್ಪಡುತ್ತಿರುವ ರಿಯಾ ಚಕ್ರವರ್ತಿ, ರಾಷ್ಟ್ರೀಯ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ನಂತರ ಆಕೆಯ ಬೆಂಬಲಕ್ಕೆ ಕೊನೆಗೂ ಕೆಲ ನಟಿಯರು ಮುಂದೆ ಬಂದಿದ್ದಾರೆ. ಬಾಲಿವುಡ್ ಸುಪ್ರಸಿದ್ಧ ತಾರೆ ವಿದ್ಯಾ ಬಾಲನ್ ಮಾಧ್ಯಮಗಳಲ್ಲಿ ಆಕೆಯ ಚಾರಿತ್ರ್ಯವಧೆ ಅಗುತ್ತ್ತಿದೆ, ಅದು ಕೂಡಲೇ ನಿಲ್ಲಬೇಕು ಎಂದಿದ್ದಾರೆ. ವಿದ್ಯಾಗಿಂತ ಮೊದಲು, ರಿಯಾ ಅನುಭವಿಸುತ್ತಿರುವ ಮಾನಸಿಕ ಹಿಂಸೆಗೆ ಸ್ಪಂದಿಸಿದ್ದು ದಕ್ಷಿಣ ಭಾರತದ ನಟಿ ಲಕ್ಷ್ಮಿ ಮಂಚು. ರವಿವಾರದಂದು ರಿಯಾಳ ಸ್ಥಿತಿಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಾ ಟ್ವೀಟ್ ಮಾಡಿರುವ […]

ರಿಯಾಗೆ ಬೆಂಬಲಕ್ಕೆ ವಿದ್ಯಾಬಾಲನ್ ಮತ್ತು ಲಕ್ಷ್ಮಿಮಂಚು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 02, 2020 | 5:22 PM

Share

ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಬಿಂಬಿಸಲ್ಪಡುತ್ತಿರುವ ರಿಯಾ ಚಕ್ರವರ್ತಿ, ರಾಷ್ಟ್ರೀಯ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ನಂತರ ಆಕೆಯ ಬೆಂಬಲಕ್ಕೆ ಕೊನೆಗೂ ಕೆಲ ನಟಿಯರು ಮುಂದೆ ಬಂದಿದ್ದಾರೆ. ಬಾಲಿವುಡ್ ಸುಪ್ರಸಿದ್ಧ ತಾರೆ ವಿದ್ಯಾ ಬಾಲನ್ ಮಾಧ್ಯಮಗಳಲ್ಲಿ ಆಕೆಯ ಚಾರಿತ್ರ್ಯವಧೆ ಅಗುತ್ತ್ತಿದೆ, ಅದು ಕೂಡಲೇ ನಿಲ್ಲಬೇಕು ಎಂದಿದ್ದಾರೆ.

ವಿದ್ಯಾಗಿಂತ ಮೊದಲು, ರಿಯಾ ಅನುಭವಿಸುತ್ತಿರುವ ಮಾನಸಿಕ ಹಿಂಸೆಗೆ ಸ್ಪಂದಿಸಿದ್ದು ದಕ್ಷಿಣ ಭಾರತದ ನಟಿ ಲಕ್ಷ್ಮಿ ಮಂಚು. ರವಿವಾರದಂದು ರಿಯಾಳ ಸ್ಥಿತಿಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಾ ಟ್ವೀಟ್ ಮಾಡಿರುವ ಲಕ್ಷ್ಮಿ, ಮಾಧ್ಯಮದಲ್ಲಿ ಆಕೆಯನ್ನು ರಾಕ್ಷಸಿಯಂತೆ ಚಿತ್ರಿಸಲಾಗುತ್ತಿದೆ ಎಂದು ಹೇಳುತ್ತಾ, ಆಕೆಯೆಡೆ ಕ್ರೌರ್ಯತೆ ಬಿಟ್ಟು, ಕನಿಕರ ತೋರಿ ಎಂದು ಮಾಧ್ಯಮದವರಿಗೆ ವಿನಂತಿಸಿಕೊಂಡಿದ್ದಾರೆ. 

‘‘ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ಸುಶಾಂತ್ ಸಿಂಗ್ ರಜಪೂತ ಅವರ ಸಾವಿಗೆ ನ್ಯಾಯ ಒದಗಿಸಲು ಹೆಣಗುತ್ತಿರುವ ಎಲ್ಲ ಸಂಸ್ಥೆಗಳ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ, ಆದರೆ ಪ್ರಕರಣದ ಸತ್ಯಾಸತ್ಯತೆಗಳು ಬಯಲಾಗುವವರೆಗೆ ನಾವು ರಿಯಾ ಮತ್ತು ಆಕೆಯ ಕುಟುಂಬದ ಸದಸ್ಯರ ಬಗ್ಗೆ ನಿರ್ದಯತೆಯಿಂದ ಮಾತಾಡುತ್ತಾ ಅವರ ಚಾರಿತ್ರ್ಯವಧೆಯಲ್ಲಿ ತೊಡಗುವುದನ್ನು ನಿಲ್ಲಿಸಬೇಕು,’’ ಎಂದು ಲಕ್ಷ್ಮಿ ಟ್ವೀಟ್ ಮಾಡಿದ್ದಾರೆ.

ರಿಯಾಳನ್ನು ಸಪೋರ್ಟ್ ಮಾಡಿರುವ ಲಕ್ಷ್ಮಿ ಬಗ್ಗೆ ಮೆಚ್ಚುಗೆ ಸೂಚಿಸಿರುವ ವಿದ್ಯಾ ಬಾಲನ್, ರಿಯಾ ಅನುಭವಿಸುತ್ತಿರುವ ಸಂಕಟ ನೋಡುತ್ತಿದ್ದರೆ, ಹೃದಯ ಕಿತ್ತುಬಂದಂತಾಗುತ್ತದೆ ಎಂದು ಹೇಳಿದ್ದಾರೆ.

‘‘ನಮ್ಮೆಲ್ಲರ ಅಚ್ಚುಮೆಚ್ಚಿನ ಯುವನಟರಾಗಿದ್ದ ಸುಶಾಂತ್ ಸಿಂಗ್ ರಜಪೂತನ ಅಕಾಲಿಕ ಮರಣವು ಒಂದು ಮಿಡಿಯಾ ಸರ್ಕಸ್ ಆಗಿ ಮಾರ್ಪಟ್ಟಿರುವುದು ನಿಜಕ್ಕೂ ದುರಂತ. ಮಿಡಿಯಾದಲ್ಲಿ ಪ್ರತಿದಿನ ರಿಯಾಳ ಚಾರಿತ್ರ್ಯವಧೆಯಾಗುತ್ತಿರುವದನ್ನು ನೋಡುತ್ತಿದ್ದರೆ ಕರುಳು ಕಿತ್ತುಬಂದಂತಾಗುತ್ತದೆ. ನಮಗೆಲ್ಲ ಗೊತ್ತಿರೋದು ಆರೋಪ ಸಾಬೀತಾಗುವವರೆಗೂ ಯಾರೊಬ್ಬರೂ ದೋಷಿಯಲ್ಲ. ಅದರಿದು ಉಲ್ಟಾ ಆದಂತಿದೆ. ನಿರ್ದೋಷಿಯೊಬ್ಬನ ಅಮಾಯಕತನ ಸಾಬೀತಾಗುವವರೆಗೆ ಅವನು ಆರೋಪಿ ಎಂದು ಬಿಂಬಿಸಲಾಗುತ್ತಿದೆ. ನ್ಯಾಯಾಂಗದ ಏಜೆನ್ಸಿಗಳು ತಮ್ಮ ಕೆಲಸ ಮಾಡುತ್ತಿವೆ. ತೀರ್ಪುಗಳನ್ನು ಹೇಳಿಬಿಡುವ ಪ್ರವೃತ್ತಿಯಿಂದ ನಾವು ದೂರವಿರವುದು ಒಳಿತು.‘‘ ಎಂದು ವಿದ್ಯಾ ಹೇಳಿದ್ದ್ದಾರೆ. 

ನಿಮಗೆ ಗೊತ್ತಿರಬಹುದು. ಸಿಬಿಐ ಅಧಿಕಾರಿಗಳು ಕಳೆದ ನಾಲ್ಕು ದಿನಗಳಲ್ಲಿ ರಿಯಾಳನ್ನು 35 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಸಿಬಿಐ ಅಲ್ಲದೆ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಮಾದಕ ಪದಾರ್ಥ ನಿಯಂತ್ರಣ ಬ್ಯುರೊ (ಎನ್​ಸಿಬಿ) ಸಹ ರಿಯಾ, ಮತ್ತಾಕೆಯ ಕುಟುಂಬದ ಸದಸ್ಯರನ್ನು ವಿಚಾರಣೆ ನಡೆಸುತ್ತಿವೆ.

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?