AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರ ನಿವಾರಣೆಗೆ ಅನಾದಿ ಕಾಲದಿಂದಲೂ ಶೀತಲಾದೇವಿಯ ಪೂಜಿಸುತ್ತಾ ಬಂದಿದ್ದಾರೆ ಇಲ್ಲಿಯ ಜನ

Fever| ಶೀತ, ಜ್ವರಕ್ಕೆ ಉತ್ತರದ ಬಂಗಾಳ, ಒಡಿಸ್ಸಾ ರಾಜ್ಯಗಳಲ್ಲಿ ರೋಗಗಳನ್ನು ವಾಸಿ ಮಾಡುವ ದೇವತೆಯಾಗಿ ಶೀತಲಾದೇವಿಯನ್ನು ಆರಾಧಿಸ್ತಾರೆ.

ಜ್ವರ ನಿವಾರಣೆಗೆ ಅನಾದಿ ಕಾಲದಿಂದಲೂ ಶೀತಲಾದೇವಿಯ ಪೂಜಿಸುತ್ತಾ ಬಂದಿದ್ದಾರೆ ಇಲ್ಲಿಯ ಜನ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Apr 27, 2021 | 6:50 AM

Share

ಮಹಾಮಾರಿ ಕೊರೊನಾ ದೇಶಕ್ಕೆ ಒಕ್ಕರಿಸಿದೆ. ಸಾಮಾನ್ಯ ಶೀತವು ಕೂಡ ಹೆಮ್ಮಾರಿ ಕಾಯಿಲೆಯಾಗಿ ಕಾಡುವ ಕಾಲ ಬಂದಿದೆ. ಅದರಲ್ಲೂ ಮಕ್ಕಳನ್ನು ಎಷ್ಟು ಕಣ್ಣಲ್ಲಿ ಕಣ್ಣಿಟ್ಟು ಜೋಪಾನವಾಗಿ ನೋಡಿಕೊಂಡರೂ ಹಲವು ರೀತಿಯ ರೋಗಗಳು ಕಾಡೋದುಂಟು. ಆದ್ರೆ ಈಗಿನ ಕಾಲದಲ್ಲಿ ಸುಧಾರಿತ ವೈದ್ಯಕೀಯ ಸೌಲಭ್ಯಗಳಿಂದಾಗಿ ಕೆಮ್ಮು, ಜ್ವರ ಕಾಣಿಸಿಕೊಂಡರೂ ಪೋಷಕರು ತರಹೇವಾರಿ ವೈದ್ಯಕೀಯ ಚಿಕಿತ್ಸೆ ಕೊಡಿಸ್ತಾರೆ.

ಪರಿಣಾಮ ಮಕ್ಕಳಿಗೆ ರೋಗಗಳ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿ ಕುಗ್ಗಿ ಹೋಗಿದೆ. ಆದ್ರೆ ಹಿಂದಿನ ಕಾಲದಲ್ಲಿ ಈಗಿನಂತೆ ಅಗತ್ಯವಾದ ವೈದ್ಯಕೀಯ ಸೌಲಭ್ಯಗಳಾಗಲೀ, ರೋಗಗಳಿಗೆ ತಕ್ಕ ಮೆಡಿಸಿನ್ಗಳಾಗಲೀ ಸಿಗುತ್ತಿರಲಿಲ್ಲ. ಹಾಗಂತಾ ಕಾಯಿಲೆ ಬಂದವರೆಲ್ಲಾ ಗುಣಮುಖರಾಗದೇ ಸಾವನ್ನಪ್ಪುತ್ತಿರಲಿಲ್ಲ. ಚಿಕ್ಕ ಪುಟ್ಟ ಕಾಯಿಲೆಗಳಿಗೆ ಆಯುರ್ವೇದ ಶಾಸ್ತ್ರದ ಸಹಾಯದಿಂದ ನಾನಾ ಬಗೆಯ ಸಿದ್ಧೌಷಧಗಳನ್ನು ನಮ್ಮ ಪೂರ್ವಜರು ಕಂಡುಕೊಂಡಿದ್ದರು. ಮನೆಯಲ್ಲೇ ಔಷಧಗಳನ್ನು ತಯಾರಿಸಿಕೊಂಡು ಸೇವಿಸಿ ಗುಣಮುಖರಾಗ್ತಾ ಇದ್ರು. ಒಂದು ವೇಳೆ ಕಾಯಿಲೆಗಳು ಉಲ್ಬಣಿಸಿದಾಗ ದೈವದ ಮೊರೆ ಹೋಗ್ತಿದ್ರು.

ದೈವಕ್ಕೆ ಹರಕೆ ಕಾಯಿಲೆಗಳು ವಾಸಿಯಾದ ನಂತರ ಆ ದೈವಗಳಿಗೆ ವಿವಿಧ ಬಗೆಯ ಹರಕೆಗಳನ್ನು ಸಲ್ಲಿಸುತ್ತಿದ್ರು. ಆದ್ರೆ ನಾವಿಂದು ಅವನ್ನೆಲ್ಲಾ ಮೂಢನಂಬಿಕೆ ಎಂದು ಮೂದಲಿಸುತ್ತೇವೆ. ಆದ್ರೆ ಇಂದಿಗೂ ಭಾರತದ ಕೆಲವೆಡೆ ಜ್ವರ, ಶೀತದಂತಹ ಸಮಸ್ಯೆಗಳು ಉಲ್ಬಣಿಸಿದಾಗ ದೇವರ ಆರಾಧನೆ ಮಾಡ್ತಾರೆ. ಹೀಗೆ ಶೀತ, ಜ್ವರಕ್ಕೆ ಉತ್ತರದ ಬಂಗಾಳ, ಒಡಿಸ್ಸಾ ರಾಜ್ಯಗಳಲ್ಲಿ ರೋಗಗಳನ್ನು ವಾಸಿ ಮಾಡುವ ದೇವತೆಯಾಗಿ ಶೀತಲಾದೇವಿಯನ್ನು ಆರಾಧಿಸ್ತಾರೆ.

ಶಕ್ತಿ ಸ್ವರೂಪಿಣಿಯಾದ ಜಗದಾಂಬೆಯು ತನ್ನ ಅನಂತ ಅನುಗ್ರಹವನ್ನು ವಿವಿಧ ರೀತಿಯಲ್ಲಿ ನೀಡಲು ಧರಿಸಿದ ರೂಪಗಳಲ್ಲಿ ಶೀತಲಾದೇವಿಯ ರೂಪವೂ ಒಂದು. ಕತ್ತೆಯ ವಾಹನದ ಮೇಲೆ ಕುಳಿತು ಮೊರ, ಪೊರಕೆ, ಕಲಶದೊಂದಿಗೆ ಇರುವ ಈ ದೇವಿಯು ರೋಗನಾಶಕ ಶಕ್ತಿಗಳ ಸಂಕೇತವಾಗಿದ್ದಾಳೆ. ಈ ದೇವಿಯ ಬಳಿ ಬಂದು ಹರಕೆ ಹೊತ್ತರೆ ರೋಗಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಇಲ್ಲಿಯ ಜನರದ್ದು. ಇದಕ್ಕೆ ಪೂರಕವೆಂಬಂತೆ ದಕ್ಷಿಣ ಭಾರತದಲ್ಲಿಯೂ ಸಹ ವಿವಿಧ ರೋಗಗಳಿಗೆ ಅಮ್ಮನವರನ್ನು, ಗ್ರಾಮ ದೇವತೆಯನ್ನು ಪೂಜಿಸುವ ಪದ್ಧತಿ ಅನಾದಿಕಾಲದಿಂದಲೂ ಇದೆ.

ಇದನ್ನೂ ಓದಿ: ಕೊರೊನಾ ಮುಕ್ತಿಗೆ ದೇವರ ಮೊರೆ ಹೋದ ಕೊಡಗು ಜನರು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ