AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಬಟ್ಟೆಗಳಿಗೆ ಅರಿಶಿನ ಹಚ್ಚೋದೇಕೆ? ಇಲ್ಲಿದೆ ಹೊಸ ಬಟ್ಟೆ ಧರಿಸುವಾಗ ಪಠಿಸಬೇಕಾದ ಮಂತ್ರ

ಬಟ್ಟೆ ಖರೀದಿಗಾಗಿ ಶುಕ್ರವಾರ ಅತ್ಯಂತ ಪ್ರಶಸ್ತವಾದ ಸಮಯ ಎನ್ನಲಾಗುತ್ತೆ. ಶನಿವಾರ ಹೊಸ ಬಟ್ಟೆಯನ್ನು ಖರೀದಿಸಬಾರದು. ಭಾನುವಾರ ಹೊಸ ಬಟ್ಟೆಯನ್ನು ಧರಿಸಬಾರದು. ಹೀಗೆ ಹೊಸ ಬಟ್ಟೆ ಖರೀದಿ ಹಾಗೂ ಧರಿಸೋ ಬಗ್ಗೆ ಕೆಲ ನಿಯಮಗಳನ್ನು ಪಾಲಿಸಬೇಕು ಅಂತಾ ನಮ್ಮ ಧರ್ಮಶಾಸ್ತ್ರ ಹೇಳುತ್ತೆ.

ಹೊಸ ಬಟ್ಟೆಗಳಿಗೆ ಅರಿಶಿನ ಹಚ್ಚೋದೇಕೆ? ಇಲ್ಲಿದೆ ಹೊಸ ಬಟ್ಟೆ ಧರಿಸುವಾಗ ಪಠಿಸಬೇಕಾದ ಮಂತ್ರ
ಅರಿಶಿನ
ಆಯೇಷಾ ಬಾನು
|

Updated on: Apr 14, 2021 | 6:27 AM

Share

ಹಿಂದೂ ಸಂಪ್ರದಾಯದ ಪ್ರಕಾರ, ಸಾಮಾನ್ಯವಾಗಿ ಶುಭ ಕಾರ್ಯಗಳು, ಹಬ್ಬ-ಹರಿದಿನಗಳಲ್ಲಿ ಹೊಸ ಬಟ್ಟೆ ಧರಿಸೋ ಪದ್ಧತಿ ಇದೆ. ಯಾಕಂದ್ರೆ ಹೊಸ ಬಟ್ಟೆಗಳು ಸದಾ ಶುಭವನ್ನುಂಟು ಮಾಡುತ್ತವೆ ಅಂತಾ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಹೊಸ ಬಟ್ಟೆ ಧರಿಸೋಕೂ ಮುನ್ನ ಕೆಲ ಮನೆಗಳಲ್ಲಿ ಅದಕ್ಕೆ ಅರಿಶಿನ ಹಚ್ಚುವ ಸಂಪ್ರದಾಯವಿದೆ. ಹಾಗೆ ಹೊಸ ಬಟ್ಟೆಯ ಅಂಚುಗಳಿಗೆ ಅರಿಶಿನ ಹಚ್ಚಿದ್ರೆ ಅದನ್ನು ತೊಡುವವರಿಗೆ ಯಾವುದೇ ದೋಷ ಉಂಟಾಗುವುದಿಲ್ಲ ಹಾಗೂ ದೃಷ್ಟಿಯಾಗುವುದಿಲ್ಲ ಅಂತಾ ಕೆಲ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಇದಿಷ್ಟೇ ಅಲ್ಲದೇ, ನಾವು ಖರೀದಿಸಿದ ಹೊಸ ಬಟ್ಟೆ ಹಾಗೂ ಅದರ ಬಣ್ಣದ ಆಧಾರದ ಮೇಲೆ ಅದನ್ನು ಶುಭ ಮುಹೂರ್ತದಲ್ಲಿ ಧರಿಸಿದ್ರೆ ಶುಭ ಫಲಗಳು ಪ್ರಾಪ್ತಿಯಾಗುತ್ತವೆ ಅಂತಾ ಧರ್ಮಶಾಸ್ತ್ರದಲ್ಲಿ ಹೇಳಲಾಗಿದೆ. ಹೀಗೆ ಹೊಸ ಬಟ್ಟೆ ಧರಿಸೋಕೂ ಮುನ್ನ ಕೆಲವು ನಿಮಯಗಳನ್ನು ಪಾಲಿಸಬೇಕು ಅಂತಾ ಕೆಲ ಪುರಾಣಗಳು ಹೇಳುತ್ತವೆ. ಅಷ್ಟಕ್ಕೂ, ಆ ನಿಮಯಗಳು ಯಾವುವು?ಇಲ್ಲಿ ಓದಿ

ಹೊಸ ಬಟ್ಟೆ ಧರಿಸೋಕೂ ಮುನ್ನ ಪಾಲಿಸಬೇಕಾದ ನಿಯಮಗಳು ಹೊಸ ಬಟ್ಟೆಯನ್ನು ಮನೆಗೆ ತಂದ ಮೇಲೆ ಮೊದಲು ಅದನ್ನು ತೊಳೆಯಬೇಕು. ಇದ್ರಿಂದ ಅದರಲ್ಲಿನ ಧೂಳು, ಸೂಕ್ಷ್ಮ ರೋಗಾಣುಗಳು, ಕೊಳಕು ನಾಶವಾಗುತ್ತೆ. ಇನ್ನು ಬಟ್ಟೆ ಖರೀದಿಸೋಕೂ ಮುನ್ನ ಅಂಗಡಿಯಲ್ಲಿ ಅನೇಕ ಜನರು ಅದನ್ನು ಹಾಕಿ ಟ್ರಯಲ್ ನೋಡಿರ್ತಾರೆ. ಇದ್ರಿಂದ ಅವರ ದೇಹದಲ್ಲಿನ ಕಾಯಿಲೆ, ರೋಗಾಣುಗಳು ಬಟ್ಟೆಯಿಂದ ಹರಡೋ ಸಾಧ್ಯತೆ ಇರುತ್ತೆ. ಹೀಗಾಗೇ ಮೊದಲು ಬಟ್ಟೆಯನ್ನು ಶುದ್ಧಗೊಳಿಸಿ, ನಂತರ ಧರಿಸಬೇಕು. ಹೊಸ ಬಟ್ಟೆಯನ್ನು ಧರಿಸುವ ಮುನ್ನ ದೇವರ ಸ್ಮರಣೆ, ಜಪ ಹಾಗೂ ಪೂಜೆ ಮಾಡಬೇಕು. ಹೊಸ ಬಟ್ಟೆ ಧರಿಸೋಕು ಮುನ್ನ ಓಂ ಗಂ ಗಣಪತಯೇ ನಮಃ ಅನ್ನೋ ಗಣಪತಿ ಮಂತ್ರವನ್ನು ಪಠಿಸಿದರೆ ಶುಭವಾಗುತ್ತೆ. ನಾವು ಬಳಸಿದ ಹಳೆಯ ಬಟ್ಟೆಯನ್ನು ಎಸೆಯೋಕೂ ಮೊದಲು ಅದನ್ನು ಸ್ವಲ್ಪ ಹರಿಯಬೇಕು. ಇದ್ರಿಂದ ನಮ್ಮ ಕುಂಡಲಿಯಲ್ಲಿನ ದೋಷಗಳು ನಿವಾರಣೆಯಾಗುತ್ತವೆ. ಹೊಸ ಬಟ್ಟೆ ಧರಿಸಿದಾಗ ಅದರ ಮೇಲೇನಾದ್ರೂ ಅರಿಶಿನ, ಗಂಧ, ಸಿಂಧೂರ ಹಾಗೂ ಜೇನುತುಪ್ಪ ಬಿದ್ದರೆ ಅದು ಶುಭ ಶಕುನ ಎನ್ನಲಾಗುತ್ತೆ. ಇದು ಭವಿಷ್ಯದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವ ಸೂಚನೆಯಾಗಿರುತ್ತೆ.

ಬಟ್ಟೆ ಖರೀದಿಗಾಗಿ ಶುಕ್ರವಾರ ಅತ್ಯಂತ ಪ್ರಶಸ್ತವಾದ ಸಮಯ ಎನ್ನಲಾಗುತ್ತೆ. ಶನಿವಾರ ಹೊಸ ಬಟ್ಟೆಯನ್ನು ಖರೀದಿಸಬಾರದು. ಭಾನುವಾರ ಹೊಸ ಬಟ್ಟೆಯನ್ನು ಧರಿಸಬಾರದು. ಹೀಗೆ ಹೊಸ ಬಟ್ಟೆ ಖರೀದಿ ಹಾಗೂ ಧರಿಸೋ ಬಗ್ಗೆ ಕೆಲ ನಿಯಮಗಳನ್ನು ಪಾಲಿಸಬೇಕು ಅಂತಾ ನಮ್ಮ ಧರ್ಮಶಾಸ್ತ್ರ ಹೇಳುತ್ತೆ. ಈ ಎಲ್ಲಾ ನಿಯಮಗಳನ್ನು ಪಾಲಿಸಿದ್ರೆ ಶುಭವಾಗುತ್ತೆ ಎಂಬ ನಂಬಿಕೆ ಅನಾದಿಕಾಲದಿಂದಲೂ ಇದೆ.

ಇದನ್ನೂ ಓದಿ: Ugadi 2021: ಯುಗಾದಿ ಹಬ್ಬದ ಮೆರಗು ಹೆಚ್ಚಿಸುವ ಸಾಂಪ್ರದಾಯಿಕ ಅಡುಗೆಗಳು

(Why Hindus Apply Turmeric Powder to New Clothes)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ