AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಬಟ್ಟೆಗಳಿಗೆ ಅರಿಶಿನ ಹಚ್ಚೋದೇಕೆ? ಇಲ್ಲಿದೆ ಹೊಸ ಬಟ್ಟೆ ಧರಿಸುವಾಗ ಪಠಿಸಬೇಕಾದ ಮಂತ್ರ

ಬಟ್ಟೆ ಖರೀದಿಗಾಗಿ ಶುಕ್ರವಾರ ಅತ್ಯಂತ ಪ್ರಶಸ್ತವಾದ ಸಮಯ ಎನ್ನಲಾಗುತ್ತೆ. ಶನಿವಾರ ಹೊಸ ಬಟ್ಟೆಯನ್ನು ಖರೀದಿಸಬಾರದು. ಭಾನುವಾರ ಹೊಸ ಬಟ್ಟೆಯನ್ನು ಧರಿಸಬಾರದು. ಹೀಗೆ ಹೊಸ ಬಟ್ಟೆ ಖರೀದಿ ಹಾಗೂ ಧರಿಸೋ ಬಗ್ಗೆ ಕೆಲ ನಿಯಮಗಳನ್ನು ಪಾಲಿಸಬೇಕು ಅಂತಾ ನಮ್ಮ ಧರ್ಮಶಾಸ್ತ್ರ ಹೇಳುತ್ತೆ.

ಹೊಸ ಬಟ್ಟೆಗಳಿಗೆ ಅರಿಶಿನ ಹಚ್ಚೋದೇಕೆ? ಇಲ್ಲಿದೆ ಹೊಸ ಬಟ್ಟೆ ಧರಿಸುವಾಗ ಪಠಿಸಬೇಕಾದ ಮಂತ್ರ
ಅರಿಶಿನ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 14, 2021 | 6:27 AM

Share

ಹಿಂದೂ ಸಂಪ್ರದಾಯದ ಪ್ರಕಾರ, ಸಾಮಾನ್ಯವಾಗಿ ಶುಭ ಕಾರ್ಯಗಳು, ಹಬ್ಬ-ಹರಿದಿನಗಳಲ್ಲಿ ಹೊಸ ಬಟ್ಟೆ ಧರಿಸೋ ಪದ್ಧತಿ ಇದೆ. ಯಾಕಂದ್ರೆ ಹೊಸ ಬಟ್ಟೆಗಳು ಸದಾ ಶುಭವನ್ನುಂಟು ಮಾಡುತ್ತವೆ ಅಂತಾ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಹೊಸ ಬಟ್ಟೆ ಧರಿಸೋಕೂ ಮುನ್ನ ಕೆಲ ಮನೆಗಳಲ್ಲಿ ಅದಕ್ಕೆ ಅರಿಶಿನ ಹಚ್ಚುವ ಸಂಪ್ರದಾಯವಿದೆ. ಹಾಗೆ ಹೊಸ ಬಟ್ಟೆಯ ಅಂಚುಗಳಿಗೆ ಅರಿಶಿನ ಹಚ್ಚಿದ್ರೆ ಅದನ್ನು ತೊಡುವವರಿಗೆ ಯಾವುದೇ ದೋಷ ಉಂಟಾಗುವುದಿಲ್ಲ ಹಾಗೂ ದೃಷ್ಟಿಯಾಗುವುದಿಲ್ಲ ಅಂತಾ ಕೆಲ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಇದಿಷ್ಟೇ ಅಲ್ಲದೇ, ನಾವು ಖರೀದಿಸಿದ ಹೊಸ ಬಟ್ಟೆ ಹಾಗೂ ಅದರ ಬಣ್ಣದ ಆಧಾರದ ಮೇಲೆ ಅದನ್ನು ಶುಭ ಮುಹೂರ್ತದಲ್ಲಿ ಧರಿಸಿದ್ರೆ ಶುಭ ಫಲಗಳು ಪ್ರಾಪ್ತಿಯಾಗುತ್ತವೆ ಅಂತಾ ಧರ್ಮಶಾಸ್ತ್ರದಲ್ಲಿ ಹೇಳಲಾಗಿದೆ. ಹೀಗೆ ಹೊಸ ಬಟ್ಟೆ ಧರಿಸೋಕೂ ಮುನ್ನ ಕೆಲವು ನಿಮಯಗಳನ್ನು ಪಾಲಿಸಬೇಕು ಅಂತಾ ಕೆಲ ಪುರಾಣಗಳು ಹೇಳುತ್ತವೆ. ಅಷ್ಟಕ್ಕೂ, ಆ ನಿಮಯಗಳು ಯಾವುವು?ಇಲ್ಲಿ ಓದಿ

ಹೊಸ ಬಟ್ಟೆ ಧರಿಸೋಕೂ ಮುನ್ನ ಪಾಲಿಸಬೇಕಾದ ನಿಯಮಗಳು ಹೊಸ ಬಟ್ಟೆಯನ್ನು ಮನೆಗೆ ತಂದ ಮೇಲೆ ಮೊದಲು ಅದನ್ನು ತೊಳೆಯಬೇಕು. ಇದ್ರಿಂದ ಅದರಲ್ಲಿನ ಧೂಳು, ಸೂಕ್ಷ್ಮ ರೋಗಾಣುಗಳು, ಕೊಳಕು ನಾಶವಾಗುತ್ತೆ. ಇನ್ನು ಬಟ್ಟೆ ಖರೀದಿಸೋಕೂ ಮುನ್ನ ಅಂಗಡಿಯಲ್ಲಿ ಅನೇಕ ಜನರು ಅದನ್ನು ಹಾಕಿ ಟ್ರಯಲ್ ನೋಡಿರ್ತಾರೆ. ಇದ್ರಿಂದ ಅವರ ದೇಹದಲ್ಲಿನ ಕಾಯಿಲೆ, ರೋಗಾಣುಗಳು ಬಟ್ಟೆಯಿಂದ ಹರಡೋ ಸಾಧ್ಯತೆ ಇರುತ್ತೆ. ಹೀಗಾಗೇ ಮೊದಲು ಬಟ್ಟೆಯನ್ನು ಶುದ್ಧಗೊಳಿಸಿ, ನಂತರ ಧರಿಸಬೇಕು. ಹೊಸ ಬಟ್ಟೆಯನ್ನು ಧರಿಸುವ ಮುನ್ನ ದೇವರ ಸ್ಮರಣೆ, ಜಪ ಹಾಗೂ ಪೂಜೆ ಮಾಡಬೇಕು. ಹೊಸ ಬಟ್ಟೆ ಧರಿಸೋಕು ಮುನ್ನ ಓಂ ಗಂ ಗಣಪತಯೇ ನಮಃ ಅನ್ನೋ ಗಣಪತಿ ಮಂತ್ರವನ್ನು ಪಠಿಸಿದರೆ ಶುಭವಾಗುತ್ತೆ. ನಾವು ಬಳಸಿದ ಹಳೆಯ ಬಟ್ಟೆಯನ್ನು ಎಸೆಯೋಕೂ ಮೊದಲು ಅದನ್ನು ಸ್ವಲ್ಪ ಹರಿಯಬೇಕು. ಇದ್ರಿಂದ ನಮ್ಮ ಕುಂಡಲಿಯಲ್ಲಿನ ದೋಷಗಳು ನಿವಾರಣೆಯಾಗುತ್ತವೆ. ಹೊಸ ಬಟ್ಟೆ ಧರಿಸಿದಾಗ ಅದರ ಮೇಲೇನಾದ್ರೂ ಅರಿಶಿನ, ಗಂಧ, ಸಿಂಧೂರ ಹಾಗೂ ಜೇನುತುಪ್ಪ ಬಿದ್ದರೆ ಅದು ಶುಭ ಶಕುನ ಎನ್ನಲಾಗುತ್ತೆ. ಇದು ಭವಿಷ್ಯದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವ ಸೂಚನೆಯಾಗಿರುತ್ತೆ.

ಬಟ್ಟೆ ಖರೀದಿಗಾಗಿ ಶುಕ್ರವಾರ ಅತ್ಯಂತ ಪ್ರಶಸ್ತವಾದ ಸಮಯ ಎನ್ನಲಾಗುತ್ತೆ. ಶನಿವಾರ ಹೊಸ ಬಟ್ಟೆಯನ್ನು ಖರೀದಿಸಬಾರದು. ಭಾನುವಾರ ಹೊಸ ಬಟ್ಟೆಯನ್ನು ಧರಿಸಬಾರದು. ಹೀಗೆ ಹೊಸ ಬಟ್ಟೆ ಖರೀದಿ ಹಾಗೂ ಧರಿಸೋ ಬಗ್ಗೆ ಕೆಲ ನಿಯಮಗಳನ್ನು ಪಾಲಿಸಬೇಕು ಅಂತಾ ನಮ್ಮ ಧರ್ಮಶಾಸ್ತ್ರ ಹೇಳುತ್ತೆ. ಈ ಎಲ್ಲಾ ನಿಯಮಗಳನ್ನು ಪಾಲಿಸಿದ್ರೆ ಶುಭವಾಗುತ್ತೆ ಎಂಬ ನಂಬಿಕೆ ಅನಾದಿಕಾಲದಿಂದಲೂ ಇದೆ.

ಇದನ್ನೂ ಓದಿ: Ugadi 2021: ಯುಗಾದಿ ಹಬ್ಬದ ಮೆರಗು ಹೆಚ್ಚಿಸುವ ಸಾಂಪ್ರದಾಯಿಕ ಅಡುಗೆಗಳು

(Why Hindus Apply Turmeric Powder to New Clothes)

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ