AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಗಲ್ಯದೊಂದಿಗೆ ಕರಿಮಣಿ ಧರಿಸುವುದರ ಮಹತ್ವ ಏನು ಗೊತ್ತಾ?

ಸಂಪ್ರದಾಯವನ್ನು ಎತ್ತಿ ಹಿಡಿಯುವ ಮಂಗಳಕರ ಆಭರಣಗಳನ್ನು ಧರಿಸುವುದರಿಂದ ನಾರಿ ಪೂಜನೀಯಳಾಗ್ತಾಳೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ದುಷ್ಟಶಕ್ತಿಗಳ ದೃಷ್ಟಿ ಮಾಂಗಲ್ಯದ ಮೇಲೆ ಬೀಳದಂತಿರಲು ಕರಿಮಣಿಯನ್ನು ಗೃಹಿಣಿಯರು ಧರಿಸ್ತಾರೆ.

ಮಾಂಗಲ್ಯದೊಂದಿಗೆ ಕರಿಮಣಿ ಧರಿಸುವುದರ ಮಹತ್ವ ಏನು ಗೊತ್ತಾ?
ಮಾಂಗಲ್ಯ ಸರ
ಆಯೇಷಾ ಬಾನು
|

Updated on: Apr 10, 2021 | 6:58 AM

Share

ನಮ್ಮ ಭಾರತೀಯ ಸಂಪ್ರದಾಯದಲ್ಲಿ ಪ್ರತಿಯೊಂದು ಆಚರಣೆಗೂ ಒಂದೊಂದು ಸಾಂಪ್ರದಾಯಿಕ ಮಹತ್ವವಿದೆ. ಹಾಗೆಯೇ ಅದರ ಹಿಂದೆ ವೈಜ್ಞಾನಿಕ ಪ್ರಜ್ಞೆಯೂ ಇರುತ್ತೆ. ಅದಕ್ಕೊಂದು ಉತ್ತಮ ಉದಾಹರಣೆ ಎಂದರೆ ಸುಮಂಗಲಿಯರು ಧರಿಸುವ ಕರಿಮಣಿ. ಕರಿಮಣಿ ಸರ ಸ್ತ್ರೀಯರು ಮದುವೆಯಾಗಿರುವುದರ ಸಂಕೇತ. ಮಂಗಳಕರವಾದ, ಸೌಭಾಗ್ಯವಾದ ಆಭರಣ.

ಮುತ್ತೈದೆಯರು ಕರಿಮಣಿ ಜೊತೆಗೆ ತಾಳಿ, ಕುಂಕುಮ, ಗಾಜಿನ ಬಳೆ, ಕಾಲುಂಗುರ, ಮುಡಿಗೆ ಅರಳಿದ ಹೂವು ಧರಿಸಿದ್ದರೆ ಸುಮಂಗಲಿ ಎನಿಸಿಕೊಳ್ತಾರೆ. ಆದ್ರೆ ಇಂದು ಆಧುನಿಕತೆಯ ಮೋಹಕ್ಕೆ ಒಳಗಾಗಿರುವ ಗೃಹಿಣಿಯರು ಸೌಭಾಗ್ಯದ ಸೂಚಕವಾದ ಇವುಗಳನ್ನು ಧರಿಸುವುದರಲ್ಲಿ ಆಸಕ್ತಿ ವಹಿಸುತ್ತಿಲ್ಲ. ನಿಮಗೆ ಗೊತ್ತಾ? ಸಂಪ್ರದಾಯವನ್ನು ಎತ್ತಿ ಹಿಡಿಯುವ ಮಂಗಳಕರ ಆಭರಣಗಳನ್ನು ಧರಿಸುವುದರಿಂದ ನಾರಿ ಪೂಜನೀಯಳಾಗ್ತಾಳೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ದುಷ್ಟಶಕ್ತಿಗಳ ದೃಷ್ಟಿ ಮಾಂಗಲ್ಯದ ಮೇಲೆ ಬೀಳದಂತಿರಲು ಕರಿಮಣಿಯನ್ನು ಗೃಹಿಣಿಯರು ಧರಿಸ್ತಾರೆ. ಅಷ್ಟೇ ಅಲ್ಲದೇ, ಕರಿಮಣಿಯು ಸಂತಾನ ಸಾಫಲ್ಯ, ಧನ, ಸುಖದ ಚಿಹ್ನೆಯಾಗಿದೆ. ಕೆಲವರು ಇದರ ಸ್ಥಾನದಲ್ಲಿ ಹವಳವನ್ನು ಉಪಯೋಗಿಸ್ತಾರೆ. ಅದೂ ಸಹ ಶ್ರೇಷ್ಠವಾದುದ್ದೇ ಆಗಿದೆ.

ಕರಿಮಣಿಸರದ ವೈಶಿಷ್ಟ್ಯವೆಂದರೆ ಎದೆಯ ಭಾಗದಲ್ಲಿ ಉಂಟಾಗುವ ಉಷ್ಣತೆಯನ್ನು ಅದು ಹೀರಿಕೊಳ್ಳುತ್ತೆ. ಇದರ ಅತಿ ಮುಖ್ಯವಾದ ಉಪಯುಕ್ತತೆ ಹಾಲುಣಿಸುವ ತಾಯಿಯಲ್ಲಿ ಎದೆಹಾಲಿನ ಉಷ್ಣತೆಯನ್ನು ಹೀರಿಕೊಂಡು ಎದೆಹಾಲು ಕೆಡದಂತೆ ಕಾಪಾಡುತ್ತೆ. ಈ ಮೂಲಕ ಎದೆಹಾಲು ಶಿಶುವಿಗೆ ಸಮ ಉಷ್ಣತೆಯಲ್ಲಿರಲು ಸಹಾಯ ಮಾಡುತ್ತೆ. ಆಧ್ಯಾತ್ಮಿಕವಾಗಿ ಕರಿಮಣಿಸರ ಕತ್ತಿನ ಸುತ್ತ ಸುಷುಮ್ನಾ ನಾಡಿಗೆ, ಸಮ್ಮಿಲನ ಚಕ್ರಗಳ ಆಧಾರವಾದ ಬೆನ್ನೆಲುಬಿನ ಮೇಲ್ಭಾಗ ವಿಶುದ್ಧ ಚಕ್ರಕ್ಕೆ ಹೊಂದಿಕೊಂಡಂತೆ ಇರುತ್ತೆ. ಅಲ್ಲದೇ, ಇದು ಹೃದಯದ ಭಾಗದಲ್ಲಿರುವ ಅನಾಹತ ಚಕ್ರದಲ್ಲಿ ಸಮ್ಮಿಲನಗೊಳ್ಳುತ್ತೆ. ಹೃದಯ ಜ್ಯೋತಿಯು ಸದಾ ದರ್ಶನೀಯವೆಂದು ಸೂಚಿಸುವುದೇ ಮಾಂಗಲ್ಯದ ಸಂಕೇತ. ಜ್ಯೋತಿಷ್ಯಶಾಸ್ತ್ರ ಗ್ರಂಥಗಳಲ್ಲಿ ದ್ವಾದಶ ರಾಶಿಯವರು ಎಷ್ಟೆಷ್ಟು ಕರಿಮಣಿಯನ್ನು ಸರದಲ್ಲಿ ಹಾಕಿಕೊಳ್ಳಬೇಕೆಂಬುದನ್ನು ಉಲ್ಲೇಖಿಸಲಾಗಿದೆ. ಹೀಗೆ ಕರಿಮಣಿಸರವು ಸ್ತ್ರೀಯ ಸೌಭಾಗ್ಯವೆನಿಸುವುದರಲ್ಲಿ ಮಹತ್ತರ ಪಾತ್ರವನ್ನು ವಹಿಸಿದೆ.

ಇದನ್ನೂ ಓದಿ: ಕೊಡಗು ಸಂಸ್ಕೃತಿಯ ಅನಾವರಣ; ವಿಶಿಷ್ಟ ಸ್ಪರ್ಧೆಯ ಮೂಲಕ ಯುವ ಪಿಳಿಗೆಗೆ ಸಂಪ್ರದಾಯವನ್ನು ತಿಳಿಸುವ ಪ್ರಯತ್ನ

(Why Women Wear Black Beads in Mangalsutra)

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​