AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Ozone Day 2022: ಓಝೋನ್ ಪದರ ಸಂರಕ್ಷಣೆಗಾಗಿ ಅಂತಾರಾಷ್ಟ್ರೀಯ ದಿನದ ಇತಿಹಾಸ ಮತ್ತು ಮಹತ್ವ

ವಿಪರೀತ ವಾಯುಮಾಲಿನ್ಯದಿಂದಾಗಿ ಕ್ಷೀಣಿಸುತ್ತಿರುವ ಓಝೋನ್ ಪದರದ ಸಂರಕ್ಷಣೆಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಸೆ.16ರಂದು ವಿಶ್ವ ಓಝೋನ್ ದಿನವನ್ನಾಗಿ ಆಚರಿಸಲಾಗುತ್ತದೆ.

World Ozone Day 2022: ಓಝೋನ್ ಪದರ ಸಂರಕ್ಷಣೆಗಾಗಿ ಅಂತಾರಾಷ್ಟ್ರೀಯ ದಿನದ ಇತಿಹಾಸ ಮತ್ತು ಮಹತ್ವ
ವಿಶ್ವ ಓಝೋನ್ ದಿನ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Rakesh Nayak Manchi

Updated on: Sep 16, 2022 | 7:30 AM

ವಾಹನಗಳು ಮತ್ತು ತಂತ್ರಜ್ಞಾನಗಳ ಹೆಚ್ಚಳದಿಂದ ಮಾಲಿನ್ಯವು ಎಷ್ಟರಮಟ್ಟಿಗೆ ಹೆಚ್ಚುತ್ತಿದೆ ಎಂಬುದನ್ನು ಯಾರಿಂದಲೂ ಮರೆಮಾಡಲಾಗಿಲ್ಲ. ಪ್ರಪಂಚದಾದ್ಯಂತ, ವಿಶೇಷವಾಗಿ ದೊಡ್ಡ ನಗರಗಳಲ್ಲಿ ವಾಯುಮಾಲಿನ್ಯವು ತುಂಬಾ ಹೆಚ್ಚಾಗಿದೆ, ಜನರು ಉಸಿರಾಡಲು ಸಹ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಮಾಲಿನ್ಯದಿಂದಾಗಿ ಮಕ್ಕಳು ಮತ್ತು ವಯಸ್ಕರ ಆರೋಗ್ಯವು ಕೆಟ್ಟದಾಗಿ ಪರಿಣಾಮ ಬೀರುತ್ತಿದೆ. ವಾತಾವರಣದಲ್ಲಿರುವ ಓಝೋನ್ ಪದರವು ನಿರಂತರವಾಗಿ ಹಾನಿಗೊಳಗಾಗುತ್ತಿದೆ. ಹೀಗಾಗಿ ಓಝೋನ್ ಅನ್ನು ರಕ್ಷಿಸುವ ಮತ್ತು ಸಮಸ್ಯೆಗಳನ್ನು ನಿವಾರಿಸುವ ಸಲುವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಸೆ.16ರಂದು ವಿಶ್ವ ಓಝೋನ್ ದಿನವನ್ನಾಗಿ ಆಚರಿಸಲಾಗುತ್ತದೆ.

ವಿಶ್ವ ಓಝೋನ್ ದಿನದ ಇತಿಹಾಸ

1994 ರಲ್ಲಿ, UN ಜನರಲ್ ಅಸೆಂಬ್ಲಿ ಸೆಪ್ಟೆಂಬರ್ 16 ಅನ್ನು ಓಝೋನ್ ಪದರವನ್ನು ಸಂರಕ್ಷಿಸಲು ವಾರ್ಷಿಕ ಅಂತರಾಷ್ಟ್ರೀಯ ದಿನವೆಂದು ಘೋಷಿಸಿತು. ಜಗತ್ತಿನಾದ್ಯಂತ 46 ದೇಶಗಳ ಸರ್ಕಾರಗಳು 1987 ರಲ್ಲಿ “ಓಝೋನ್ ಪದರವನ್ನು ಸವಕಳಿ ಮಾಡುವ ವಸ್ತುಗಳ ಮೇಲೆ ಮಾಂಟ್ರಿಯಲ್ ಪ್ರೋಟೋಕಾಲ್” ಗೆ ಸಹಿ ಹಾಕಿದವು ಮತ್ತು ಆ ಘಟನೆಯನ್ನು ಆಚರಿಸಲು ಇದನ್ನು ಮಾಡಲಾಯಿತು. “ಮಾಂಟ್ರಿಯಲ್ ಪ್ರೋಟೋಕಾಲ್” ಎಂಬುದು ಇದರ ಮತ್ತೊಂದು ಹೆಸರು.

ಪ್ರತಿ ವರ್ಷ ವಿಶ್ವ ಓಝೋನ್ ದಿನವನ್ನು ಒಂದೊಂದು ಥೀಮ್ ಮುಂದಿಟ್ಟುಕೊಂಡು ಆಚರಣೆಯೊಂದಿಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುತ್ತಾ ಬರಲಾಗುತ್ತಿದೆ. ಈ ವರ್ಷ ‘ಮಾಂಟ್ರಿಯಲ್ ಪ್ರೋಟೋಕಾಲ್ @ 35: ಭೂಮಿಯ ಮೇಲಿನ ಜೀವನವನ್ನು ರಕ್ಷಿಸುವ ಜಾಗತಿಕ ಸಹಕಾರ’ ಎಂಬೂದಾಗಿದೆ ಆಗಿದೆ.

ವಿಶ್ವ ಓಝೋನ್ ದಿನದ ಮಹತ್ವಗಳು

ಹೆಚ್ಚಿನವರಿಗೆ ತಿಳಿದಂತೆ ಸೂರ್ಯನ ವಿಕಿರಣವು ಭೂಮಿಗೆ ನೇರವಾಗಿ ಅಪ್ಪಳಿಸುವುದರ ಜೊತೆಗೆ ಜೀವ ಸಂಕುಲಗಳಿಗೆ ಹಾನಿಯನ್ನು ಉಂಟು ಮಾಡುತ್ತದದೆ. ವಿಕಿರಣವು ಚರ್ಮದ ಕ್ಯಾನ್ಸರ್, ಕಣ್ಣಿನ ಪೊರೆಗಳು ಮತ್ತು ಹಲವಾರು ಇತರ ಆರೋಗ್ಯ ಸಂಬಂಧಿತ ತೊಡಕುಗಳಿಗೆ ಕಾರಣವಾಗಬಹುದು. ಆದರೆ ಸೂರ್ಯನ ವಿಕಿರಣವು ಭೂಮಿಗೆ ನೇರವಾಳಿ ಬೀಳದಂತೆ ಒಝೋನ್ ಪದರವು ಹೀರಿಕೊಳ್ಳುತ್ತದೆ ಮತ್ತು ಭೂಮಿಗೆ ತಲುಪುವ ವಿಕಿರಣದ ಪ್ರಮಾಣವನ್ನು ಮಿತಿಗೊಳಿಸುತ್ತದೆ. ಆದರೆ ಉತ್ತರ ಗೋಳಾರ್ಧದ ಓಝೋನ್ ಪದರದ ದಪ್ಪವು ವಾರ್ಷಿಕವಾಗಿ 4 ಪ್ರತಿಶತದಷ್ಟು ಕುಸಿದಿದೆ ಎಂದು ಸೂಚಿಸುವ ವರದಿಗಳಿವೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ದಿನ ಮಹತ್ವದ್ದಾಗಿದೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ