AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಾಂತ್ಯ ವಿಶೇಷ 2020: ‘ಓದಿನಂಗಳ‘ದಲ್ಲಿ ಪತ್ರಕರ್ತ ನಾಗೇಶ ಹೆಗಡೆ

‘ಬಡತನದ ನೋವು, ಹಸಿವು, ಅವಮಾನದಿಂದ ಸಿಡಿದು ಸಿಡಿಮಿಡಿಗುಟ್ಟುವ ಮಾಮೂಲು ಪ್ರತಿರೋಧದ ದನಿಯ ಬದಲು ಇಲ್ಲಿ, ಸಮಾಜದ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂಬ ತುಡಿತದಿಂದ ಕೆಲಸ ಮಾಡಿದ ಅನುಭವಗಳು ಆಪ್ತವಾಗಿವೆ. ಕನ್ನಡದ ಮಟ್ಟಿಗೆ ‘ಹಾದಿಗಲ್ಲು’ ಅಪರೂಪದ ಸಾಹಿತ್ಯವಾಗಿದೆ.’ ಎಂದಿದ್ದಾರೆ ನಾಗೇಶ ಹೆಗಡೆ.

ವರ್ಷಾಂತ್ಯ ವಿಶೇಷ 2020: ‘ಓದಿನಂಗಳ‘ದಲ್ಲಿ ಪತ್ರಕರ್ತ ನಾಗೇಶ ಹೆಗಡೆ
ಪತ್ರಕರ್ತ, ಲೇಖಕ ನಾಗೇಶ ಹೆಗಡೆ
TV9 Web
| Updated By: ganapathi bhat|

Updated on:Apr 06, 2022 | 11:07 PM

Share

ನಮ್ಮ ಮಾತಿಗೆ, ಮೌನಕ್ಕೆ, ಆಲಿಸುವಿಕೆಗೆ, ನೋಟಕ್ಕೆ, ಸ್ಪರ್ಶಕ್ಕೆ ಮಿಗಿಲಾದುದರ ಹುಡುಕಾಟ ಮತ್ತು ತಣಿಕೆಗಾಗಿಯೇ ನಾವು ಮತ್ತೆ ಮತ್ತೆ ಅಕ್ಷರಲೋಕದ ಸಾಂಗತ್ಯಕ್ಕೆ ಬೀಳುವುದು. ಅದು ಉಸಿರಿನಷ್ಟೇ ಸಹಜ. ಭಾವಕ್ಕೂ ಬುದ್ಧಿಗೂ ಬೇಕಾದ ಈ ಆಮ್ಲಜನಕಕ್ಕಾಗಿ ನಾವು ಜಂಜಡಗಳ ಮಧ್ಯೆಯೇ ಹೆಚ್ಚೆಚ್ಚು ಆತುಕೊಳ್ಳುತ್ತಲು ನೋಡುತ್ತಿರುತ್ತೇವೆ. ಈ ವರ್ಷ ಆವರಿಸಿದ ಮಹಾಶೂನ್ಯದೊಂದಿಗೇ ನಾವು ಏನು ಓದಿದೆವು?

‘tv9 ಕನ್ನಡ ಡಿಜಿಟಲ್ ವರ್ಷಾಂತ್ಯ ವಿಶೇಷ 2020: ಓದಿನಂಗಳ’ ಸರಣಿಗಾಗಿ ಕನ್ನಡದ ಹಿರಿ-ಕಿರಿಯ ಕಥೆಗಾರರು, ಕಾದಂಬರಿಕಾರರು, ಕವಿಗಳು ಮತ್ತು ಗಂಭೀರ ಓದುಗರು ಈ ವರ್ಷ ತಾವು ಓದಿ ಮೆಚ್ಚಿದ ಎರಡು ಪುಸ್ತಕಗಳ ಬಗ್ಗೆ ಪುಟ್ಟ ಟಿಪ್ಪಣಿ ನೀಡಿದ್ದಾರೆ. ಹಿರಿಯ ಪತ್ರಕರ್ತ, ಲೇಖಕ ನಾಗೇಶ ಹೆಗಡೆ ಅವರ ಆಯ್ಕೆಗಳು ಹೀಗಿವೆ.

ಕೃ: ಹಾದಿಗಲ್ಲು (ಆತ್ಮಕಥೆ) ಲೇ: ಕೆ.ಎ. ದಯಾನಂದ ಪ್ರ: ಸಮನ್ವಿತ ಪ್ರಕಾಶನ

ಇದು ಐಎಎಸ್ ಅಧಿಕಾರಿ ಕೆ.ಎ. ದಯಾನಂದ ಅವರ ಆತ್ಮಕಥೆಯ ಮೊದಲ ಭಾಗ. ತುಂಬ ಆತ್ಮೀಯವಾಗಿದೆ. ಗ್ರಾಮೀಣ ಬಡ ಕುಟುಂಬದಿಂದ ಬಂದ ದಯಾನಂದ, ಮೇಸ್ತ್ರಿ ಕೆಲಸ ಮಾಡುತ್ತಲೇ ಬಿಎ ಎಮ್ಎ ಮುಗಿಸಿ, ಎಲ್ಲೋ ಗುಮಾಸ್ತನಾಗಿ, ನಂತರ ಶಿಕ್ಷಕನಾಗಿ, ಆಮೇಲೆ ಕೆಎಎಸ್ ಅಧಿಕಾರಿಯಾಗಿ ತಮ್ಮ ದಕ್ಷ ಮತ್ತು ಪ್ರಾಮಾಣಿಕ ಕೆಲಸದಿಂದಾಗಿ ಐಎಎಸ್ ಅಧಿಕಾರಿಯಾಗಿ ಪದೋನ್ನತಿ ಪಡೆದವರು. ಒಬ್ಬ ಆಡಳಿತಾಧಿಕಾರಿಯಾಗಿ ಗ್ರಾಮೀಣ ಬದುಕಿನ ಚಿತ್ರಣವನ್ನು ಸೊಗಸಾಗಿ, ತೀರ ಅಪರೂಪದ ಆಪ್ತ ಶೈಲಿಯಲ್ಲಿ ಕಟ್ಟಿಕೊಟ್ಟಿದ್ದಾರೆ.

ಈ ಕಥನದಲ್ಲಿ ಅವರ ಬಾಲ್ಯದ ಹಳ್ಳಿ ಬದುಕಿನ ಅನುಭವಗಳ ಜೊತೆಜೊತೆಗೇ ಸರಕಾರಿ ಅಧಿಕಾರಿಯೊಬ್ಬನ ದೃಷ್ಟಿಕೋನವೂ ಇರುವುದರಿಂದ ಇದುವರೆಗೆ ಕನ್ನಡದಲ್ಲಿ ಬಂದ ಗ್ರಾಮೀಣ ಚಿತ್ರಣಕ್ಕಿಂತ ವಿಭಿನ್ನವಾದ ದೃಷ್ಟಿಕೋನವನ್ನು ಕಾಣಬಹುದಾಗಿದೆ. ಎಮ್ಮೆ ಬಾಲ ಹಿಡಿದು ಈಜು ಕಲಿತಿದ್ದು, ಕೋಳಿ ಕದಿಯಲು ಹೋಗಿ ಹೈರಾಣಾಗಿದ್ದು, ನಕ್ಸಲ್ ಸರೋಜಳ ಊರಿಗೆ ಕರೆಂಟ್ ಕೊಡಿಸಿದ್ದು ಓತಪ್ರೋತವಾಗಿ ಇಲ್ಲಿ ಬಂದಿವೆ. ಬಡತನದ ನೋವು, ಹಸಿವು, ಅವಮಾನದಿಂದ ಸಿಡಿದು ಸಿಡಿಮಿಡಿಗುಟ್ಟುವ ಮಾಮೂಲು ಪ್ರತಿರೋಧದ ದನಿಯ ಬದಲು ಇಲ್ಲಿ, ಸಮಾಜದ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂಬ ತುಡಿತದಿಂದ ಕೆಲಸ ಮಾಡಿದ ಅನುಭವಗಳು ಆಪ್ತವಾಗಿವೆ. ಕನ್ನಡದ ಮಟ್ಟಿಗೆ ಅಪರೂಪದ ಸಾಹಿತ್ಯವಾಗಿದೆ.

ಕೃ: ಊರೆಂಬ ಉದರ ಲೇ: ಪ್ರಮೀಳಾ ಸ್ವಾಮಿ ಪ್ರ: ಅಕ್ಷರ ಪ್ರಕಾಶನ

ಜೀವನದ ಮುಖ್ಯಭಾಗವನ್ನು ಕುಪ್ಪಹಳ್ಳಿ ಎಂಬ ಸುಸಂಸ್ಕೃತ ಹಳ್ಳಿಯಲ್ಲಿ ಕಳೆದ ಹಿರಿಯ ಮಹಿಳೆ ಪ್ರಮೀಳಾ ಸ್ವಾಮಿ ಕೊನೆಗೆ ಬೆಂಗಳೂರಿನ ಮಗಳ ಮನೆಯಲ್ಲಿ ಕೂತು ನೆನಪಿಸಿಕೊಳ್ಳುವ ತಂಪು ಕಥನ ಇಲ್ಲಿದೆ. ತಾನು ಬಿಟ್ಟು ಬಂದ ಹಳ್ಳಿಯ ಜನ, ನಡೆನುಡಿ, ಚಿಕ್ಕಪುಟ್ಟ ಕಥನಗಳ ಜೊತೆಗೆ ಅಡುಗೆ ರಿಸಿಪಿಯೂ ಇದರಲ್ಲಿದೆ. ಮರೆಯಲಾಗದ ಹಾಡು-ಹಸೆ, ಮರೆಯಬಾರದ ಅಡುಗೆ ವಿಧಾನ, ಹೊಳೆ ಊಟ, ಪುಳ್ಳಂಗಾಯಿ ಉಂಡೆ, ದೇವರ ದೀಪಕ್ಕಾಗಿ ಹಿಪ್ಪೆ ಎಣ್ಣೆ ತಯಾರಿಸುವುದು, ಗರುಡಮಚ್ಚೆಯ ಮೇಷ್ಟ್ರೂ, ನಾಗರಪಂಚಮಿಯಂದು ಮರದ ಮೇಲೆ ನಿಜದ ಹಾವು ತೂಗಾಡಿದ್ದು, ಎಲ್ಲವೂ ಒಂದಕ್ಕೊಂದು ಆಪ್ಯಾಯಮಾನವಾಗಿ ಹೆಣೆದುಕೊಂಡಿವೆ.

ಹಿರಿಯ ಜೀವವೊಂದು ತನ್ನೆಲ್ಲ ಕರ್ತವ್ಯಗಳನ್ನು ಮುಗಿಸಿ ಜಗುಲಿಯಲ್ಲಿ ಕೂತು ಗತಕಾಲದ ಮಾಯೆಯನ್ನು ಮೆಲುಕುವಂತೆ ರಚಿತವಾದ ಈ ಕೃತಿ ‘ಮುಂದಿನ ಪೀಳಿಗೆಗೆ ದಾಟಿಸುವ ಸಿರಿ ಅರಿವಿನಂತೆ’ ಎಂದು ವೈದೇಹಿ ಬಣ್ಣಿಸಿದ್ದಾರೆ. ಇದು ಸಂಸ್ಕೃತಿ ಕಥನವೂ ಹೌದು, ಬೇರುಮೂಲದಲ್ಲಿ ವಿಸ್ತರಿಸಿಕೊಂಡ ಜೀವಿವೈವಿಧ್ಯದ ಪರಿಸರ ಕಥನವೂ ಹೌದು. ಕನ್ನಡ ಸಾಹಿತ್ಯಕ್ಕೆ ಅಪರೂಪವಾಗಿ ಬಂದ ಒಂದು ರುಚಿಕರ ಕಲಸು ಮೇಲೋಗರ ಇದು.

ವರ್ಷಾಂತ್ಯ ವಿಶೇಷ 2020: ’ಓದಿನಂಗಳ’ದಲ್ಲಿ ಲೇಖಕ ದಸ್ತಗೀರ ಸಾಬ ದಿನ್ನಿ

Published On - 5:03 pm, Thu, 31 December 20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!