AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ.. ನೀವು ಶ್ರೀಮಂತರಾಗುವುದು ಖಚಿತ!

Chanakya Niti: ಆಚಾರ್ಯ ಚಾಣಕ್ಯರು ಹೇಳಿದ ಮುಖ್ಯ ವಿಷಯವೆಂದರೆ ನಿಮ್ಮ ಗುರಿ ಏನೆಂದು ಯಾರಿಗೂ ಹೇಳಬಾರದು. ಆಗ ಮಾತ್ರ ಗುರಿಯನ್ನು ತ್ವರಿತವಾಗಿ ತಲುಪಲು ಸಾಧ್ಯವಾಗುತ್ತದೆ. ಗುರಿ ಮುಟ್ಟುವವರೆಗೆ ಶಾಂತವಾಗಿರಿ.

ಚಾಣಕ್ಯ ನೀತಿ: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ.. ನೀವು ಶ್ರೀಮಂತರಾಗುವುದು ಖಚಿತ!
ಚಾಣಕ್ಯ ನೀತಿ: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ.. ನೀವು ಶ್ರೀಮಂತರಾಗುವುದು ಖಚಿತ!
ಸಾಧು ಶ್ರೀನಾಥ್​
|

Updated on:Jan 15, 2024 | 5:33 PM

Share

ಚಾಣಕ್ಯ ನೀತಿ ಕುರಿತು ಅನೇಕ ಪುಸ್ತಕಗಳು ಇವೆ. ಜೀವನದಲ್ಲಿ ಉನ್ನತ ಸ್ಥಾನಗಳಿಗೆ ಹೋಗಬೇಕಾದರೆ ಚಾಣಕ್ಯನ ನೀತಿಯನ್ನು ಅನುಸರಿಸಬೇಕು ಎನ್ನುತ್ತಾರೆ. ಅದರಿಂದ ಪ್ರತಿಯೊಬ್ಬರೂ ಜೀವನದಲ್ಲಿ ಐಷಾರಾಮಿಯಾಗಿ ಬದುಕಬೇಕು, ಶ್ರೀಮಂತರಾಗಬೇಕು, ಸಂಪತ್ತು ಹೆಚ್ಚಾಗಬೇಕು ಮತ್ತು ಗೌರವವನ್ನು ಹೆಚ್ಚಿಸಿಕೊಳ್ಳಬೇಕು. ಹೆಚ್ಚು ಹಣವಿದ್ದರೆ ಕಷ್ಟಗಳಿರುವುದಿಲ್ಲ, ಸುಖವಾಗಿರಬಹುದು ಎಂಬ ನಂಬಿಕೆ ಇದೆ. ಕೆಲವರು ಶ್ರೀಮಂತರಾಗಿ ಬದುಕಲು ಕಷ್ಟಪಡುತ್ತಾರೆ. ಅವರಲ್ಲಿ ಕೆಲವರು ಯಶಸ್ವಿಯಾಗಿದ್ದಾರೆ ಮತ್ತು ಕೆಲವರು ಸೋತಿದ್ದಾರೆ. ಈ ಚಾಣಕ್ಯ ಸೂತ್ರಗಳು ಶ್ರೀಮಂತರಾಗಲು ಬಯಸುವವರಿಗೆ ಸಹಾಯ ಮಾಡುತ್ತದೆ. ಈಗ ಶ್ರೀಮಂತರಾಗಲು ಚಾಣಕ್ಯ ಏನು ಹೇಳಿದರು ಎಂದು ನೋಡೋಣ. ಅವರು ಹೇಳಿದ ಕೆಲವು ಅಭ್ಯಾಸಗಳನ್ನು ರೂಢಿಸಿಕೊಂಡರೆ ಕಡಿಮೆ ಸಮಯದಲ್ಲಿ ಶ್ರೀಮಂತರಾಗಬಹುದು. ಹೇಗೆ ಎಂದು ನೋಡೋಣ.

* ಬೆಳಗ್ಗೆ ಬೇಗ ಏಳುವುದನ್ನು ರೂಢಿಸಿಕೊಳ್ಳಿ. ಬ್ರಹ್ಮ ಮುಹೂರ್ತದಲ್ಲಿ ಬೆಳಗ್ಗೆ ಏಳುವವನು ಜೀವನದಲ್ಲಿ ಯಶಸ್ವಿಯಾಗುತ್ತಾನೆ ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ.

* ಅತಿಯಾಗಿ ತಿನ್ನಬೇಡಿ. ಆಹಾರಕ್ಕಾಗಿ ಹೆಚ್ಚು ಹಣವನ್ನು ಖರ್ಚು ಮಾಡಬೇಡಿ. ಯಾವುದು ಅಗತ್ಯವೋ ಅದನ್ನು ಮಾತ್ರ ಮಾಡಬೇಕು. ಹಾಗೆಯೇ ಜಾಗರೂಕರಾಗಿರಿ. ನೀವು ಕಷ್ಟಪಟ್ಟು ಕೆಲಸ ಮಾಡಿದರೆ, ಜೀವನದಲ್ಲಿ ಬೇಗನೆ ಯಶಸ್ವಿಯಾಗುತ್ತೀರಿ.

ಇದನ್ನು ಓದಿ: Sankranti Astrology – ಮಕರ ರಾಶಿಗೆ ಸೂರ್ಯ ಗ್ರಹ ಪ್ರವೇಶ.. ಈ ರಾಶಿಗಳವರಿಗೆ ಸಂಕ್ರಾಂತಿ ಕಾರಣ ವೃತ್ತಿ, ಉದ್ಯೋಗದಲ್ಲಿ ಉತ್ತಮ ಫಲಿತಾಂಶ ಪ್ರಾಪ್ತಿ

* ಸೋಮಾರಿತನ ನಿಮ್ಮನ್ನು ಮುನ್ನಡೆಸಲು ಬಿಡಲ್ಲ. ಕೆಲಸದ ಯಾವಾಗ ಮಾಡಬೇಕು ಎಂಬುದನ್ನು ಅರಿತುಕೊಂಡು ಕೂಡಲೇ ಪೂರ್ಣಗೊಳಿಸಬೇಕು. ಇಲ್ಲವಾದರೆ ಸೋಮಾರಿಯಾದರೆ.. ಯಶಸ್ಸು ಸಿಗುವುದಿಲ್ಲ.

* ಶ್ರೀಮಂತರಾಗಲು ಬಯಸುವವರು ಯಾವಾಗಲೂ ಹಣವನ್ನು ಹೇಗೆ ಉಳಿಸಬೇಕು ಎಂಬುದನ್ನು ಗಮನಿಸಬೇಕು. ಹಾಗೆ ಉಳಿಸಿದರೆ ಕಷ್ಟಕಾಲದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು.

* ಹಣ ಗಳಿಸುವುದರಲ್ಲಿ ಯಾವತ್ತೂ ಅಹಂಕಾರ ಇರಬಾರದು. ಅಹಂಕಾರವು ದುಃಖಕ್ಕೆ ಕಾರಣವಾಗುತ್ತದೆ ಎಂದು ಹಿರಿಯರು ಹೇಳುತ್ತಾರೆ. ಅಹಂಕಾರಿ ಜನರಲ್ಲಿ ಹಣವು ಹೆಚ್ಚು ಕಾಲ ಉಳಿಯುವುದಿಲ್ಲ.

* ಅಂತೆಯೇ ಆಚಾರ್ಯ ಚಾಣಕ್ಯರು ಹೇಳಿದ ಮುಖ್ಯ ವಿಷಯವೆಂದರೆ ನಿಮ್ಮ ಗುರಿ ಏನೆಂದು ಯಾರಿಗೂ ಹೇಳಬಾರದು. ಆಗ ಮಾತ್ರ ಗುರಿಯನ್ನು ತ್ವರಿತವಾಗಿ ತಲುಪಲು ಸಾಧ್ಯವಾಗುತ್ತದೆ. ಗುರಿ ಮುಟ್ಟುವವರೆಗೆ ಶಾಂತವಾಗಿರಿ.

ಅಧ್ಯಾತ್ಮ ಸಂಬಂಧಿತ ಇನ್ನಷ್ಟು ಲೇಖನಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Mon, 15 January 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್