AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಸ್ತು ಟಿಪ್ಸ್: ಟೆರೇಸ್ ಮೇಲೆ ಈ ವಸ್ತುಗಳನ್ನು ಇಡುತ್ತಿದ್ದೀರಾ? ತಕ್ಷಣ ತೆಗೆಯಿರಿ

Vastu Tips: ನಮ್ಮಲ್ಲಿ ಹೆಚ್ಚಿನವರು ನಿರುಪಯುಕ್ತ ಮತ್ತು ಒಡೆದ ಪೀಠೋಪಕರಣಗಳು, ಕುರ್ಚಿಗಳು ಮತ್ತು ಟೇಬಲ್‌ಗಳನ್ನು ಮೇಲಿನ ಮಹಡಿಯಲ್ಲಿ ಇಡುತ್ತೇವೆ. ಆದರೆ ಹೀಗೆ ಮಾಡುವುದು ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಒಡೆದ ಪೀಠೋಪಕರಣಗಳನ್ನು ಮಹಡಿಯ ಮೇಲೆ ಇಟ್ಟರೆ ಆರ್ಥಿಕ ಸಮಸ್ಯೆಗಳು ಬರುತ್ತವೆ ಎನ್ನುತ್ತಾರೆ.

ವಾಸ್ತು ಟಿಪ್ಸ್: ಟೆರೇಸ್ ಮೇಲೆ ಈ ವಸ್ತುಗಳನ್ನು ಇಡುತ್ತಿದ್ದೀರಾ? ತಕ್ಷಣ ತೆಗೆಯಿರಿ
ಟೆರೇಸ್ ಮೇಲೆ ಈ ವಸ್ತುಗಳನ್ನು ಇಡುತ್ತಿದ್ದೀರಾ? ತಕ್ಷಣ ತೆಗೆಯಿರಿ
ಸಾಧು ಶ್ರೀನಾಥ್​
|

Updated on: Jul 10, 2024 | 8:07 AM

Share

ಮನೆಯಲ್ಲಿ ಸೌಭಾಗ್ಯ, ಸಮೃದ್ಧಿ ಹಾಗೂ ಕುಟುಂಬ ಸದಸ್ಯರಲ್ಲಿ ಸೌಹಾರ್ದತೆ ಮೂಡಲು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ವಾಸ್ತು ತಜ್ಞರು. ಆದರೆ ತಿಳಿದೋ ತಿಳಿಯದೆಯೋ ಮಾಡುವ ಕೆಲವು ತಪ್ಪುಗಳು ಸಮಸ್ಯೆಗಳಿಗೆ ಕಾರಣವಾಗುತ್ತವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅಂತಹ ಒಂದು ವಿಷಯವೆಂದರೆ ಮನೆಯ ಮೇಲ್ಛಾವಣಿಯಲ್ಲಿರುವ (Terrace) ವಸ್ತುಗಳು. ವಾಸ್ತು ಶಾಸ್ತ್ರದ (Vastu Tips) ಪ್ರಕಾರ, ವಾಸ್ತು ಪಂಡಿತರು ಯಾವುದೇ ಸಂದರ್ಭದಲ್ಲೂ ಕೆಲವು ರೀತಿಯ ವಸ್ತುಗಳನ್ನು ಅಲ್ಲಿ ಇಡಬಾರದು ಎಂದು ಹೇಳುತ್ತಾರೆ. ಆ ವಸ್ತುಗಳು ಯಾವುವು ಎಂಬುದನ್ನು ಈಗ ತಿಳಿದುಕೊಳ್ಳೋಣ (Spiritual).

* ನಮ್ಮಲ್ಲಿ ಹೆಚ್ಚಿನವರು ನಿರುಪಯುಕ್ತ ಮತ್ತು ಒಡೆದ ಪೀಠೋಪಕರಣಗಳು, ಕುರ್ಚಿಗಳು ಮತ್ತು ಟೇಬಲ್‌ಗಳನ್ನು ಮೇಲಿನ ಮಹಡಿಯಲ್ಲಿ ಇಡುತ್ತೇವೆ. ಆದರೆ ಹೀಗೆ ಮಾಡುವುದು ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಒಡೆದ ಪೀಠೋಪಕರಣಗಳನ್ನು ಮಹಡಿಯ ಮೇಲೆ ಇಟ್ಟರೆ ಆರ್ಥಿಕ ಸಮಸ್ಯೆಗಳು ಬರುತ್ತವೆ ಎನ್ನುತ್ತಾರೆ.

* ಮನೆ ಕಟ್ಟುವಾಗ ಬಳಸುವ ಕಂಬಗಳನ್ನೂ/ ಬಿದಿರನ್ನು ಮಹಡಿಯ ಮೇಲೆ ಎಸೆಯುತ್ತಾರೆ. ವಾಸ್ತು ಪ್ರಕಾರ ಮನೆಯ ಮೇಲ್ಛಾವಣಿಯಲ್ಲಿ ಬಿದಿರಿನ ಬೊಂಬುಗಳು ಇರಬಾರದು. ಇದರಿಂದ ಮನೆಯಲ್ಲಿ ಕಲಹ ಉಂಟಾಗಿ ಕುಟುಂಬಸ್ಥರ ಮಾನಸಿಕ ನೆಮ್ಮದಿ ಕಳೆದುಕೊಳ್ಳುತ್ತದೆ ಎನ್ನಲಾಗಿದೆ.

Also Read: Political Crime Thriller – ಭಾರತದ ಚೊಚ್ಚಲ ಲೈಂಗಿಕ ಹಗರಣದಿಂದಾಗಿ ಆ ನಾಯಕನಿಗೆ ಪ್ರಧಾನಿ ಖುರ್ಚಿ ಜಸ್ಟ್​​ ಮಿಸ್​ ಆಗಿತ್ತು! ಸಂಜಯ್​ ಗಾಂಧಿ ‘ಕೈ’ವಾಡ ಏನಿತ್ತು?

* ಒಡೆದ ಮಡಿಕೆಗಳು ಮಹಡಿಯ ಮೇಲೆ ಕಂಡುಬರುವ ಸಾಮಾನ್ಯ ವಸ್ತುಗಳಲ್ಲಿ ಒಂದಾಗಿದೆ. ಆದರೆ ಯಾವುದೇ ಸಂದರ್ಭದಲ್ಲೂ ಒಡೆದ ಮಡಕೆಗಳನ್ನು ಮಹಡಿ ಮೇಲೆ ಹಾಕಬಾರದು ಎನ್ನುತ್ತಾರೆ ತಜ್ಞರು. ಹೀಗೆ ಮಾಡುವುದರಿಂದ ಮನೆಯಲ್ಲಿ ಅಶಾಂತಿ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.

* ನೆಲವನ್ನು ಸ್ವಚ್ಛಗೊಳಿಸಲು ಬಳಸುವ ಪೊರಕೆಯನ್ನು ಮಹಡಿಯಲ್ಲಿ ಇಡಲಾಗುತ್ತದೆ. ಆದರೆ ಹೀಗೆ ಮಾಡಿದರೆ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Also Read: 2024 July Festivals ಜುಲೈ 2024 – ಭಾರತದ ಪ್ರಸಿದ್ಧ ಹಬ್ಬಗಳ ಸಂಕ್ಷಿಪ್ತ ವಿವರ ಇಲ್ಲಿದೆ

* ಮನೆಯಲ್ಲಿ ಹಾಳಾದ ಕಬ್ಬಿಣದ ವಸ್ತುಗಳು, ತಂತಿಗಳು, ಉಪಕರಣಗಳು ಇತ್ಯಾದಿಗಳನ್ನು ಮಹಡಿಯ ಮೇಲೆ ಇಡಲಾಗುತ್ತದೆ. ಆದರೆ ತಜ್ಞರ ಪ್ರಕಾರ ಇದು ಕೂಡ ಒಳ್ಳೆಯದಲ್ಲ. ಇಂತಹ ವಸ್ತುಗಳಿಂದ ಮನೆಯಲ್ಲಿ ನೆಗೆಟಿವ್ ಎನರ್ಜಿ ಹೆಚ್ಚುತ್ತದೆ ಎನ್ನುತ್ತಾರೆ.

* ತಾರಸಿಯ ಮೇಲೆ ಕುಂಡಗಳಲ್ಲಿ ಗಿಡಗಳನ್ನು ಬೆಳೆಸುವುದು ಸಾಮಾನ್ಯ ಅಭ್ಯಾಸ. ಈ ಕುಂಡಗಳಲ್ಲಿ ಯಾವುದೇ ಸಂದರ್ಭದಲ್ಲೂ ಮುಳ್ಳಿನ ಗಿಡಗಳನ್ನು ಬೆಳೆಸಬಾರದು ಎನ್ನುತ್ತಾರೆ ತಜ್ಞರು. ಇದರಿಂದ ಆರೋಗ್ಯ ಸಮಸ್ಯೆಗಳಲ್ಲದೆ ಮನೆಯಲ್ಲಿ ಅಶಾಂತಿ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

(ಗಮನಿಸಿ: ಈ ಲೇಖನವು ರೂಢಿಗತ, ಜನಪ್ರಿಯ ನಂಬಿಕೆಗಳನ್ನು ಆಧರಿಸಿದೆ. ಈ ಸುದ್ದಿಯಲ್ಲಿ ಒಳಗೊಂಡಿರುವ ಮಾಹಿತಿ ಮತ್ತು ಸತ್ಯಗಳ ನಿಖರತೆಗೆ ಟಿವಿ9 ಜವಾಬ್ದಾರರಾಗಿರುವುದಿಲ್ಲ)

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ