AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ ಲಕ್ಷ ಸಂಬಳ ಬರುವ ಏರೋಸ್ಪೇಸ್‌ ಇಂಜಿನಿಯರಿಂಗ್‌ ಕೆಲಸ ಬಿಟ್ಟು ಸನ್ಯಾಸಿ ಆದ ವ್ಯಕ್ತಿ

ಐಐಟಿ ಬಾಂಬೆಯ ಏರೋಸ್ಪೇಸ್ ಇಂಜಿನಿಯರ್ ಅಭಯ್ ಸಿಂಗ್ ಅವರು ಲಕ್ಷಾಂತರ ರೂಪಾಯಿ ವೇತನದ ಉದ್ಯೋಗವನ್ನು ತ್ಯಜಿಸಿ ಆಧ್ಯಾತ್ಮಿಕತೆಯತ್ತ ವಾಲಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಅಭಯ್ ಸಿಂಗ್​​ ಭಾಗವಹಿಸಿದ್ದು ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಪ್ರಾಪಂಚಿಕ ಸುಖಗಳನ್ನು ತ್ಯಜಿಸಿ ಮೋಕ್ಷದ ಹುಡುಕಾಟದಲ್ಲಿ ಅವರು ತಮ್ಮ ಜೀವನವನ್ನು ಆಧ್ಯಾತ್ಮಿಕತೆಗೆ ಅರ್ಪಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಲಕ್ಷ ಲಕ್ಷ ಸಂಬಳ ಬರುವ ಏರೋಸ್ಪೇಸ್‌ ಇಂಜಿನಿಯರಿಂಗ್‌ ಕೆಲಸ ಬಿಟ್ಟು ಸನ್ಯಾಸಿ ಆದ ವ್ಯಕ್ತಿ
'IIT baba'
ಅಕ್ಷತಾ ವರ್ಕಾಡಿ
|

Updated on:Jan 16, 2025 | 7:55 AM

Share

ವಿಶ್ವದ ಅತಿದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳವು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗಿದೆ, 12 ವರ್ಷಗಳಿಗೊಮ್ಮೆ ನಡೆಯುವ ಈ ಮಹಾಕುಂಭಮೇಳದಲ್ಲಿ ದೇಶ ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವಿಶ್ವದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾದ ಆಪಲ್ ಸಹ-ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ಕೂಡ ಮಹಾಕುಂಭದಲ್ಲಿ ಭಾಗಿಯಾಗಿದ್ದಾರೆ. ವಿಶೇಷತೆ ಏನೆಂದರೆ ಸಾಕಷ್ಟು ಜನರು ತಮ್ಮ ಐಷಾರಾಮಿ ಜೀವನವನ್ನು ತೊರೆದು ಆಧ್ಯಾತ್ಮದ ಮಾರ್ಗದೆಡೆಗೆ ಮುಖ ಮಾಡುತ್ತಿದ್ದಾರೆ. ಇದೀಗ ಇದೇ ರೀತಿ ಮಹಾ ಕುಂಭಮೇಳದಲ್ಲಿ ಕಾಣಿಸಿಕೊಂಡ ಏರೋಸ್ಪೇಸ್‌ ಇಂಜಿನಿಯರ್​​ ಒಬ್ಬರ ಕಥೆ ಎಲ್ಲೆಡೆ ಸದ್ದು ಮಾಡುತ್ತಿದೆ.

ಏರೋಸ್ಪೇಸ್‌ ಇಂಜಿನಿಯರಿಂಗ್‌ ಕೆಲಸ ತೊರೆದು ಈಗ ಸಾಧು:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆಯಲ್ಲಿ ನಾಲ್ಕು ವರ್ಷಗಳ ಕಾಲ ಏರೋಸ್ಪೇಸ್ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದ ಅಭಯ್ ಸಿಂಗ್ ಈಗ ಸನ್ಯಾಸತ್ವವನ್ನು ಸ್ವೀಕರಿಸಿದ್ದಾರೆ. ತಿಂಗಳಿಗೆ ಲಕ್ಷ ಲಕ್ಷ ಸಂಬಳ ಬರುವ ಕೆಲಸವನ್ನು ತೊರೆದು ಆಧ್ಯಾತ್ಮದ ಮಾರ್ಗದೆಡೆಗೆ ನಡೆದಿದ್ದಾರೆ. ಮಹಾಕುಂಭಮೇಳದಲ್ಲಿ ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ ಇವರು ಆಧ್ಯಾತ್ಮದ ಮೂಲಕ ಜೀವನದ ಅರ್ಥವನ್ನು ಹುಡುಕುತ್ತಿರುವುದಾಗಿ ತಿಳಿಸಿದ್ದಾರೆ.

ಪ್ರಾರಂಭದಲ್ಲಿ ಎಂಜಿನಿಯರಿಂಗ್ ತೊರೆದು 4 ವರ್ಷಗಳ ಕಾಲ ಮುಂಬೈನಲ್ಲಿ ಫೋಟೋಗ್ರಫಿ ಶುರುಮಾಡಿದ್ದ ಅಭಯ್ ಸಿಂಗ್ ಟ್ರಾವೆಲ್ ಫೋಟೋಗ್ರಫಿಯಲ್ಲಿ ವೃತ್ತಿಪರ ಕೋರ್ಸ್ ಮಾಡುತ್ತಾ ಮುಂದೆ ಕೋಚಿಂಗ್ ಸೆಂಟರ್ ತೆಗೆದು ಮಕ್ಕಳಿಗೆ ಭೌತಶಾಸ್ರ್ರ ಪಾಠ ಹೇಳಿಕೊಡುತ್ತಿದ್ದರು.

ಇದನ್ನೂ ಓದಿ: ಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಪತ್ನಿ ಲಾರೆನ್

ಇದೀಗ ಕೆಲ ವರ್ಷಗಳಿಂದ ಐಷಾರಾಮಿ ಆಡಂಬರ ಜೀವನ ಹಾಗೂ ಪ್ರಾಪಂಚಿಕ ಸಂತೋಷಗಳನ್ನು ಅಭಯ್ ಸಿಂಗ್ ತ್ಯಜಿಸಿದ್ದಾರೆ. ಮೋಕ್ಷಕ್ಕೆ ಇದೇ ದಾರಿ ಅಂದುಕೊಂಡು, ಹಣ ಮುಖ್ಯವಲ್ಲ, ನೆಮ್ಮದಿ ಬಹಳ ಮುಖ್ಯ ಎಂದು ನನ್ನ ಆಸಕ್ತಿಯನ್ನು ಆಧ್ಯಾತ್ಮಿಕತೆಯ ಕಡೆಗೆ ತಿರುಗಿಸಿದ್ದಾರೆ. ತನ್ನ ಇನ್ನುಳಿದ ಜೀವನವನ್ನು ಆಧ್ಯಾತ್ಮಿಕತೆಗೆ ಮುಡಿಪಾಗಿರಿಸಿಕೊಳ್ಳುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:50 am, Thu, 16 January 25

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು