Viral Video: ಕಣ್ಣು ಮಿಟುಕಿಸುತ್ತಾ ಮುಗುಳ್ನಕ್ಕ ಬಾಲರಾಮನ ವಿಗ್ರಹ, ಮೈ ರೋಮಾಂಚನಗೊಳಿಸಿದ ಎಐ ವಿಡಿಯೋ 

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಕಾರ್ಯಕ್ರಮವು ಸಾಂಗವಾಗಿ ನೆರವೇರಿದೆ. ಸೋಮವಾರದಂದು ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ  ನಡೆದಿದ್ದು, ಬಾಲ ರಾಮನ ವಿಗ್ರಹವನ್ನು ಕಂಡು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ನಾವೇ ಧನ್ಯರು ಎಂದು ರಾಮ ಭಕ್ತರು ಭಾವುಕರಾಗಿದ್ದಾರೆ.  ಇದೀಗ ಬಾಲ ರಾಮನ ಸುಂದರ ವಿಗ್ರಹದ ಜೊತೆಗೆ, ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಬಾಲರಾಮನ ವಿಗ್ರಹವು ಕಣ್ಣು ಮಿಟುಕಿಸುತ್ತಾ ಮುಗುಳ್ನಗೆ ಬೀರುತ್ತಿರುವ  ಎ.ಐ ಜನರೇಟೆಡ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. 

Viral Video: ಕಣ್ಣು ಮಿಟುಕಿಸುತ್ತಾ ಮುಗುಳ್ನಕ್ಕ ಬಾಲರಾಮನ ವಿಗ್ರಹ, ಮೈ ರೋಮಾಂಚನಗೊಳಿಸಿದ ಎಐ ವಿಡಿಯೋ 
Edited By:

Updated on: Jan 23, 2024 | 4:39 PM

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಿನಿಂದ ಕೋಟ್ಯಾಂತರ ಹಿಂದುಗಳು  ಪ್ರಭು ಶ್ರೀರಾಮನನ್ನು ಕಣ್ತುಂಬಿಕೊಳ್ಳಲು ಬಹಳ ಕಾತುರದಿಂದ ಕಾಯುತ್ತಿದ್ದರು. ಇದೀಗ  ಭವ್ಯ ರಾಮ ಮಂದಿರದ ಕನಸು  ಸಾಕಾರಗೊಂಡಿದ್ದು, ಸೋಮವಾರಂದು ಶುಭ ಅಭಿಜಿತ್ ಮುಹೂರ್ತದಲ್ಲಿ ಪ್ರಭು ಶ್ರೀರಾಮನು ಬಾಲ ರಾಮನಾಗಿ ಅಯೋಧ್ಯೆಯ ರಾಮ ಮಂದಿರ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ.  ಈ ಒಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ನಾವೇ ಧನ್ಯರ ಎಂದು ರಾಮ ಭಕ್ತರು ಭಾವುಕರಾಗಿದ್ದಾರೆ. ಅಲ್ಲದೆ  ಬಾಲ ರಾಮನ ಸುಂದರ ಮೂರ್ತಿಯನ್ನು ಕಂಡು ರಾಮ ಭಕ್ತರ ಕಣ್ಣಲ್ಲಿ ಆನಂದ ಭಾಷ್ಪವೇ ಹರಿದಿದೆ.  ಸಾಮಾಜಿಕ ಜಾಲತಾಣದಲ್ಲಂತೂ ಎಲ್ಲಿ ನೋಡಿದರೂ ಬಾಲ ರಾಮನ ವಿಗ್ರಹದ ಸುಂದರ ಪೋಟೋಗಳೇ ಹರಿದಾಡುತ್ತಿವೆ. ಈ ನಡುವೆ ಕಲಾವಿದರೊಬ್ಬರು ಎ.ಐ ತಂತ್ರಜ್ಞಾನವನ್ನು ಬಳಸಿ ತಯಾರಿಸಿದಂತಹ ಬಾಲ ರಾಮನ ಮೂರ್ತಿಯ  ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕಲಾವಿದನ ಕಲ್ಪನೆಯಲ್ಲಿ ಮೂಡಿದ ನಗು ಮೊಗದ ಬಾಲ ರಾಮನನ್ನು ಕಂಡು ನೆಟ್ಟಿಗರು  ಮನಸೋತಿದ್ದಾರೆ.

@happymi ಎಂಬ X ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಕಲಾವಿದರೊಬ್ಬರು ಎ.ಐ ತಂತ್ರಜ್ಞಾನವನ್ನು ಬಳಸಿ ತಯಾರಿಸಿದಂತ ರಾಮ ಲಲ್ಲಾ ಮೂರ್ತಿಯು  ಸುಂದರ ವಿಡಿಯೋವೊಂದನ್ನು ಕಾಣಬಹುದು.

ವೈರಲ್ ವಿಡಿಯೋದಲ್ಲಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡಂತಹ ಬಾಲ ರಾಮನ ಮೂರ್ತಿಯು ಕಣ್ಣು ಮಿಟುಕಿಸುತ್ತಾ, ಮುಗುಳ್ನಗೆ ಬೀರುತ್ತಿರುವ ಮನಮೋಹಕ ದೃಶ್ಯವನ್ನು ಕಾಣಬಹುದು. ಬಾಲ ರಾಮನ ಈ ಸುಂದರ  ವಿಡಿಯೋವನ್ನು ಕಂಡು ಮೈ ರೋಮಾಂಚನಗೊಂಡಿತು ಎಂದು ನೆಟ್ಟಿಗರು  ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಮಕ್ಕಳು ಮಾತ್ರ ಅಲ್ಲ, ಈ ನಾಯಿ ಮರಿಗೂ ಮೊಬೈಲ್​ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಮಾಡಲ್ಲ!

ಜನವರಿ 22 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 40 ಸಾವಿರಕ್ಕೂ ಅಧಿಕ ಲೈಕ್ಸ್ಗಳನ್ನು ಪಡದುಕೊಂಡಿದೆ. ಹಾಗೂ ನೆಟ್ಟಿಗರು ಕಮೆಂಟ್ಸ್ ಮಾಡುವ ಮೂಲಕ  ಬಾಲ ರಾಮನ ವಿಗ್ರಹದ  ಎ.ಐ ಜನರೇಟೆಡ್ ವಿಡಿಯೋಗೆ ಭಾರಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 23 January 24

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us