AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದವರು ಏನು ಮಾಡಬೇಕು?

ಚಿನ್ನ ಈಗ ತುಂಬಾ ದುಬಾರಿಯಾಗಿರುವುದರಿಂದ, ಎಲ್ಲರಿಗೂ ಖರೀದಿಸಲು ಸಾಧ್ಯವಾಗುವುದಿಲ್ಲ ಹಾಗಂತ ಅಂತವರು ನಿರಾಶೆಗೊಳ್ಳುವ ಅಗತ್ಯವಿಲ್ಲ. ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದಿದ್ದರೆ, ಇತರ ಕೆಲವು ಮಂಗಳಕರ ವಸ್ತುಗಳನ್ನು ಖರೀದಿಸುವ ಮೂಲಕ ನೀವು ಶುಭ ಫಲಗಳನ್ನು ಪಡೆಯಬಹುದು. ಅಕ್ಷಯ ತೃತೀಯದಂದು ಈ ವಸ್ತುಗಳನ್ನು ಖರೀದಿಸುವುದು ಚಿನ್ನವನ್ನು ತಂದಷ್ಟೇ ಫಲಪ್ರದವೆಂದು ಶಾಸ್ತ್ರ ಹೇಳುತ್ತದೆ. ಹಾಗಾದರೆ ಈ ದಿನ ಯಾವ ವಸ್ತುಗಳನ್ನು ಖರೀದಿ ಮಾಡಬೇಕು? ಇಲ್ಲಿದೆ ಮಾಹಿತಿ.

Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದವರು ಏನು ಮಾಡಬೇಕು?
ಪ್ರೀತಿ ಭಟ್​, ಗುಣವಂತೆ
| Edited By: |

Updated on:May 08, 2024 | 12:04 PM

Share

ಈ ವರ್ಷ, ಅಕ್ಷಯ ತೃತೀಯವು ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಅಂದರೆ ಮೇ. 10 ರ ಶುಕ್ರವಾರದಂದು ಬರುತ್ತದೆ. ಈ ದಿನವನ್ನು ಹಿಂದೂ ಧರ್ಮದಲ್ಲಿ ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಅಕ್ಷಯ ತೃತೀಯದಂದು, (Akshaya Tritiya) ದೇವರ ಪೂಜೆ ಮಾಡುವುದು, ಶುಭ ಚಟುವಟಿಕೆಗಳನ್ನು ಪ್ರಾರಂಭಿಸುವುದು ಮತ್ತು ಚಿನ್ನವನ್ನು ಖರೀದಿಸುವುದಕ್ಕೆ ಬಹಳ ಮಹತ್ವವಿದೆ. ಈ ದಿನ ಚಿನ್ನ ಖರೀದಿ ಮಾಡುವುದರಿಂದ ಮನೆಯಲ್ಲಿ ಸದಾಕಾಲ ಸಂಪತ್ತು ಹೇರಳವಾಗಿರುತ್ತದೆ ಜೊತೆಗೆ ಲಕ್ಷ್ಮೀ ದೇವಿಯ ಆಶೀರ್ವಾದವನ್ನು ಕೂಡ ಪಡೆದುಕೊಳ್ಳಬಹುದು. ಆದರೆ ಚಿನ್ನ ಈಗ ತುಂಬಾ ದುಬಾರಿಯಾಗಿರುವುದರಿಂದ, ಎಲ್ಲರಿಗೂ ಖರೀದಿಸಲು ಸಾಧ್ಯವಾಗುವುದಿಲ್ಲ ಹಾಗಂತ ಅಂತವರು ನಿರಾಶೆಗೊಳ್ಳುವ ಅಗತ್ಯವಿಲ್ಲ. ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದಿದ್ದರೆ, ಇತರ ಕೆಲವು ಮಂಗಳಕರ ವಸ್ತುಗಳನ್ನು ಖರೀದಿಸುವ ಮೂಲಕ ನೀವು ಶುಭ ಫಲಗಳನ್ನು ಪಡೆಯಬಹುದು. ಅಕ್ಷಯ ತೃತೀಯದಂದು ಈ ವಸ್ತುಗಳನ್ನು ಖರೀದಿಸುವುದು ಚಿನ್ನವನ್ನು ತಂದಷ್ಟೇ ಫಲಪ್ರದವೆಂದು ಶಾಸ್ತ್ರ ಹೇಳುತ್ತದೆ. ಹಾಗಾದರೆ ಈ ದಿನ ಯಾವ ವಸ್ತುಗಳನ್ನು ಖರೀದಿ ಮಾಡಬೇಕು? ಇಲ್ಲಿದೆ ಮಾಹಿತಿ.

ಗೋವುಗಳು: ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು, ಅಕ್ಷಯ ತೃತೀಯದಂದು ನೀವು ಹಸುಗಳನ್ನು ಖರೀದಿಸಬಹುದು ಏಕೆಂದರೆ ಲಕ್ಷ್ಮೀ ದೇವಿಗೆ ಗೋವುಗಳು ಎಂದರೆ ತುಂಬಾ ಪ್ರೀತಿ. ಇದು ಸಾಧ್ಯವಾಗದಿದ್ದಲ್ಲಿ ಗೋವಿನ ಲೋಹ ಅಥವಾ ಬೆಳ್ಳಿಯ ಮೂರ್ತಿಯನ್ನು ಮನೆಗೆ ತನ್ನಿ. ಬಳಿಕ ಅದನ್ನು ಲಕ್ಷ್ಮೀ ದೇವಿಯ ಪಾದದ ಬಳಿ ಅರ್ಪಿಸಿ, ಪೂಜೆ ಮಾಡಿ. ನಂತರ ಅದನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಸುರಕ್ಷಿತ ಜಾಗದಲ್ಲಿ ಅಥವಾ ಹಣವನ್ನು ಇಡುವ ಸ್ಥಳದಲ್ಲಿ ಇರಿಸಿ.

ಬೆಳ್ಳಿ: ಚಿನ್ನದಂತೆ, ಬೆಳ್ಳಿಯನ್ನು ಸಹ ಮಂಗಳಕರ ಎನ್ನಲಾಗುತ್ತದೆ. ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದಿದ್ದರೆ ನೀವು ಬೆಳ್ಳಿ ನಾಣ್ಯ, ಬೆಳ್ಳಿ ವಿಗ್ರಹ ಅಥವಾ ಯಾವುದಾದರೂ ಬೆಳ್ಳಿಯ ವಸ್ತುವನ್ನು ಖರೀದಿಸಬಹುದು.

ಇದನ್ನೂ ಓದಿ; ನೆನಪಿರಲಿ! ನಿಮ್ಮ ಈ 5 ಅಭ್ಯಾಸಗಳು ಶನಿ ದೇವರನ್ನು ಕೋಪಗೊಳ್ಳುವಂತೆ ಮಾಡುತ್ತದೆ

ಮಣ್ಣಿನ ಮಡಕೆ: ಅಕ್ಷಯ ತೃತೀಯದಂದು ಮಣ್ಣಿನ ಮಡಕೆಯನ್ನು ಖರೀದಿಸುವುದು ಸಹ ತುಂಬಾ ಮಂಗಳಕರವಾಗಿದೆ. ಇದನ್ನು ಮನೆಗೆ ತಂದ ಬಳಿಕ ಅದಕ್ಕೆ ಪಾನಕ ತುಂಬಿಸಿ ದಾನ ಮಾಡಿ. ಈ ದಿನ ನೀರನ್ನು ದಾನ ಮಾಡುವುದು ಕೂಡ ತುಂಬಾ ಮಂಗಳಕರವಾಗಿದೆ.

ಬಾರ್ಲಿ: ಅಕ್ಷಯ ತೃತೀಯದಂದು ಬಾರ್ಲಿಯನ್ನು ಖರೀದಿಸುವುದು ಚಿನ್ನವನ್ನು ಖರೀದಿಸುವುದಕ್ಕಿಂತ ಹೆಚ್ಚು ಫಲಪ್ರದವಾಗಿದೆ. ಏಕೆಂದರೆ ಇದನ್ನು ಬ್ರಹ್ಮಾಂಡದ ಮೊದಲ ಆಹಾರವೆಂದು ಹೇಳಲಾಗುತ್ತದೆ. ಜೊತೆಗೆ ಬಾರ್ಲಿಯನ್ನು ವಿಷ್ಣುವಿನ ಸಂಕೇತವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಈ ದಿನ ಬಾರ್ಲಿಯನ್ನು ಕೂಡ ಖರೀದಿ ಮಾಡಬಹುದು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:36 pm, Sat, 27 April 24

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು