AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amalaki Ekadashi 2024: ಈ ಏಕಾದಶಿಯಂದು ನೆಲ್ಲಿಕಾಯಿ ದಾನ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?

ಅಮಲಕಿ ಏಕಾದಶಿ ಉಪವಾಸ ಮಾಡುವುದರಿಂದ ವಿಷ್ಣುವಿನ ವಿಶೇಷ ಆಶೀರ್ವಾದವನ್ನು ಪಡೆದುಕೊಳ್ಳಬಹುದಾಗಿದೆ ಜೊತೆಗೆ ಕುಟುಂಬದಲ್ಲಿ ಸಂತೋಷ, ಶಾಂತಿ, ಸಮೃದ್ಧಿ ಯಾವಾಗಲೂ ಇರುತ್ತದೆ. ಈ ದಿನ ನೆಲ್ಲಿಕಾಯಿಯನ್ನು ಮನೆಗೆ ತಂದು ದೇವರ ಮನೆಯಲ್ಲಿ ಇಟ್ಟು ಪೂಜಿಸಲಾಗುತ್ತದೆ. ಹಾಗಾದರೆ ಈ ಬಾರಿ ಅಮಲಕಿ ಏಕಾದಶಿಯನ್ನು ಯಾವಾಗ ಆಚರಿಸಲಾಗುತ್ತದೆ? ಪೂಜಾ ವಿಧಾನ ಹೇಗಿರಬೇಕು ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

Amalaki Ekadashi 2024: ಈ ಏಕಾದಶಿಯಂದು ನೆಲ್ಲಿಕಾಯಿ ದಾನ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?
Amalaki Ekadashi 2024
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ|

Updated on:Mar 13, 2024 | 6:20 PM

Share

ಸನಾತನ ಧರ್ಮದಲ್ಲಿ ಏಕಾದಶಿ ಉಪವಾಸವನ್ನು ಅತ್ಯಂತ ವಿಶೇಷವೆಂದು ಪರಿಗಣಿಸಲಾಗಿದೆ. ನಿಮಗೆ ತಿಳಿದಿರುವಂತೆ ಏಕಾದಶಿ ವರ್ಷದಲ್ಲಿ 24 ಬಾರಿ ಮತ್ತು ತಿಂಗಳಲ್ಲಿ ಎರಡು ಬಾರಿ ಬರುತ್ತದೆ. ಫಾಲ್ಗುಣ ಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಅಮಲಕಿ ಏಕಾದಶಿ ಅಥವಾ ಆಮ್ಲಾ ಏಕಾದಶಿ ಎಂದು ಕರೆಯಲಾಗುತ್ತದೆ. ಅಮಲಕಿ ಏಕಾದಶಿ ಉಪವಾಸ ಮಾಡುವುದರಿಂದ ವಿಷ್ಣುವಿನ ವಿಶೇಷ ಆಶೀರ್ವಾದವನ್ನು ಪಡೆದುಕೊಳ್ಳಬಹುದಾಗಿದೆ ಜೊತೆಗೆ ಕುಟುಂಬದಲ್ಲಿ ಸಂತೋಷ, ಶಾಂತಿ, ಸಮೃದ್ಧಿ ಯಾವಾಗಲೂ ಇರುತ್ತದೆ. ಈ ದಿನ ನೆಲ್ಲಿಕಾಯಿಯನ್ನು ಮನೆಗೆ ತಂದು ದೇವರ ಮನೆಯಲ್ಲಿ ಇಟ್ಟು ಪೂಜಿಸಲಾಗುತ್ತದೆ. ಹಾಗಾದರೆ ಈ ಬಾರಿ ಅಮಲಕಿ ಏಕಾದಶಿಯನ್ನು ಯಾವಾಗ ಆಚರಿಸಲಾಗುತ್ತದೆ? ಪೂಜಾ ವಿಧಾನ ಹೇಗಿರಬೇಕು ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಮಲಕಿ ಏಕಾದಶಿ ಮಾರ್ಚ್ 20 ಅಥವಾ 21?

ಫಾಲ್ಗುಣ ಮಾಸದ ಶುಕ್ಲ ಪಕ್ಷದ ಏಕಾದಶಿಯು ಮಾ. 20 ರಂದು ಬೆಳಿಗ್ಗೆ 12:21 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮರುದಿನ ಮಾ. 21 ರಂದು ಬೆಳಿಗ್ಗೆ 02:22 ಕ್ಕೆ ಕೊನೆಗೊಳ್ಳುತ್ತದೆ. ಹಾಗಾಗಿ ಅಮಲಕಿ ಏಕಾದಶಿ ಉಪವಾಸವನ್ನು ಮಾರ್ಚ್ 20 ರಂದು ಆಚರಿಸಲಾಗುತ್ತದೆ. ಈ ದಿನದ ಪೂಜಾ ಮುಹೂರ್ತವು ಬೆಳಿಗ್ಗೆ 06.25 ರಿಂದ ಬೆಳಿಗ್ಗೆ 09.27ರ ತನಕ ಇರುತ್ತದೆ.

ಅಮಲಕಿ ಏಕಾದಶಿಯ ದಿನ ನೆಲ್ಲಿಕಾಯಿಯನ್ನು ಯಾಕೆ ಪೂಜಿಸಲಾಗುತ್ತದೆ?

ನೆಲ್ಲಿಕಾಯಿಯನ್ನು ಪೂಜಾ ಆಚರಣೆಗಳಲ್ಲಿ ಮಾತ್ರವಲ್ಲದೆ ಆಯುರ್ವೇದದಲ್ಲಿಯೂ ಮುಖ್ಯವೆಂದು ಪರಿಗಣಿಸಲಾಗಿದೆ. ನೆಲ್ಲಿಕಾಯಿ ವಿಷ್ಣುವಿನಿಂದಲೇ ಹುಟ್ಟಿಕೊಂಡಿದ್ದರಿಂದ ಇದನ್ನು ಶ್ರೀಹರಿಯ ರೂಪ ಎಂದು ನಂಬಲಾಗಿದೆ. ಈ ಮರವನ್ನು ಪೂಜಿಸುವುದರಿಂದ ವಿಷ್ಣು ಮತ್ತು ಲಕ್ಷ್ಮೀ ದೇವಿ ಇಬ್ಬರೂ ಸಂತುಷ್ಟರಾಗುತ್ತಾರೆ ಎಂದು ಹೇಳಲಾಗುತ್ತದೆ. ಆಯುರ್ವೇದದ ಪ್ರಕಾರ, ಆಮ್ಲಾ ಔಷಧೀಯ ಗುಣಗಳನ್ನು ಹೊಂದಿದೆ. ಇದರ ನಿಯಮಿತ ಸೇವನೆಯಿಂದ, ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳು ಕೂಡ ದೂರವಾಗುತ್ತವೆ.

ಇದನ್ನೂ ಓದಿ: ರೋಗ ದೂರ ಮಾಡುವಲ್ಲಿ ದೊಡ್ಡ ಪತ್ರೆಯ ಗುಣ ಬಹುದೊಡ್ಡದು

ಅಮಲಕಿ ಏಕಾದಶಿ ಪೂಜಾ ವಿಧಾನ:

  • ಈ ದಿನ, ಬೆಳಿಗ್ಗೆ ಬೇಗ ಸ್ನಾನ ಮಾಡಿದ ನಂತರ, ಸ್ವಚ್ಛವಾದ ಬಟ್ಟೆಗಳನ್ನು ಧರಿಸಿ.
  • ಮನೆಯ ಸುತ್ತಮುತ್ತಲಲ್ಲಿ ನೆಲ್ಲಿಕಾಯಿಯ ಮರವಿದ್ದಲ್ಲಿ, ಅಮಲಕಿ ಏಕಾದಶಿಯಂದು ಆ ಸ್ಥಳವನ್ನು ಸ್ವಚ್ಛಗೊಳಿಸಿ ಪೂಜೆಗೆ ವ್ಯವಸ್ಥೆ ಮಾಡಿ.
  • “ಓಂ ಭಗವತೇ ವಾಸುದೇವಾಯ ನಮಃ” ಎಂಬ ಮಂತ್ರವನ್ನು ಪಠಿಸುತ್ತಾ ನೆಲ್ಲಿಕಾಯಿ ಮರ ಅಥವಾ ಗಿಡಕ್ಕೆ ನೀರು, ಅರಿಶಿನ, ಕುಂಕುಮ, ಶ್ರೀಗಂಧ, ಅಕ್ಷತೆ, ಹೂವು, ವೀಳ್ಯದೆಲೆ, ಅಡಿಕೆ ಇತ್ಯಾದಿಗಳನ್ನು ಅರ್ಪಿಸಿ.
  • ಮಣ್ಣಿನ ಹಣತೆಯಲ್ಲಿ ತುಪ್ಪದ ದೀಪವನ್ನು ಹಚ್ಚಿ.
  • ಬಳಿಕ ನಿಮ್ಮ ಮನಸ್ಸಿನಲ್ಲಿರುವುದನ್ನು ದೇವರ ಬಳಿ ಬೇಡಿಕೊಂಡು ಆರತಿ ಮಾಡಿ.
  • ಈ ದಿನ ನೆಲ್ಲಿಕಾಯಿಯನ್ನು ದಾನ ಮಾಡುವುದರಿಂದ ಲಕ್ಷ್ಮೀ ದೇವಿಯು ಮನೆಯಲ್ಲಿ ಸದಾ ನೆಲೆಸಿರುತ್ತಾಳೆ. ಅಲ್ಲದೆ ಆರ್ಥಿಕ ಸಮಸ್ಯೆ ಎದುರಾಗುವುದಿಲ್ಲ. ಹಣಕಾಸಿನ ವಿಷಯದಲ್ಲಿ ಮನ ಹಾನಿಯಾಗುವುದು ತಪ್ಪುತ್ತದೆ ಎಂಬ ನಂಬಿಕೆ ಇದೆ.
  • ಈ ದಿನ ಉಪವಾಸ ಮಾಡುವವರು ಮಾಂಸಾಹಾರ ಸೇವನೆ ಮಾಡಬಾರದು. ಅಲ್ಲದೆ ಅಕ್ಕಿಯಿಂದ ಮಾಡಿದ ಯಾವುದೇ ಪದಾರ್ಥಗಳನ್ನು ಕೂಡ ಸೇವನೆ ಮಾಡಬಾರದು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:16 pm, Wed, 13 March 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ